ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತಾಲೂಕಿನ ಕುಂಸಿಯಲ್ಲಿ ಕಾರೊಂದು ಮೋರಿಗೆ ಗುದ್ದಿದ ಪರಿಣಾಮ ಕಾರಿನಲ್ಲಿದ್ದ ಯುವಕ ಸಾವು ಕಂಡಿರುವ ಘಟನೆ ವರದಿಯಾಗಿದೆ.
ಸೈಯದ್ ನೈಫ್ (19) ಸಾವು ಕಂಡ ಯುವಕ ಸ್ಥಳದಲ್ಲೆ ಮೃತಪಟ್ಟಿದ್ದು, ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಪ್ರಕರಣದ ವಿವರ :
ಶಿವಮೊಗ್ಗದ ತಂಗಿಯ ಮನೆಯಿಂದ ಸಾಗರಕ್ಕೆ ಮಾರುತಿ ಸಿಎಸ್ ಕಾರಿನಲ್ಲಿ ಸೈಯದ್ ನೈಫ್ ಮೂವರ ಜೊತೆ ಹೋಗುತ್ತಿದ್ದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಕುಂಸಿ ಬಳಿಯ ಮೋರಿಗೆ ಗುದ್ದಿ ಪಲ್ಟಿಯಾಗಿದೆ.
ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post