ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಮಹಾನಗರಪಾಲಿಕೆಯ ವತಿಯಿಂದ ಪ್ರತೀ ವರ್ಷದಂತೆ ಈ ವರ್ಷವೂ ಸಹಾ ಮಕ್ಕಳ ದಸರಾ ಸಮಿತಿ 2023ರ ವತಿಯಿಂದ ಆಯೋಜಿಸಲಾಗಿದ್ದ ಕ್ರೀಡಾಕೂಟಕ್ಕೆ ಪಾಲಿಕೆ ಮೇಯರ್ ಎಸ್. ಶಿವಕುಮಾರ್ ಬಲೂನ್ ಹಾರಿಸುವ ಮೂಲಕ ಚಾಲನೆ ನೀಡಿದರು,
ಮಕ್ಕಳ ದಸರಾ ಕ್ರೀಡಾಕೂಟದಲ್ಲಿ ಮಕ್ಕಳ ವಿವಿಧ ಹಂತದಲ್ಲಿ ವಿವಿಧ ಸ್ಪರ್ಧೆಗಳಾದ ಚಿತ್ರಕಲೆ, ಪ್ರಬಂಧ, ಕ್ಲೇ ಮಾಡ್ಲಿಂಗ್, ಛದ್ಮವೇಶ, ಮೆಮೋರಿ ಟೆಸ್ಟ್ ಸ್ಪರ್ಧೆ ನಡೆಯಲಿದ್ದು, ಇಂದು ಬೆಳಗ್ಗೆ ನೆಹರು ಕ್ರೀಡಾಂಗಣದಲ್ಲಿ ಮಕ್ಕಳ ಕಲರವ ರಂಗೇರಿತ್ತು. 500ಕ್ಕೂ ಹೆಚ್ಚು ಶಾಲಾ ಮಕ್ಕಳು, ಶಾಲೆಯ ಶಿಕ್ಷಕ ವೃಂದ ಹಾಗೂ ಪೋಷಕರೊಂದಿಗೆ ಅತಿ ಉತ್ಸಾಹಕತೆಯಿಂದ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಉಪ ಮೇಯರ್ ಲಕ್ಷ್ಮಿ ಶಂಕರನಾಯಕ, ಮಕ್ಕಳ ದಸರಾ ಸಮಿತಿಯ ಅಧ್ಯಕ್ಷರಾದ ರೇಖಾ ರಂಗನಾಥ್, ಪಾಲಿಕೆ ಸದಸ್ಯರಾದ ಸುನಿತಾ ಅಣ್ಣಪ್ಪ, ದೀರಜ್ ಹೋನ್ನವಿಲೆ, ವಿಶ್ವಾಸ್, ಮಂಜುಳಾ ಶಿವಣ್ಣ , ಅನಿತಾ ರವಿಶಂಕರ್ , ಪಾಲಿಕೆ ಅಧಿಕಾರಿ ವರ್ಗ, ದೈಹಿಕ ಶಿಕ್ಷಕರು ಉಪಸ್ಥಿತರಿದ್ದರು.
Also read: ಯೋಧೆಯ ಕೊಂದು ಶವ ನಗ್ನಗೊಳಿಸಿ ಮೆರವಣಿಗೆ ಮಾಡಿ ಪೈಶಾಚಿಕತೆ ಮೆರೆದ ಉಗ್ರರು


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















