ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಅಡುಗೆ ಅನಿಲ ಹಾಗೂ ದೈನಂದಿನ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಯುವ ಕಾಂಗ್ರೆಸ್ ವತಿಯಿಂದ ರಸ್ತೆಯಲ್ಲಿ ಒಲೆ ಹಚ್ಚಿ, ಚಿತ್ರಾನ್ನ ತಯಾರಿಸಿ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.
ಶಿವಮೊಗ್ಗ ನಗರ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ವಿನೋಬ ನಗರ ಚೌಕಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
Also Read: ದೆಹಲಿ ಜೆಎನ್’ಯು ಗಲಾಟೆ: ಎಬಿವಿಪಿ ವಿದ್ಯಾರ್ಥಿಗಳ ವಿರುದ್ಧ ಎಫ್’ಐಆರ್
ದಿನ ನಿತ್ಯ ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಡಿವಾಣ ಹಾಕದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಈ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಗ್ಯಾಸ್ ಸಿಲಿಂಡರ್’ಗೆ ಶ್ರದ್ದಾಂಜಲಿ ಸಲ್ಲಿಸಿ, ಸೌದೆ ಒಲೆಯಲ್ಲಿ ಚಿತ್ರಾನ್ನ ತಯಾರಿಸಿ, ಸಾರ್ವಜನಿಕರಿಗೆ ಹಂಚುವ ಮುಖಾಂತರ ಪ್ರತಿಭಟನೆ ನಡೆಸಲಾಯಿತು.
ಶಿವಮೊಗ್ಗ ನಗರ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ. ಲೋಕೇಶ್ ವಹಿಸಿದ್ದರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಿ.ಓ. ಶಿವಕುಮಾರ್, ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಎಚ್.ಪಿ. ಗಿರೀಶ್, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ. ರಾಹುಲ್, ಎಂ. ರಾಕೇಶ್, ಗಗನ್ ಗೌಡ, ಪ್ರಕಾಶ್, ತಂಗರಾಜ್, ಗೋಪಿ ಚೌಕಿ, ನಗರ ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಕೆ.ಎಲ್. ಪವನ, ರಾಹುಲ್, ದರ್ಶನ್, ಪೂರ್ವಿಕ್, ಪ್ರಸನ್ನ, ಮನು, ಗೋಪಿ, ಓಂ ಸಿಂಗ್, ಪ್ರಣವ್, ಕಿರಣ್ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















