ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ (Shivamogga) ನಗರದ ಹರಿಗೆ ಸಮೀಪ ಮಂಗಳವಾರ ಮುಂಜಾನೆ ಸಂಭವಿಸಿದ (Terrible Road Accident) ಭೀಕರ ರಸ್ತೆ ಅಪಘಾತದಲ್ಲಿ 21 ವರ್ಷದ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಗುರುರಾಜ್ (21) ಎಂದು ಗುರುತಿಸಲಾಗಿದೆ.
ಮಧ್ಯರಾತ್ರಿ ಬಳಿಕ ಸುಮಾರು 3 ಗಂಟೆ ವೇಳೆಗೆ ವೇಗವಾಗಿ ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಸೀದಾ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸ ಎಷ್ಟಿತ್ತೆಂದರೆ ಕಾರು ಮೂರು ಭಾಗಗಳಾಗಿ ಛಿದ್ರಗೊಂಡು ಸಂಪೂರ್ಣ ನಜ್ಜುಗುಜ್ಜಾಗಿದೆ.
Shivamogga : ಪೂರ್ವ ಸಂಚಾರಿ ಪೊಲೀಸ್ ಪೊಲೀಸರ ಭೇಟಿ
ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಗುರುರಾಜ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Also read>> First Woman Custodian Revives Thiruvarur’s Sacred Sarvavadyam Heritage
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ಪ್ರಾಥಮಿಕ ತನಿಖೆಯ ಪ್ರಕಾರ, ಅತಿಯಾದ ವೇಗವೇ ಅಪಘಾತಕ್ಕೆ ಪ್ರಮುಖ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ. ಈ ಸಂಬಂಧ ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಅಪಘಾತದ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 











Comments 1