No Result
View All Result
Sagara Engulfed In The Ocean of Music
English Articles

Sagara Engulfed In The Ocean of Music

by ಕಲ್ಪ ನ್ಯೂಸ್
March 23, 2026
0

Kalpa Media House  |  Special Article by Rasikapriya  | An invigorating music festival held recently at Sagara, Shimoga Dist., took...

Read moreDetails
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
  • Advertise With Us
  • Grievances
  • About Us
  • Contact Us
Monday, March 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 10, 2026
in ಶಿವಮೊಗ್ಗ
0
ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕೇಂದ್ರ ಸರ್ಕಾರ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆ (ಮನರೇಗಾ)ಯ #Rural Employment Guarantee Scheme ಹೆಸರನ್ನು ಮಾತ್ರ ಬದಲಾವಣೆ ಮಾಡುತ್ತಿಲ್ಲ. ಅದರ ಬದಲು ಯೋಜನೆಯನ್ನೇ ರದ್ದುಪಡಿಸಲಾಗಿದೆ ಈ ಕರಾಳ ಮಸೂದೆ ವಿರುದ್ಧ ಗ್ರಾ.ಪಂ. ಮಟ್ಟದಿಂದ ಕಾಂಗ್ರೆಸ್ ಹೋರಾಟವನ್ನು ಕೈಗೆತ್ತಿಕೊಳ್ಳುತ್ತದೆ ಎಂದು ಸಚಿವ ಮಧುಬಂಗಾರಪ್ಪ #Minister Madhu Bangarappa ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಪ್ರತಿಯೊಂದು ಹಂತದಲ್ಲೂ ಗಾಂಧೀಜಿಯವರ #Mahathma Gandhiji ಹೆಸರನ್ನೇ ನಾಶಮಾಡಲು ಹೊರಟಿದೆ. ಹೇ ರಾಮ್ ಎಂದು ಹೇಳಿದ್ದ ಗಾಂಧೀಜಿಯವರನ್ನೇ ನಾಶಮಾಡಲು ಹೊರಟಿರುವುದು ಅತ್ಯಂತ ಖಂಡನೀಯ. ಇದಕ್ಕೆ ಟೀಕಿಸಿದರೆ ಅವರು ಹಾರಿಕೆಗಳ ಉತ್ತರಗಳನ್ನು ಕೊಡುತ್ತಾರೆ. ಗಾಂಧೀಜಿಯವರು ಕಂಡ ಗ್ರಾಮೀಣ ಅಭಿವೃದ್ಧಿಯ ಕನಸುಗಳೇ ನುಚ್ಚು ನೂರಾಗುತ್ತಿವೆ. ಮನರೇಗಾ ಯೋಜನೆಯನ್ನು ರದ್ದುಪಡಿಸುವ ಮೂಲಕ ಗ್ರಾಮ ಪಂಚಾಯ್ತಿಗಳಿಗೆ ನೀಡಿದ್ದ ಶಕ್ತಿಯನ್ನೇ ಅದು ಕಸಿದುಕೊಳ್ಳುತ್ತಿದೆ. ಗೋಡ್ಸೆಯವರು ಒಂದು ಬಾರಿ ಗಾಂಧೀಜಿಯವರನ್ನು ಕೊಂದರೆ ಈ ಬಿಜೆಪಿಯವರು ಪ್ರತಿದಿನ ಗಾಂಧೀಜಿಯವರನ್ನು ಹತ್ಯೆ ಮಾಡುತ್ತಿದ್ದಾರೆ ಇವರೇ ನಿಜವಾದ ದೇಶದ್ರೋಹಿಗಳು. ನಮ್ಮ ಹೃದಯದಲ್ಲಿ ರಾಮನೂ ಇದ್ದಾನೆ. ಕೃಷ್ಣನೂ ಇದ್ದಾನೆ. ಜೊತೆಗೆ ರಹೀಂಮನೂ ಇದ್ದಾನೆ ಎಂದರು.
ಉದ್ಯೋಗಖಾತ್ರಿ ಯೋಜನೆಯು ಗ್ರಾಮೀಣ ಭಾಗದಲ್ಲಿ ಉದ್ಯೋಗದಾತರಿಗೆ ಕೆಲಸವನ್ನು ನೀಡಿತ್ತು. ಬಡವರಿಗೆ ಶ್ರಮಿಕರಿಗೆ ಉದ್ಯೋಗ ನೀಡಿತ್ತು. ದುಡಿಯುವ ಕೈಗಳಿಗೆ ಕೆಲಸ ಕೊಟ್ಟಿತ್ತು. ಇದೊಂದು ಅದ್ಬುತವಾದ ಯೋಜನೆಯಾಗಿತ್ತು. ಈಗ ಈ ಯೋಜನೆಯನ್ನೇ ರದ್ದುಪಡಿಸಿ ಉದ್ಯೋಗದ ಹಕ್ಕನ್ನು ಕಸಿದುಕೊಳ್ಳಲಾಗಿದೆ. ಇದೀಗ ಗ್ರಾಮ ಪಂಚಾಯ್ತಿಗಳ ಕಾಮಗಾರಿಗಳು ಕೇಂದ್ರ ಸರ್ಕಾರದ ನಿರ್ಧಾರದ ಮೇಲೆ ಅವಲಂಭಿತವಾಗಲಿದೆ. ಕೇಂದ್ರ ಸರ್ಕಾರದಿಂದ ಅಧಿಸೂಚಿಸಲ್ಪಟ್ಟ ಗ್ರಾಮಗಳಲ್ಲಿನ ಕಾರ್ಮಿಕರು ಮಾತ್ರ ಇದರ ಲಾಭ ಪಡೆಯುತ್ತಾರೆ. ಅಧಿಸೂಚನೆಯಿಂದ ಹೊರಗುಳಿದ ಗ್ರಾಮಗಳ ಕಾರ್ಮಿಕರು ಉದ್ಯೋಗದಿಂದ ವಂಚಿತರಾಗುತ್ತಾರೆ. ಮತ್ತು ಎಲ್ಲಾ ದಿನಗಳಲ್ಲೂ ಕೆಲಸ ಸಿಗುವುದಿಲ್ಲ. ಅಲ್ಲದೆ ಕೂಲಿಗೆ ಕಾತರಿಯೂ ಇಲ್ಲ. ಇದು ಕೇವಲ ಕೇಂದ್ರ ಸರ್ಕಾರ ಪಂಚಾಯ್ತಿಗಳಿಗೆ ನೀಡುವ ಅನುದಾನದ ಮೇಲೆ ನಿರ್ಧಾರವಾಗುತ್ತದೆ ಎಂದು ಆರೋಪಿಸಿದರು.

ಈ ಯೋಜನೆಯ ವೇತನವನ್ನು ಈ ಹಿಂದೆ ಕೇಂದ್ರ ಸರ್ಕಾರವೇ ಭರಿಸುತ್ತಿತ್ತು. ಈಗ ವೇತನವನ್ನು ವಿಭಜಿಸಿ ಕೇಂದ್ರ ಸರ್ಕಾರ ಶೇ.60, ರಾಜ್ಯ ಸರ್ಕಾರ ಶೇ.40ರಷ್ಟು ನೀಡಬೇಕಾಗಿದೆ. ಕರ್ನಾಟಕ ರಾಜ್ಯವೂ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಕೇಂದ್ರದಿಂದ ಬರುವ ಅನುದಾನದ ಕೊರತೆಯಿದೆ. ಇವು ಹೇಗೆ ತಾನೇ ಹೆಚ್ಚುವರಿ ಹೋರಲು ಸಾಧ್ಯ ? ಅಲ್ಲದೆ ರಾಜ್ಯದ ಪಾಲಿನ ಹಣವನ್ನು ಕೇಂದ್ರ ಕೊಡುತ್ತಿಲ್ಲ. ಈಗಾಗಲೇ ಹಲವು ಬಾರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರೂ ಕೂಡ ಅದು ಮಲತಾಯಿ ಧೋರಣೆ ತೋರುತ್ತಿದೆ. ಈಗ ಇದು ಮತ್ತೊಂದು ಹೊರೆಯಾಗಲಿದೆ ಎಂದು ದೂರಿದರು.
ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಜಿ ರಾಮ್‌ಜೀ ಯೋಜನೆಯಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗುತ್ತದೆ. ಕನಿಷ್ಠ ವೇತನದ ರಕ್ಷಣೆಯಿಲ್ಲದೆ ಕಾರ್ಮಿಕರು ಸಂಕಷ್ಟು ಅನುಭವಿಸುತ್ತಾರೆ. ಉದ್ಯೋಗದಲ್ಲಿ ಮಹಿಳೆಯರ ಪಾಲುದಾರಿಕೆ ಇಳಿಕೆಯಾಗುತ್ತದೆ. ಪಂಚಾಯ್ತಿಗಳು ಕೇವಲ ಅನುಷ್ಟಾನಗೊಳಿಸುವ ಸಂಸ್ಥೆಗಳಾಗುತ್ತವೆ. ದಲಿತ ಮತ್ತು ಆದಿವಾಸಿ ಸೇರಿದಂತೆ ಅನೇಕ ಬಡಕುಟುಂಬಗಳ ಮೇಲೆ ಅಧಿಕ ಒತ್ತಡ ಸೃಷ್ಟಿಯಾಗುತ್ತದೆ ಎಂದು ದೂರಿದರು.

ಆದ್ದರಿಂದ ವಿಕಸಿತ ಭಾರತ್ ಜಿ ರಾಮ್‌ಜೀ ಕಾಯ್ದೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು. ನರೇಗಾ ಯೋಜನೆಯನ್ನೇ ಮುಂದುವರಿಸಬೇಕು. ಜನರ ಉದ್ಯೋಗದ ಹಕ್ಕನ್ನು ಪುನರ್‌ಸ್ಥಾಪಿಸಬೇಕು. ಗ್ರಾ.ಪಂ.ಗಳನ್ನು ಗಟ್ಟಿಗೊಳಿಸಬೇಕು. ಮಾನವ ದಿನಗಳನ್ನು 150 ದಿನಗಳಿಗೆ ಹೆಚ್ಚಿಸಬೇಕು, ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷ ಗ್ರಾಮ ಪಂಚಾಯ್ತಿ ಮಟ್ಟದಿಂದ ಹೋರಾಟವನ್ನು ಕೈಗೆತ್ತಿಕೊಳ್ಳಲಾಗುತ್ತದೆ ಎಂದರು.
ಕೇರಳದಲ್ಲಿರುವ ಕನ್ನಡ ಶಾಲೆಗಳಲ್ಲಿ ಮಲೆಯಾಳಂ ಭಾಷೆ ಹೇರಿಕೆ ಮಾಡಲಾಗಿದೆ. ಈ ಕುರಿತು ಸರ್ಕಾರದ ಜೊತೆ ಸಮಾಲೋಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ದ್ವಿತೀಯ ಪಿಯು ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಶಾಲಾಗೇಣಿ ಜಮೀನಿಗೆ ಸಂಬಂಧಿಸಿದಂತೆ ಕಾಯ್ದೆ ರೂಪಿಸಲು ಈಗಾಗಲೇ ಯೋಚಿಸಿದ್ದು ಕಾನೂನು ಇಲಾಖೆಯ ಅಭಿಪ್ರಾಯವನ್ನು ಕೇಳಲಾಗಿದೆ. 1995ರ ನಂತರ ಆರಂಭವಾದ ಶಾಲೆಗಳಿಗೆ ಅನುದಾನ ನೀಡಲು ಹಣಕಾಸು ಇಲಾಖೆಗೆ ಸೂಚಿಸಲಾಗಿದೆ. ಪೋಕ್ಸೋ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಹೆಚ್ಚಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಆದರೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೇವಲ ಶಿವಮೊಗ್ಗ ಜಿಲ್ಲೆಯವರು ಮಾತ್ರ  ಇಲ್ಲ, ಸುಮಾರು ೨೭ ತಾಲ್ಲೂಕುಗಳ ವ್ಯಾಪ್ತಿ ಇಲ್ಲಿದೆ. ಹಾಗಾಗಿ ಈ ಸಂಖ್ಯೆ ಜಾಸ್ತಿಯಾಗಿದೆ ಎಂದು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರುಗಳಾದ ಆರ್. ಪ್ರಸನ್ನಕುಮಾರ್, ಚೇತನ್‌ಗೌಡ, ರಮೇಶ್ ಶಂಕರಘಟ್ಟ, ಚಂದ್ರಭೂಪಾಲ್, ವೈ.ಹೆಚ್. ನಾಗರಾಜ್, ಜಿ.ಡಿ. ಮಂಜುನಾಥ್, ಶರತ್ ಮರಿಯಪ್ಪ, ರವಿಕುಮಾರ್, ದೇವಿಕುಮಾರ್, ಕಲಗೋಡು ರತ್ನಾಕರ್, ಸೈಯದ್ ವಾಹಿದ್ ಅಡ್ಡು, ಚಿನ್ನಪ್ಪ, ಯು. ಶಿವಾನಂದ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMahathma GandhijiMalnadNewsMinister Madhu BangarappaNews in KannadaNews KannadaRural Employment Guarantee SchemeShimogaShivamoggaNewsಗ್ರಾಮೀಣ ಉದ್ಯೋಗಖಾತ್ರಿ ಯೋಜನೆಮಲೆನಾಡು_ಸುದ್ಧಿಮಹಾತ್ಮಗಾಂಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಮಧುಬಂಗಾರಪ್ಪ
Share198Tweet124Send
Previous Post

ಕರ್ನಾಟಕದಲ್ಲಿ ಬಾಂಗ್ಲಾದೇಶಿಗರು | ರಾಷ್ಟ್ರದ ಸಮಗ್ರತೆ – ಭದ್ರತೆಗೇ ದೊಡ್ಡ ಸವಾಲಾದ ಆಡಳಿತ ವೈಫಲ್ಯ

Next Post

ಜ.14-15 | ಮಕರ ಸಂಕ್ರಾಂತಿ – ಶ್ರೀಗಳ ಪೀಠಾರೋಹಣ ವರ್ಧಂತ್ಯೋತ್ಸವ ಸಮಾರಂಭ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜ.14-15 | ಮಕರ ಸಂಕ್ರಾಂತಿ – ಶ್ರೀಗಳ ಪೀಠಾರೋಹಣ ವರ್ಧಂತ್ಯೋತ್ಸವ ಸಮಾರಂಭ

ಜ.14-15 | ಮಕರ ಸಂಕ್ರಾಂತಿ - ಶ್ರೀಗಳ ಪೀಠಾರೋಹಣ ವರ್ಧಂತ್ಯೋತ್ಸವ ಸಮಾರಂಭ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಮುಳ್ಳಿನಿಂದ ಶಾಲನ್ನು ಬಿಡಿಸಿ ಹೊದೆಸುವ ಮೂಲಕ ಕಷ್ಟದಲ್ಲಿದ್ದ ಕುಟುಂಬಕ್ಕೆ ರಾಮಚಂದ್ರಾಪುರ ಮಠ ಶ್ರೀರಕ್ಷೆ

ಮುಳ್ಳಿನಿಂದ ಶಾಲನ್ನು ಬಿಡಿಸಿ ಹೊದೆಸುವ ಮೂಲಕ ಕಷ್ಟದಲ್ಲಿದ್ದ ಕುಟುಂಬಕ್ಕೆ ರಾಮಚಂದ್ರಾಪುರ ಮಠ ಶ್ರೀರಕ್ಷೆ

March 23, 2026
Sagara Engulfed In The Ocean of Music

Sagara Engulfed In The Ocean of Music

March 23, 2026
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ಹುಬ್ಬಳ್ಳಿ-ವಿಜಯಪುರ ನಡುವಿನ ರೈಲುಗಳ ಸೇವೆ ಪೂರ್ಣ ಪುನಾರಂಭ

March 23, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಬೆಂಗಳೂರು-ತಿರುಪತಿ, ಸುಬ್ರಹ್ಮಣ್ಯ-ಮಂಗಳೂರು ಸೇರಿ 9 ಪ್ರಮುಖ ರೈಲುಗಳ ಮಹತ್ವದ ಅಪ್ಡೇಟ್

March 23, 2026
ಸಮೀಕ್ಷಾ ರೆಡ್ಡಿ ಸಾವಿನ ಪ್ರಕರಣ | ಲಯನ್ ಸಫಾರಿಗೆ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರ ಭೇಟಿ

ಸಮೀಕ್ಷಾ ರೆಡ್ಡಿ ಸಾವಿನ ಪ್ರಕರಣ | ಲಯನ್ ಸಫಾರಿಗೆ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರ ಭೇಟಿ

March 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL