No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸುಳ್ಳಿನ ಗಾಡಿ ಹೆಚ್ಚು ದಿನ ಓಡುವುದಿಲ್ಲ: ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ

kalpa News by kalpa News
May 8, 2023
in ಶಿವಮೊಗ್ಗ
0
ಇನ್ಮುಂದೆ ಕನ್ನಡದಲ್ಲೇ ದೊರೆಯಲಿದೆ ಮೆಡಿಕಲ್, ಇಂಜಿನಿಯರಿಂಗ್ ಶಿಕ್ಷಣ: ಪ್ರಧಾನಿ ಮೋದಿ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಈ ಬಾರಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದೆ ಬರಲಿದೆ. ರಾಜ್ಯದ ಜನತೆ ಸಂಕಲ್ಪ ಮಾಡಿದ್ದಾರೆ.‌ ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದರಲ್ಲದೆ, ಕಾಂಗ್ರೆಸ್ ಮೇಲೆ ತೀವ್ರ ವಾಗ್ದಾಳಿ ನಡೆಸಿದರು.

ಸಮೀಪದ ಆಯನೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದ ಜನರು ನನ್ನ ಮೇಲೆ ಪ್ರೀತಿ ಹೊಂದಿದ್ದಾರೆ. ಅವರ ತೋರುತ್ತಿರುವ ಪ್ರೀತಿ, ಗೌರವವನ್ನು ಎಂದಿಗೂ ಮರೆಯುವುದಿಲ್ಲ. ಕರ್ನಾಟಕದ ಜನತೆ ನನಗೆ ಪ್ರೀತಿ ತೋರಿದರೆ, ಆಶೀರ್ವಾದ ಮಾಡಿದರೆ ಕರ್ನಾಟಕವನ್ನು ಮತ್ತಷ್ಟು ವಿಕಾಸ ಮಾಡುತ್ತೇನೆ. ಮತ್ತೆ ಕರ್ನಾಟಕಕ್ಕೆ ಬರುತ್ತೇನೆ ಎಂದು ಭರವಸೆ ನೀಡಿದರು.
ಕಾಂಗ್ರೆಸ್ನವರು ಸುಳ್ಳಿನ ಗಾಳಿ ತುಂಬಿರುವ ಬಲೂನನ್ನು ಹಾರಿಸುತ್ತಿದ್ದಾರೆ. ಅವರ ಮಾತನ್ನು ಯಾರು ನಂಬೋದಿಲ್ಲ. ಜನರೇ ಕಾಂಗ್ರೆಸ್‌ ಹಾರಿಸುತ್ತಿರುವ ಸುಳ್ಳಿನ ಬಲೂನನ್ನು ಸೋಜಿಯಿಂದ ಚುಚ್ಚಿ ಒಡೆದುಹಾಕಿ ಚೂರು ಚೂರು ಮಾಡುತ್ತಾರೆ. ಅವರಿಗೆ ಗೊತ್ತಿಲ್ಲ ಸುಳ್ಳಿನ ಗಾಡಿ ಹೆಚ್ಚು ದಿನ ಓಡುವುದಿಲ್ಲ. ಕರ್ನಾಟಕದಲ್ಲಿ ನಾಲ್ಕು ದಿಕ್ಕಿನಿಂದ ಒಂದೇ ರೀತಿಯ ಶಬ್ದ ಬರುತ್ತಿದೆ. ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಬಾರಿ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ. ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಬೇಕೆಂದು ಯಡಿಯೂರಪ್ಪ ಅವರು ಸಂಕಲ್ಪ ಮಾಡಿದ್ದಾರೆ. ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕೆಂದು ಜನರು ಕೂಡ ನಿರ್ಧಾರ ಮಾಡಿದ್ದಾರೆ. ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಲೆನಾಡಿನ ಕೃಷಿ ಇಡಿ ದೇಶಕ್ಕೆ ಮಾದರಿಯಾದದು. ಅಡಿಕೆ ಬೆಳೆಗಾರರಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ನೀಡಲಾಗಿದೆ. ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ. ಅಡಿಕೆ ಆಮದು ಆಗುತ್ತಿರುವುದು ಕಾಂಗ್ರೆಸ್ ಸರಕಾರದ ನೀತಿಯಿಂದ ಎಂದು ಕಾಂಗ್ರೆಸ್ ವಿರುದ್ಧ ಚಾಟಿ ಬೀಸಿದರು.
ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಅಡಿಕೆ ಬೆಳೆಗಾರರ ಸಂಕಷ್ಟವನ್ನು ಅರಿತಿದ್ದರು, ಆ ಬಗ್ಗೆ ತಮ್ಮ ಬಳಿ ಚರ್ಚೆಯನ್ನು ನಡೆಸಿದ್ದರು. ಹೀಗಾಗಿ ಅಡಿಕೆ ಆಮದಿಗೆ ಹೊಸ ನೀತಿ ಜಾರಿ ಮಾಡಲಾಯಿತು. ನಮ್ಮ ಸರ್ಕಾರದ ಸಂದರ್ಭದಲ್ಲಿ ಅಡಿಕೆ ಅಮದಿಗೆ ನಿಯಮ ರೂಪಿಸಲಾಗಿದೆ. ಆ ಮೂಲಕ ನಮ್ಮ ರೈತರಿಗೆ ಆಗುತ್ತಿದ್ದ ಸಮಸ್ಯೆಯನ್ನು ನಿವಾರಿಸಲಾಗಿದೆ. 100 ರು. ಇದ್ದ ಆಮದು ಸುಂಕವನ್ನು 350 ರು. ಗಳಿಗೆ ಹೆಚ್ಚಳ ಮಾಡಲಾಗಿದೆ. ಅಮೂಲಕ ಅಡಿಕೆ ಬೆಳೆಗಾರರ ನೆರವಿಗೆ ಸರ್ಕಾರ ಸಹಾಯ ಹಸ್ತ ಚಾಚಿದೆ ಇದೆ ಎಂದರು.

ಇಂದು ದಾಖಲೆ ಪ್ರಮಾಣದಲ್ಲಿ ಕೃಷಿ ಉತ್ಪನ್ನಗಳು ರಫ್ತು ಆಗುತ್ತಿದೆ. ಕೃಷಿ ಉತ್ಪನ್ನ ರಫ್ತಿ ನಲ್ಲಿ ಜಗತ್ತಿನ ಮೊಲದ ಹತ್ತರ ಪಟ್ಟಿಯಲ್ಲಿ ಭಾರತ ಸೇರ್ಪಡೆಗೊಂಡಿದೆ. ಫಸಲ್ ಭೀಮಾ ಯೋಜನೆ ಮೂಲಕ ದೇಶದಲ್ಲಿನ ರೈತರಿಗೆ ಆರ್ಥಿಕ ಸಹಾಯ ಮಾಡಲಾಗಿದೆ. ಕರ್ನಾಟಕದಲ್ಲಿನ ರೈತರಿಗೆ ಸುಮಾರು 10000 ಕೋಟಿ ರು. ನೇರವಾಗಿ ಅವರವರ ಖಾತೆಗೆ ಸಂದಾಯವಾಗಿದೆ ಎಂದರು.

ರಸಗೊಬ್ಬರಕ್ಕೆ ಸಬ್ಸಿಡಿ ಹೆಚ್ಚಳ ಮಾಡಲಾಗಿದೆ. ಕೊರೋನಾ ಸಂದರ್ಭದಲ್ಲಿ ಕೃಷಿಗೆ ಯಾವುದೇ ಸಮಸ್ಯೆ ಉಂಟಾಗಲಿಲ್ಲ. ಕಾಂಗ್ರೆಸ್ ಅಧಿಕಾರ ಸಂದರ್ಭದಲ್ಲಿ ಅವರ ತಿಜೋರಿ ಭರ್ತಿಯಾಗುತ್ತಿತ್ತು. ಆದರೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ರೈತರ ಸಮಸ್ಯೆಗಳನ್ನು ನಿವಾರಣೆ ಮಾಡಲಾಗುತ್ತಿದೆ ಎಂದರು.

https://kalpa.news/wp-content/uploads/2023/05/Jain-Public-School.mp4

ಕಾಂಗ್ರೆಸ್ ಸರ್ಕಾರದ ಸಮಯದಲ್ಲಿ ರೈತರು ಬ್ಯಾಂಕಿಂಗ್ ನಿಂದ ದೂರವಿದ್ದರು. ಕೋಟ್ಯಂತರ ರು. ಹಣ ಬೇರೆಯವರ ಜೇಬು ಸೇರುತ್ತಿತ್ತು. ನಮ್ಮ ಸರ್ಕಾರದಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ರೈತರಿಗೆ ಅನುಕೂಲ ಮಾಡಲಾಗಿದೆ. ಮುದ್ರಾ ಯೋಜನೆ ಮೂಲಕ ಸಾಲ ನೀಡಲಾಗುತ್ತಿದೆ. ಮೂರು ಸೇನೆಯಲ್ಲಿ ಹೆಣ್ಣು ಮಕ್ಕಳಿಗೆ ಆದ್ಯತೆ ನೀಡಲಾಗುತ್ತಿದೆ. ಅಕ್ಕಮಹಾದೇವಿ ಗತಿಶಕ್ತಿ ಯೋಜನೆ ಜಾರಿ ಮಾಡಲಾಗಿದೆ. ಹಲವು ಹೊಸ ವಿಶ್ವವಿದ್ಯಾಲಯಗಳು, ಮೆಡಿಕಲ್ ಕಾಲೇಜು, ಆಸ್ಪತ್ರೆ ನಿರ್ಮಾಣವಾಗಿದೆ. ಭ್ರಷ್ಟಾಚಾರ ನಿರ್ಮೂಲನೆ ಮಾಡಿದ್ದೇವೆ. 9 ವರ್ಷ ಆಡಳಿತ ಅವಧಿಯಲ್ಲಿ ದೇಶದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ ಎಂದರು.

ಆದರೆ ಈ ಹಿಂದೆ ಅಧಿಕಾರ ನಡೆಸಿದ್ದ ಕಾಂಗ್ರೆಸ್ ಸರ್ಕಾರ ಏನು ಮಾಡಿತ್ತು ಎಂದು ಪ್ರಶ್ನಿಸಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಬಗ್ಗೆ ಜನರು ಯೋಚಿಸಬೇಕಾದ ಅಗತ್ಯವಿದೆ. 85 ಪರ್ಸೆಂಟ್ ಕಮಿಷನ್ ಪಡೆಯುವ ಕಾಂಗ್ರೆಸ್ ನಿಂದ ಯುವ ಜನರಿಗೆ ಯಾವುದೇ ಉಪಯೋಗವಾಗುವುದಿಲ್ಲ. ಕಾಂಗ್ರೆಸ್ ನವರು ವ್ಯವಸ್ಥಿತವಾಗಿ ಸುಳ್ಳನ್ನು ಹಬ್ಬಿಸುತ್ತಿದ್ದಾರೆ. ಐದು ವರ್ಷದಲ್ಲಿ 10 ಲಕ್ಷ ಉದ್ಯೋಗ ಕೊಡುತ್ತೇವೆ ಎಂದು ಸುಳ್ಳು ಹೇಳುತ್ತಿದೆ. ಅವರ ಆಶ್ವಾಸನೆ ಕೇವಲ ಕಾಗದಕಷ್ಟೇ ಸೀಮಿತವಾಗುತ್ತದೆ. ಅಲ್ಲದೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯ ಮತ್ತೊಮ್ಮೆ ರಿವರ್ಸ್ ಗೇರಿನಲ್ಲಿ ಹೋಗಬೇಕಾಗುತ್ತದೆ ಎಂದು ಟೀಕಿಸಿದರು.
ರಾಜ್ಯದಲ್ಲಿ ಮೂರುವರೆ ವರ್ಷದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸುಮಾರು 30 ಲಕ್ಷ ಉದ್ಯೋಗ ಸೃಷ್ಟಿಸಿದೆ. ಇದು ಬಿ.ಎಸ್. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿದ್ದ ಸರ್ಕಾರದ ಸಾಧನೆ. ನಾನು ನಿಮ್ಮೆಲ್ಲರಿಗೂ ಗ್ಯಾರೆಂಟಿ ನೀಡುತ್ತೇನೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮತ್ತೊಮ್ಮೆ ಅಧಿಕಾರಿಕೆ ಬಂದರೆ ಕರ್ನಾಟಕವನ್ನು ಮತ್ತಷ್ಟು ಅಭಿವೃದ್ಧಿ ಪಡಿಸುತ್ತೇವೆ ಎಂದು ಭರವಸೆ ನೀಡಿದರು.

ಶಿವಮೊಗ್ಗ ಆಟೋಮೊಬೈಲ್ ಉತ್ಪನ್ನದ ಹಬ್ ಆಗಿದೆ. ಇಲ್ಲಿ ಪಶ್ಚಿಮ ಘಟ್ಟದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ. ಜಿಲ್ಲೆ ಮತ್ತು ಅಭಿವೃದ್ಧಿ ಹೊಂದಬೇಕಾದರೆ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಬೇಕು. ಮತದಾರರು ಬಿಜೆಪಿ ಅಭ್ಯರ್ಥಿಗಳಿಗೆ ಆಶೀರ್ವಾದ ಮಾಡಬೇಕಿದೆ ಎಂದರು.

ಭಾರತ್ ಮಾತಾ ಕಿ ಜೈ, ಬಜರಂಗ್ ಬಲಿ ಕಿ ಜೈ ಎಂದೇ ತಮ್ಮ ಭಾಷಣವನ್ನು ಶುರು ಮಾಡಿದ ಪ್ರಧಾನಿ ಮೋದಿ ನೆರೆದಿದ್ದ ಜನರನ್ನು ಪುಳಕಿತಗೊಳಿಸಿದರು.

ಮಲೆನಾಡಿನ ಮಡಿಲು, ಸೌಂದರ್ಯದ ಹೊನಲು ಶಿವಮೊಗ್ಗದ ಜನತೆಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲಿ ಕೆಲ ಶಬ್ದಗಳನ್ನು ತಮ್ಮ ಭಾಷಣದಲ್ಲಿ ಪ್ರಯೋಗಿಸಿದ ಮೋದಿ, ಕುವೆಂಪು ಹುಟ್ಟಿದ ನಾಡು, ಪೂಜ್ಯ ಶ್ರೀಧರ ಸ್ವಾಮೀಜಿ ಅವರಿಗೂ ಶ್ರದ್ದಾಪೂರ್ವಕ ನಮಸ್ಕಾರ ಸಲ್ಲಿಸುತ್ತೇನೆ ಎಂದು ಶ್ರೀಧರ ಸ್ವಾಮೀಜಿ ಅವರನ್ನು ಹಾಗೂ ಕುವೆಂಪು ಅವರನ್ನು ನೆನಪಿಸಿಕೊಂಡರು. ಗಂಗಾ ಸ್ನಾನ ತುಂಗಾಪಾನ, ಏಸೂರು ಬಿಟ್ಟರು ಈಸೂರು ಬಿಡೆವು ಎಂದು ನಾಣ್ನುಡಿ ಉಚ್ಚರಿಸುವುದರ ಮೂಲಕ ನೆರೆದಿದ್ದ ಜನರನ್ನು ಮಂತ್ರ ಮುಗ್ಧರನ್ನಾಗಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ರಜೆ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಕನಿಷ್ಠ 120 ರಿಂದ 130ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸುವುದರ ಮೂಲಕ ಮತ್ತೊಮ್ಮೆ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರುವುದರ ಮೂಲಕ ಪ್ರಧಾನಿಯವರಿಗೆ ಗೆಲುವು ಉಡುಗೊರೆ ನೀಡಬೇಕಿದೆ. ಗೌರವ ಸಲ್ಲಿಸಬೇಕಿದೆ ಎಂದು ಹೇಳಿದರು.

ಮೋದಿಜೀ ಯವರ ಆಶೀರ್ವಾದದಿಂದ ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ನಡೆಯುತ್ತಿದೆ. ಶಿವಮೊಗ್ಗವನ್ನು ಮಾದರಿ ಜಿಲ್ಲೆಯನ್ನಾಗಿ ಮಾಡುವ ಕೆಲಸ ಈಗಾಗಲೇ ಮಾಡಿದ್ದೇವೆ. ಹುಟ್ಟು ಹಬ್ಬದ ದಿನದಂದೇ ವಿಮಾನ ಶಿವಮೊಗ್ಗ ನಿಲ್ದಾಣದ ಉದ್ಘಾಟನೆ ನೆರವೇರಿಸಿದ್ದಾರೆ. ಅಂದು ಲಕ್ಷಾಂತರ ಮಂದಿಯಿಂದ ನನಗೆ ಆಶೀರ್ವಾದ ದೊರಕಿದೆ. ಅದೇ ರೀತಿ ಚುನಾವಣೆಯಲ್ಲಿ ನಮಗೆ ಆಶೀರ್ವಾದ ಮಾಡಬೇಕು. ಬಿಜೆಪಿಯ ಕೈ ಮತ್ತಷ್ಟು ಬಲಪಡಿಸಬೇಕು ಎಂದರು.

ಕೇವಲ ರಾಜ್ಯ ದೇಶದಷ್ಟೇ ಅಲ್ಲ. ಇಡಿ ಜಗತ್ತು ಮೋದಿಯವರನ್ನು ವಿಶ್ವ ನಾಯಕನೆಂದು ಒಪ್ಪಿಕೊಂಡಿದೆ. ರಾಜ್ಯದ ಜನರ ನಾಡಿಮಿಡಿತ ಗೊತ್ತಿದೆ. ಈ ಬಾರಿ ನಿಶ್ಚಿತವಾಗಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನತೆಯ ಪರವಾಗಿ ಕೇಸರಿ ಶಾಲು, ಶಿವಾಜಿ ಮಹಾರಾಜರ ಪೇಟ ಹಾಗೂ ಆಂಜನೇಯ ಸ್ವಾಮಿಯ ವಿಗ್ರಹ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ, ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್, ಪ್ರಮುಖರಾದ ಗಿರೀಶ್ ಪಟೇಲ್, ಕುಮಾರ್ ಬಂಗಾರಪ್ಪ, ಅಶೋಕ್ ನಾಯ್ಕ್, ಹರತಾಳು ಹಾಲಪ್ಪ ಮತ್ತಿತರರು ಉಪಸ್ಥಿತರಿದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ: ಪೂಜಿತಾಗೆ 617 ಅಂಕ

Next Post

ಶಿವಣ್ಣ ವಿರುದ್ಧ ನೀಡಿದ್ದ ಹೇಳಿಕೆ ವಾಪಾಸ್ ಪಡೆದ ಪ್ರಶಾಂತ್ ಸಂಬರ್ಗಿ

kalpa News

kalpa News

Next Post
ಶಿವಣ್ಣ ವಿರುದ್ಧ ನೀಡಿದ್ದ ಹೇಳಿಕೆ ವಾಪಾಸ್ ಪಡೆದ ಪ್ರಶಾಂತ್ ಸಂಬರ್ಗಿ

ಶಿವಣ್ಣ ವಿರುದ್ಧ ನೀಡಿದ್ದ ಹೇಳಿಕೆ ವಾಪಾಸ್ ಪಡೆದ ಪ್ರಶಾಂತ್ ಸಂಬರ್ಗಿ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL