ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತುಂಗಾ ಜಲಾಶಯದ #Tunga Reservoir 22 ಗೇಟ್ಗಳಲ್ಲಿ ಒಂದು ಗೇಟ್ನ ರೂಪ್ ಹಾಳಾಗಿದ್ದು, ಬೇರೆ ಗೇಟುಗಳು ಸರಿಯಾಗಿದೆಯೇ ಎಂಬುದನ್ನು ತಜ್ಞರು ಪರಿಶೀಲಿಸಿ ಮುಂದೆ ದೊಡ್ಡ ಮಟ್ಟದ ಅವಘಡ ಸಂಭವಿಸದಂತೆ ನೋಡಿಕೊಳ್ಳಬೇಕು ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷರಾದ ಹಾಗೂ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ #K B Prasannakumar ಒತ್ತಾಯಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 1952ರಲ್ಲಿ ಆರಂಭವಾದ ಜಲಾಶಯ 2009ರಲ್ಲಿ ಜಲಾಶಯವನ್ನು ಎತ್ತರಿಸಿ ಹೆಚ್ಚಿನ ನೀರು ಸಂಗ್ರಹ ಮಾಡಲಾಯಿತು. 3.24 ಟಿಎಂಸಿ ನೀರು ಸಂಗ್ರಹಿಸಲಾಗುತ್ತಿದ್ದು, ಅದೇ ರೀತಿ ಭದ್ರಾ ಜಲಾಶಯದಲ್ಲಿ 71.25 ಟಿಎಂಸಿ ನೀರು ಸಂಗ್ರಹವಾಗುತ್ತಿದೆ ಎಂದರು.

Also read: ವಿಕಸಿತ ಭಾರತ ನಮ್ಮೆಲ್ಲರ ಗುರಿಯಾಗಬೇಕು: ಸಂಸದ ಯದುವೀರ್ ಒಡೆಯರ್
ಹೊಸಪೇಟೆಯ ಟಿವಿ ಡ್ಯಾಂನ ಒಂದು ಗೇಟ್ ಕಳಚಿ ಬಿದ್ದು, ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ. ಇದನ್ನು ತಪ್ಪಿಸಲು ಕೊಚ್ಚಿ ಹೋಗಿರುವ 19ನೇ ಗೇಟ್ ಸ್ಥಳದಲ್ಲಿ ತಾತ್ಕಾಲಿಕ ಗೇಟ್ ಅಳವಡಿಕೆ ಕಾರ್ಯ ನಡೆಯತ್ತಿದೆ. ಅದೇ ರೀತಿ ಭದ್ರಾ ಜಲಾಶಯದಲ್ಲೂ ನೀರು ಸೋರಿಗೆಯಾಗುತ್ತಿದೆ. ಇದರ ಬಗ್ಗೆಯೂ ಸಹ ಸರ್ಕಾರ ಕೂಡಲೇ ಗಮನಹರಿಸಬೇಕು ಎಂದರು.

ಸರ್ಕಾರ ಮಹಾನಗರ ಪಾಲಿಕೆಗೆ ಚುನಾವಣೆ ನಡೆಸಲು ಹಿಂದೇಟ್ ಹಾಕುತ್ತಿದೆ. ಸರ್ಕಾರ ಜಿಲ್ಲಾಧಿಕಾರಿಗಳಿಗೆ 4ಬಾರಿ ಪತ್ರ ಬರೆದಿದ್ದು ಅದೇ ರೀತಿ ಜಿಲ್ಲಾಧಿಕಾರಿಗಳು ಸಹ ಪಾಲಿಕೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಆದರೆ ಪಾಲಿಕೆ ಆಯುಕ್ತರಿಂದ ಯಾವುದೇ ಉತ್ತರ ಬಂದಿಲ್ಲ. ಚುನಾವಣಾ ಆಯೋಗವು ಸಹ ಪಾಲಿಕೆ ಚುನಾವಣೆ ನಡೆಸಲು ಮುಂದಾಗಿರುವುದಕ್ಕೆ ಸ್ವಾಗತಿಸಿದ ಅವರು, ಶೀಘ್ರವೇ ಚುನಾವಣೆ ಜಾರಿಯಾಗಬೇಕು. ಜನರ ತೊಂದರೆ ತಪ್ಪಿಸಬೇಕು ಎಂದ ಅವರು, ಪಾಲಿಕೆಯ ವಾರ್ಡ್ಗಳ ಸಂಖ್ಯೆಯನ್ನು ನಗರದ ಸುತ್ತಮುತ್ತಲ ಗ್ರಾಮಗಳನ್ನು ಸೇರಿಸಿ ಹೆಚ್ಚಿಸಬೇಕಾಗುತ್ತದೆ. ಆದರೆ ಆ ಗ್ರಾಮಗಳ ಪಂಚಾಯಿತಿಯ ಅವಧಿ ಇನ್ನೂ ಒಂದು ವರ್ಷ ಇರುವುದರಿಂದ ಇನ್ನು ಒಂದು ವರ್ಷ ಪಾಲಿಕೆಗೆ ಚುನಾವಣೆ ಆಗುವುದು ವಿಳಂಬವಾಗುವ ಸಂಭವವಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ನಗರಾಧ್ಯಕ್ಷ ದೀಪಕ್ಸಿಂಗ್, ಪ್ರಮುಖರಾದ ಸಿದ್ದಪ್ಪ, ಅಬ್ದುಲ್ ವಾಜಿದ್, ನರಸಿಂಗ ಗಂಧದಮನೆ,ಚ ಗೋಪಿ, ಜಯಣ್ಣ, ದಯಾನಂದ್, ಸಂಜಯ್ ಕಸ್ಯಪ್, ನಿಹಾಲ್, ಹೆಚ್.ಎಂ.ಸಂಗಯ್ಯ ಇನ್ನಿತರರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post