ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದಾವಣಗೆರೆಯಲ್ಲಿ ಮಾ.25ರಂದು ಬಿಜೆಪಿ ಮಹಾ ಸಂಗಮ ಸಮಾವೇಶ ನಡೆಯಲಿದ್ದು, 10 ಲಕ್ಷಕ್ಕೂ ಅಧಿಕ ಜನ ಭಾಗವಹಿಸಲಿದ್ದು, ಪ್ರಧಾನಿ ಮೋದಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ MLA Eshwarappa ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ಸೇರಿದಂತೆ ಎಲ್ಲಾ ಸಂಘಟನಾತ್ಮಕ ಕಾರ್ಯಕ್ರಮಗಳಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ನಿರೀಕ್ಷೆಗೂ ಮೀರಿ ಜನ ಬೆಂಬಲಿಸಿದ್ದಾರೆ. ಪೂರ್ಣ ಬಹುಮತ ಪಡೆದು ಬಿಜೆಪಿ ಅಧಿಕಾರಕ್ಕೆ ಬರುವುದು ನಿಚ್ಚಳವಾಗಿದೆ ಎಂದರು.

ಆಯನೂರು ಮಂಜುನಾಥ್ ಹೇಳಿಕೆಗಳಿಗೆ ನಾನು ಪ್ರತಿಕ್ರಿಯಿಸುವುದಿಲ್ಲ. ನಮ್ಮ ಪಕ್ಷದಲ್ಲಿ ಸ್ಪರ್ಧೆಯ ಬಗ್ಗೆ ಕೇಂದ್ರದ ನಾಯಕರು ತೀರ್ಮಾನಿಸುತ್ತಾರೆ. ಕೇಂದ್ರದ ನಾಯಕರ ಎಲ್ಲಾ ತೀರ್ಮಾನಕ್ಕೆ ಪಕ್ಷದ ಕಾರ್ಯಕರ್ತನಾಗಿ ನಾನು ಬದ್ಧನಾಗಿದ್ದೇನೆ. ವಿವಿಧ ಕಡೆಗಳಿಂದ ನೂರಾರು ಪ್ರತಿಕ್ರಿಯೆ ಬರುವುದು ಸ್ವಾಭಾವಿಕ. ಅದಕ್ಕೆ ನಮ್ಮ ಅಧ್ಯಕ್ಷರು ಉತ್ತರಿಸುತ್ತಾರೆ ಎಂದರು.












Discussion about this post