ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮುಖ್ಯಮಂತ್ರಿ ಸಿದ್ಧರಾಮಯ್ಯ #CM Siddaramaiah ಅವರಿಗೆ ನೈತಿಕ ಬೆಂಬಲ ಸೂಚಿಸಿ ಪ್ರತಿಜ್ಞಾವಿಧಿ ಸ್ವೀಕರಿಸುವ ಮೂಲಕ ಬಿಜೆಪಿ -ಜೆಡಿಎಸ್ ಷಡ್ಯಂತ್ರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಇಂದು ಗಾಂಧಿ ಪಾರ್ಕ್ನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.
ಸಿದ್ಧರಾಮಯ್ಯ ಅವರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು. ಅವರು ನಮ್ಮ ಹೆಮ್ಮೆಯ ನಾಯಕ. ಅವರೊಂದಿಗೆ ನಾವಿದ್ದೇವೆ. ಇದು ಬಿಜೆಪಿಯವರ ಕುತಂತ್ರವಷ್ಟೇ. ಚುನಾಯಿತ ಸರ್ಕಾರವನ್ನು ಬೀಳಿಸುವ ಹುನ್ನಾರ ಇದರಲ್ಲಿ ಅಡಗಿದೆ. ಬಿಜೆಪಿಗರ ಷಡ್ಯಂತ್ರಕ್ಕೆ ನಾವು ಹೆದರವುದೂ ಇಲ್ಲ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದರು.

Also read: ಸಿಬ್ಬಂದಿ, ವಿದ್ಯಾರ್ಥಿಗಳ ನಡುವೆ ಭ್ರಾತೃತ್ವ ವೃದ್ಧಿಸಲು ಕ್ರೀಡೆ ಸಹಕಾರಿ
ಏಡ್ಸ್ ಹರಡುವ ಶಾಸಕ, ಹೆಂಗಸರಷ್ಟೇ ಅಲ್ಲ ಗಂಡಸರ ಮೇಲೆಯೂ ಅತ್ಯಾಚಾರ ಮಾಡುವವರು ಇದಕ್ಕಿಂತಲೂ ಹೆಚ್ಚಾಗಿ ಮಕ್ಕಳ ಮೇಲೆ ಲೈಂಗಿಕ ಕಿರುಕುಳ ನೀಡಿದವರು ಬಿಜೆಪಿಯಲ್ಲಿದ್ದಾರೆ. ಕೇಂದ್ರ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಬೇಲ್ ಮೇಲೆ ಹೊರಗಿದ್ದಾರೆ. ಇವರಿಗೆಲ್ಲ ಯಾವ ನೈತಿಕತೆ ಇದೆ. ಶಿವಮೊಗ್ಗದಲ್ಲಿ ರಾಶಿ ರಾಶಿ ಬೇನಾಮಿ ಆಸ್ತಿ ಮಾಡಿದವರಿದ್ದಾರೆ. ರಾಜೀನಾಮೆ ಕೇಳುವ ಬಿಜೆಪಿ ರಾಜ್ಯಾಧ್ಯಕ್ಷ ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ಕೆಪಿಸಿಸಿ ಪ್ರಧಾನಕಾರ್ಯದರ್ಶಿ ಎನ್.ರಮೇಶ್ ಮಾತನಾಡಿ, ಸಿದ್ದರಾಮಯ್ಯ ಅವರು ಕಳಂಕರಹಿತರಾಗಿದ್ದಾರೆ.ಅವರಿಗೆ ಕಪ್ಪು ಚುಕ್ಕೆ ತರಲು ಮಾಡಿರುವ ಹುನ್ನಾರವಿದು. ಇಂತಹ ಹುನ್ನಾರಗಳನ್ನು ಬಿಜೆಪಿಯವರು ಮಾಡುತ್ತಲೇ ಬಂದಿದ್ದಾರೆ. ಸಿದ್ದರಾಮಯ್ಯ ಅವರುತನಿಖೆಯನ್ನು ಎದುರಿಸಲು ಸಿದ್ದರಿದ್ದಾರೆ. ಅವರು ಖಂಡಿತ ಕಳಂಕ ರಹಿತರಾಗಿ ಹೊರಬರುತ್ತಾರೆ. ಇಡೀ ಕಾಂಗ್ರೆಸ್ ಕಾರ್ಯಕರ್ತರು ಅವರೊಂದಿಗಿದ್ದಾರೆ. ಅವರಿಗೆ ರಕ್ಷಣೆ ಸಿಕ್ಕೇ ಸಿಗುತ್ತದೆ. ಅವರು ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದರು.

ಪ್ರತಿಭಟನೆಯಲ್ಲಿ ಪ್ರಮುಖರಾದ ಎಸ್.ಕೆ. ಮರಿಯಪ್ಪ, ಕಲಗೋಡು ರತ್ನಾಕರ್, ರಮೇಶ್ ಹೆಗ್ಡೆ, ಚಂದ್ರಭೂಪಾಲ್, ಜಿ.ಡಿ. ಮಂಜುನಾಥ್, ಎಸ್.ಪಿ. ಶೇಷಾದ್ರಿ, ವೈ.ಹೆಚ್. ನಾಗರಾಜ್. ಪಿ.ಎಸ್. ಗಿರೀಶ್ ರಾವ್, ಎಸ್.ಟಿ. ಚಂದ್ರಶೇಖರ್, ಶರತ್ ಮರಿಯಪ್ಪ, ಕಲೀಂ ಪಾಶ, ಶಿವಕುಮಾರ್, ಯು. ಶಿವಾನಂದ್, ಮಧುಸೂದನ್, ಚೇತನ್ ಗೌಡ, ವಿಶ್ವನಾಥ್ ಕಾಶಿ, ಶಿ.ಜು. ಪಾಶ, ಜಿ. ಪದ್ಮನಾಭ್, ಶಮೀನ್ ಭಾನು, ಅಫ್ರಿದಿ, ಸ್ಟೆಲಾ ಮಾರ್ಟಿನ್, ಯಮುನಾ ರಂಗೇಗೌಡ, ಸುವರ್ಣಾ ನಾಗರಾಜ್, ನಾಜೀಮಾ, ರೇಷ್ಮಾ, ವಿಜಯಲಕ್ಷ್ಮಿ, ಕವಿತಾ, ನಿತಿನ್, ಕುಮರೇಶ್, ಲೋಕೇಶ್, ರಾಜಶೇಖರ್ ಆರ್. ಸೇರಿದಂತೆ ಹಲವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post