ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೋಟೆಗಂಗೂರಿನಲ್ಲಿರುವ ಮಾನಸ ಇಂಟರ್ನ್ಯಾಷನಲ್ ಐಸಿಎಸ್ಇ ಶಾಲೆ ವತಿಯಿಂದ ಡಿ.1ರ ಬೆಳಿಗ್ಗೆ 10ಕ್ಕೆ ಶಾಲಾ ಆವರಣದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಲೆಯ ಪ್ರಾಂಶುಪಾಲೆ ಕೆ.ವಿ.ಸೌಮ್ಯ ತಿಳಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಕ್ಕಳಲ್ಲಿನ ಪ್ರತಿಭೆಯನ್ನು ಹೊರ ತರುವ ಉದ್ದೇಶದಿಂದ ಪ್ರತಿವರ್ಷವೂ ಈ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ ಎಂದರು.

ಪ್ರತಿ ವಿಭಾಗಗಳಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಆಕರ್ಷಕ ಬಹುಮಾನವಿದ್ದು, ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಬೆಳಿಗ್ಗೆ ಶಿವಮೊಗ್ಗದ ವಿನೋಬನಗರದಿಂದ, ಆಲ್ಕೋಳದಿಂದ ಹಾಗೂ ಶಿವಮೊಗ್ಗ ಬಸ್ ನಿಲ್ದಾಣದಿಂದ ಶಾಲಾ ವಾಹನದ ಸೌಲಭ್ಯವಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ತಾರಾ, ಸಂದೀಪ್, ಅರುಣಾ ಕೆ.ವಿ., ಅಂಥೋನಿ ಜಿಪ್ಸನ್ದೀಪ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post