ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕನ್ನಡ ಭಾಷೆ, ಸಂಸ್ಕೃತಿ ನಾಡು ನುಡಿ ಗಡಿ ರಕ್ಷಣೆಗೆ ಶ್ರಮಿಸಬೇಕು. ಕನ್ನಡವನ್ನು ಬೆಳೆಸಬೇಕು ಮಾತೃಭಾಷೆ ಮರೆಯಬಾರದು ಎಂದು ಪತ್ರಕರ್ತ ವಿ.ಟಿ. ಅರುಣ್ ಹೇಳಿದ್ದಾರೆ.
ಅವರು ಇಂದು ನಗರದ ಗಾರ್ಡನ್ ಏರಿಯಾ ಮುಖ್ಯ ರಸ್ತೆಯಲ್ಲಿ ಸ್ನೇಹಮಯಿ ಸಂಘ ಹಾಗೂ ಡಾ. ರಾಜ್ Dr. Rajkumar ಮತ್ತು ಡಾ. ಪುನೀತ್ ರಾಜ್ಮಾರ್ Puneeth Rajkumar ಅಭಿಮಾನಿಗಳ ಬಳಗದ ವತಿಯಿಂದ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭ ಹಾಗೂ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಹುಟ್ಟುಹಬ್ಬ ಆಚರಣೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ಹೇಮಾ ಮೋಹನ್, ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಹೊಸ ಹೊಸ ಪ್ರತಿಭೆಗಳನ್ನು ಗುರುತಿಸಿ ಸನ್ಮಾನಿಸಿ ಪೆÇ್ರೀತ್ಸಾಹಿಸುತ್ತಿರುವುದು ಸಂತೋಷದ ವಿಚಾರ. ಮುಂದೆಯೂ ಕೂಡ ಹೊಸ ಪ್ರತಿಭೆಗಳನ್ನು ಗುರುತಿಸಿ ಕಲೆ ಬೆಳೆಸಲು ಈ ಸಂಸ್ಥೆ ಪೆÇ್ರೀತ್ಸಾಹಿಸಲಿ ಎಂದು ಹಾರೈಸಿದರು.

Also read: ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಪಾಲಿಕೆ ಆಯುಕ್ತರಿಗೆ ಮನವಿ
ಈ ಸಂದರ್ಭದಲ್ಲಿ ಸ್ನೇಹಮಯಿ ಸಂಘದ ಅಧ್ಯಕ್ಷರು ಕಾರ್ಯಕ್ರಮದ ರೂವಾರಿ ಚಿನ್ನಪ್ಪ ಉಪಾಧ್ಯಕ್ಷ ರೊ. ವಿಜಯ್ಕುಮಾರ್, ಕಾರ್ಯದರ್ಶಿ ರವಿಕುಮಾರ್, ಜಿಲ್ಲಾ ಕ.ಸಾ.ಪ. ನಿರ್ದೇಶಕ ಮಲ್ಲಿಕಾರ್ಜುನ್ ಕಾನೂರು, ರವಿ ಶಂಕರ್ ಮತ್ತಿತರರು ಇದ್ದರು.











Discussion about this post