ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗೃಹ ಮಂತ್ರಿ ಆರಗ ಜ್ಞಾನೇಂದ್ರ Home Minister Araga Gnanendra ಅವರು ಪ್ರಚೋದನಾಕಾರಿ ಹೇಳಿಕೆಯನ್ನು ನೀಡಿ ತದನಂತರ ನನ್ನ ಹೇಳಿಕೆ ತಪ್ಪಾಗಿದೆ ನಾನು ತಪ್ಪು ಅರ್ಥೈಸಿಕೊಂಡಿದ್ದೇನೆ ಎಂದು ಸಬೂಬು ಹೇಳುತ್ತಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಅವರು, ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವುದನ್ನು ಬಿಟ್ಟು ಬಿಜೆಪಿಯ ಹೈಕಮಾಂಡ್ ಅನ್ನು ಮೆಚ್ಚಿಸಲು ಈ ರೀತಿಯ ಇಲ್ಲಸಲ್ಲದ ಪೂರಕವಲ್ಲದ ಹೇಳಿಕೆಗಳನ್ನು ನೀಡಿ ತದನಂತರ ತಪ್ಪಾಗಿದೆ ಎಂದು ಹೇಳುತ್ತಿರುವುದು ತೀವ್ರವಾಗಿ ಖಂಡಿಸಿ ಇಂದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ನಗರದ ಜಯನಗರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ರವರಿಗೆ ದೂರು ನೀಡಲಾಯಿತು.
Also read: ಮಂತ್ರಾಲಯದ ಸುಬುಧೇಂದ್ರ ತೀರ್ಥ ಸ್ವಾಮೀಜಿಗಳ ಆಶೀರ್ವಾದ ಪಡೆದ ಸಿಎಂ ಬೊಮ್ಮಾಯಿ
ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಎಚ್.ಪಿ. ಗಿರೀಶ್ , ಚಿತ್ರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ಲೋಕೇಶ್ , ದಕ್ಷಿಣ ಬ್ಲಾಕ್ ಎಸ್ ಕುಮರೇಶ್ , ಗ್ರಾಮಾಂತರ ಅಧ್ಯಕ್ಷ ಇ. ಟಿ ನಿತಿನ್, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ರಾಕೇಶ್ , ಪದಾಧಿಕಾರಿಗಳಾದ ಪವನ್, ದರ್ಶನ್ ಶ್ರೀನಿವಾಸ್, ಗಜ, ವೆಂಕಟೇಶ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post