No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Monday, May 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಾರ್ಚ್ ಅಂತ್ಯದೊಳಗೆ ಜಲ ಜೀವನ ಮಿಷನ್ ಕಾಮಗಾರಿ ಪೂರ್ಣಗೊಳಿಸಿ

ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 13, 2025
in ಶಿವಮೊಗ್ಗ
0
ಮಾರ್ಚ್ ಅಂತ್ಯದೊಳಗೆ ಜಲ ಜೀವನ ಮಿಷನ್ ಕಾಮಗಾರಿ ಪೂರ್ಣಗೊಳಿಸಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಿಲ್ಲೆಯಲ್ಲಿ ಪ್ರತಿ ಮನೆಗೆ ಶುದ್ದ ಕುಡಿಯುವ ನೀರು ಪೂರೈಸುವ ಜಲ ಜೀವನ ಮಿಷನ್ ಕಾಮಗಾರಿಗಳನ್ನು #Jal Jeevan Mission Project ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ #Minister Madhu Bangarappa ಅಧಿಕಾರಿಗಳಿಗೆ ಸೂಚನೆ ನೀಡಿದರು.

ಲೋಕೋಪಯೋಗಿ ಭವನದ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜೆಜೆಎಂ ಯೋಜನೆಯನ್ನು ತ್ವರಿತ ಗತಿಯಲ್ಲಿ ಪೂರೈಸಬೇಕು. ಇಲ್ಲಿಯವರೆಗೆ ಶೇ.60 ರಿಂದ 70 ಭಾಗ ಮಾತ್ರ ಕಾಮಗಾರಿ ಪೂರ್ಣಗೊಂಡಿದೆ. ಕಾಮಗಾರಿಗೆ ಸಂಬAಧಿಸಿದAತೆ ಅರಣ್ಯ ಸೇರಿಂದತೆ ಇತರೆ ವಿಷಯಗಳನ್ನು ಜಿಲ್ಲಾಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಸರಿಪಡಿಸಿಕೊಂಡು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಬೇಕು. ಈ ಕುರಿತು ನಾನು ಸರ್ಕಾರದ ಕಾರ್ಯದರ್ಶಿಯವರೊಂದಿಗೆ ಮಾತನಾಡುತ್ತೇನೆ. ಮಾರ್ಚ್ ಅಂತ್ಯದೊಳಗೆ ಶೇ.95 ರಷ್ಟು ಕೆಲಸ ಆಗಬೇಕು ಎಂದು ಸೂಚಿಸಿದರು.

Also read: ಸಾಗರ | ದೇವಾಲಯದ ದೇವಿ ಕೊರಳಲ್ಲಿದ್ದ ಮಾಂಗಲ್ಯ ಸರ ಕಳ್ಳತನ | ಆರೋಪಿ ಅಂದರ್

ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಕಾರ್ಯಪಾಲಕ ಅಭಿಯಂತರ ರೂಪ್ಲಾನಾಯ್ಕ ಮಾತನಾಡಿ, ಜಿಲ್ಲೆಯಲ್ಲಿ ಜೆಜೆಎಂ ಯೋಜನೆಯಡಿ ಶೇ. 67.5 ಪ್ರಗತಿ ಸಾಧಿಸಲಾಗಿದೆ.

2528 ಕಾಮಗಾರಿಗಳಲ್ಲಿ 1707 ಕಾಮಗಾರಿ ಪೂರ್ಣಗೊಂಡಿದ್ದು, 821 ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು.
ಸಚಿವರು, ಶಿಕಾರಿಪುರ-ಸೊರಬ- ಆನವಟ್ಟಿ ಸೇರಿ 154 ಗ್ರಾಮಗಳಿಗೆ ನೀರು ನೀಡುವ ಬಹುಗ್ರಾಮ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಬಹುಗ್ರಾಮ ಮತ್ತು ಇತರೆ ಯೋಜನೆಗಳಿಗೆ ಒಳಪಡದ ಗ್ರಾಮಗಳನ್ನು ಸಹ ಗುರುತಿಸಿ ನೀರು ಕೊಡಲು ವ್ಯವಸ್ಥೆ ಮಾಡಬೇಕು. ಹಾಗೂ ಕುಂಸಿ ಬಹು ಗ್ರಾಮ ಯೋಜನೆಯನ್ನು ಕೈಗೆತ್ತಿಕೊಂಡು ಕಾರ್ಯಾರಂಭಿಸುವAತೆ ತಿಳಿಸಿದರು.
ಜಿಲ್ಲೆಯಲ್ಲಿ ಎಷ್ಟು ಶಾಲೆಗಳು, ಪಿಹೆಚ್‌ಸಿಗಳು ಮತ್ತು ಅಂಗನವಾಡಿಗಳಲ್ಲಿ ಕುಡಿಯುವ ನೀರಿನ ಸಂಪರ್ಕ ಇದೆ ಮತ್ತು ಇಲ್ಲವೆಂದು ಡಿಡಿಪಿಐ, ಡಿಹೆಚ್‌ಓ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಧಿಕಾರಿಗಳು ವರದಿ ನೀಡಬೇಕು. ಕುಡಿಯುವ ನೀರಿನ ಸಂಪರ್ಕವಿಲ್ಲದ ಶಾಲೆಗಳು, ಅಂಗನವಾಡಿ ಮತ್ತು ಪಿಹೆಚ್‌ಸಿಗಳಿಗೆ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯಿಂದ ಸಂಪರ್ಕ ಒದಗಿಸಲಾಗುವುದು ಎಂದು ತಿಳಿಸಿದರು.

ಹಾಗೂ ಬಹುಮುಖ್ಯವಾಗಿ ಬೇಸಿಗೆಯಲ್ಲಿ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಈಗಲೇ ಸಮಸ್ಯಾತ್ಮಕ ಗ್ರಾಮಗಳ ಪಟ್ಟಿಯನ್ನು ಸಿದ್ದಪಡಿಸಿ, ಸದರಿ ಗ್ರಾಮಗಳಿಗೆ ನೀರು ಪೂರೈಸಲು ಅಗತ್ಯ ಅನುದಾನ ಮತ್ತು ಕ್ರಮಕ್ಕೆ ಯೋಜನೆ ರೂಪಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಹಾಗೂ ಕಾರ್ಯಪಾಲಕ ಅಭಿಯಂತರರಿಗೆ ಸೂಚನೆ ನೀಡಿದ ಅವರು ಸಮಸ್ಯಾತ್ಮಕ ಹಳ್ಳಿಗಳ ಮತ್ತು ಅಂದಾಜು ಪಟ್ಟಿ ನೀಡಿದಲ್ಲಿ ತಾವು ಸಚಿವ ಸಂಪುಟ ಸಭೆಯಲ್ಲಿ ಸರ್ಕಾರದ ಗಮನಕ್ಕೆ ತರುತ್ತೇನೆ ಎಂದರು.
ಮೆಗ್ಗಾನ್ ಆಸ್ಪತ್ರೆಗೆ ಅಗತ್ಯವಾದ ಹೆಚ್ಚುವರಿ ನೀರಿಗಾಗಿ ಹೊಸ ಪೈಪ್‌ಲೈನ್ ಕೆಲಸ ಆಗಿದ್ದು, ನಗರ ಕುಡಿಯುವ ನೀರು ಮಂಡಳಿಯಿAದ ಸಂಪರ್ಕ ನೀಡಿ ನೀರನ್ನು ನೀಡುವಂತೆ ಸೂಚಿಸಿದ ಸಚಿವರು ಒಂದು ವಾರದಲ್ಲೇ ಈ ವ್ಯವಸ್ಥೆ ಮಾಡಬೇಕು, ತಾವೇ ಇದಕ್ಕೆ ಚಾಲನೆ ನೀಡುವುದಾಗಿ ತಿಳಿಸಿದರು.

ಆರೋಗ್ಯ ಇಲಾಖೆ : ಜಿಲ್ಲೆಯಲ್ಲಿ ಮುಖ್ಯವಾಗಿ ಮಲೆನಾಡು ಭಾಗದಲ್ಲಿ ಕೆಎಫ್‌ಡಿ ಪ್ರಕರಣಗಳು ಹೆಚ್ಚದಂತೆ ಜನರಲ್ಲಿ ಅರಿವು ಮೂಡಿಸಬೇಕು. ಕೆಎಫ್‌ಡಿ ಹರಡಲು ಕಾರಣವಾಗುವ ಉಣ್ಣಿಗಳು ಸಕ್ರಿಯವಾಗಿರುವ ಸಮಯದಲ್ಲಿ ಕಾಡಿಗೆ, ಹೊರಗೆ ಜನರು ಹೋಗದಂತೆ ತಿಳುವಳಿಕೆ ನೀಡಬೇಕು. ಜ್ವರದ ಲಕ್ಷಣಗಳು ಕಂಡು ಬಂದ ತಕ್ಷಣ ತಾವೇ ಚಿಕಿತ್ಸೆ ಮಾಡಿಕೊಳ್ಳದೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೆರಳಿ ಪರೀಕ್ಷಿಸಿಕೊಳ್ಳಬೇಕೆಂದು ತಿಳಿಸಿದರು.
ಡಿಹೆಚ್‌ಓ ಡಾ.ನಟರಾಜ್ ಮಾತನಾಡಿ, ಜಿಲ್ಲೆಯಲ್ಲಿ ಈವರೆಗೆ 1252 ಕೆಎಫ್‌ಡಿ ಸ್ಯಾಂಪಲ್ ಪರೀಕ್ಷೆ ಮಾಡಲಾಗಿದೆ. ಈವರೆಗೆ 12 ಪಾಸಿಟಿವ್ ಪ್ರಕರಣಗಳು ಕಂಡುಬAದಿದ್ದು ಎಲ್ಲ ಪ್ರಕರಣಗಳು ತೀರ್ಥಹಳ್ಳಿ ತಾಲ್ಲೂಕಿನಲ್ಲಿವೆ. ಹೆದ್ದೂರನ್ನು ಹಾಟ್‌ಸ್ಟಾಟ್ ಎಂದು ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಯಾವುದೇ ಮಂಗನ ಸಾವು ಕಂಡು ಬಂದಲ್ಲಿ ಅರಣ್ಯ ಇಲಾಖೆಯವರು ವರದಿ ಮಾಡುತ್ತಾರೆ. ಆ ಭಾಗಕ್ಕೆ ಜನರು ತೆರಳದಂತೆ ನಿರ್ಬಂಧ ವಿಧಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತಿದೆ. ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಡಿಎಸ್‌ಓ ಡಾ.ನಾಗರಾಜ್ ನಾಯ್ಕ್ ಮಾತನಾಡಿ, ನವೆಂಬರ್ ಮಾಹೆಯಿಂದಲೇ ಉಣ್ಣಿ, ಜ್ವರ ಮತ್ತು ಮಂಗನ ಸಾವು ಕುರಿತು ಸರ್ವೇಕ್ಷಣೆ ಕೈಗೊಳ್ಳಲಾಗಿದೆ. ಪಾಸಿಟಿವ್ ಪ್ರಕರಣಗಳನ್ನು ಎಬಿಎಆರ್‌ಕೆ ಯೋಜನೆಯಡಿ ರೆಫರ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಸಿಮ್ಸ್ ನಿರ್ದೇಶಕ ಡಾ.ವಿರೂಪಾಕ್ಷಪ್ಪ ಮಾತನಾಡಿ, ಸಿಮ್ಸ್ ಆವರಣದಲ್ಲಿ ಪಿಎಂ ಅಭಿಮ್ ಯೋಜನೆಯಡಿ 50 ಹಾಸಿಗೆ ಸಾಮರ್ಥ್ಯದ ಕ್ರಿಟಿಕಲ್ ಕೇರ್ ಮತ್ತು ಹೈಟೆಕ್ ಪ್ರಯೋಗಶಾಲೆ ಮಂಜೂರಾಗಿದ್ದು ಟೆಂಡರ್ ಕರೆಯಲಾಗಿದೆ ಎಂದರು.
ಸಚಿವರು, ಈ ತಿಂಗಳ ಕೊನೆಯಲ್ಲಿ ಸಿಮ್ಸ್ ಆವರಣದಲ್ಲಿ ಪೂರ್ಣಗೊಂಡಿರುವ ಎಂಸಿಹೆಚ್ ಆಸ್ಪತ್ರೆ, ಲೈಬ್ರರಿ, ರೀಜಿನಲ್ ವ್ಯಾಕ್ಸಿನ್ ಸೆಂಟರ್‌ನ್ನು ಉದ್ಘಾಟಿಸಲಾಗುವುದು ಎಂದರು.

ಜಿಲ್ಲಾಸ್ಪತ್ರೆಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ: ಪ್ರಸ್ತುತ ಮೆಗ್ಗಾನ್ ಆಸ್ಪತ್ರೆಯು ಸಿಮ್ಸ್ ಬೋಧನಾ ಆಸ್ಪತ್ರೆಯೂ ಆಗಿದ್ದು ಕಾರ್ಯದೊತ್ತಡ ಹೆಚ್ಚಿದೆ. ಅನೇಕ ಕೊರತೆಗಳೂ ಇವೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆಯೂ ಇದೆ. ಆಸ್ಪತ್ರೆಯಲ್ಲಿ ದಟ್ಟಣೆ, ರೋಗಿಗಳ ಸಂಖ್ಯೆಯೂ ಹೆಚ್ಚುತ್ತಿದ್ದು ಇತರೆ ಜಿಲ್ಲೆಗಳಿಗೆ ತೆರಳುತ್ತಿದ್ದಾರೆ.

http://kalpa.news/wp-content/uploads/2025/02/Kumadvati-College-Shikaripura-2025-Video.mp4

ಆದ್ದರಿಂದ ಜನರಿಗೆ ಅನುಕೂಲವಾಗುವಂತಹ ಸ್ಥಳದಲ್ಲಿ 400 ರಿಂದ 500 ಬೆಡ್ ಸಾಮರ್ಥ್ಯದ ಆಸ್ಪತ್ರೆ ನಿರ್ಮಿಸಲು ನಗರದಲ್ಲಿ ಒಂದು ಉತ್ತಮ ಜಾಗವನ್ನು ನೋಡಿ, ಯೋಜನೆ ರೂಪಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಇತರೆ ಅಧಿಕಾರಿಗಳೊಂದಿಗೆ ಚರ್ಚಿಸಿ ಒಂದು ಸೂಕ್ತ ಸ್ಥಳ ನೋಡಿ, ಯೋಜನೆ ರೂಪಿಸಿ, ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ಮೆಗ್ಗಾನ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕರು, ಜಿಲ್ಲಾ ಶಸ್ತçಚಿಕಿತ್ಸಕರು, ಆರೋಗ್ಯ ಇಲಾಖೆ ಅಧಿಕಾರಿಗಳು, ನಗರ ನೀರು ಸರಬರಾಜು ಮಂಡಳಿ ಎಇ , ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/02/VID-20240229-WA0026.mp4
Tags: Jal Jeevan Mission ProjectKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMinister Madhu BangarappaNews_in_KannadaNews_KannadaShimogaShivamoggaNewsಜಲ ಜೀವನ ಮಿಷನ್ ಕಾಮಗಾರಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಮಧು ಬಂಗಾರಪ್ಪ
Share196Tweet123Send
Previous Post

ಸಾಗರ | ದೇವಾಲಯದ ದೇವಿ ಕೊರಳಲ್ಲಿದ್ದ ಮಾಂಗಲ್ಯ ಸರ ಕಳ್ಳತನ | ಆರೋಪಿ ಅಂದರ್

Next Post

ಮಹಾಕುಂಭ ಮೇಳಕ್ಕೆ ರಾಜ್ಯದಿಂದ ಮತ್ತೆರಡು ವಿಶೇಷ ರೈಲು | ಎಲ್ಲಿಂದ? ಯಾವತ್ತು? ಇಲ್ಲಿದೆ ವಿವರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಹಾಕುಂಭ 2025 | ಯಾತ್ರಾರ್ಥಿಗಳಿಗಾಗಿ ರೈಲ್ವೆ ಇಲಾಖೆಯಿಂದ ಐತಿಹಾಸಿಕ ನಿರ್ಣಯ | ಏನೆಲ್ಲಾ ವ್ಯವಸ್ಥೆಯಾಗಿದೆ?

ಮಹಾಕುಂಭ ಮೇಳಕ್ಕೆ ರಾಜ್ಯದಿಂದ ಮತ್ತೆರಡು ವಿಶೇಷ ರೈಲು | ಎಲ್ಲಿಂದ? ಯಾವತ್ತು? ಇಲ್ಲಿದೆ ವಿವರ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಆಂಧ್ರ ಸಿಎಂ ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಮನೆಗೆ ಪ್ರಧಾನಿ ಮೋದಿ ಭೇಟಿ | ಕಾರಣವೇನು?

ಆಂಧ್ರ ಸಿಎಂ ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಮನೆಗೆ ಪ್ರಧಾನಿ ಮೋದಿ ಭೇಟಿ | ಕಾರಣವೇನು?

May 10, 2026
ನೈಋತ್ಯ ರೈಲ್ವೆ ಮೈಸೂರು ವಿಭಾಗ ಪ್ರಶಸ್ತಿ | ಚಿಕ್ಕಜಾಜೂರು ನಿಲ್ದಾಣ ಬೆಸ್ಟ್ | ಶಿವಮೊಗ್ಗ ರೈಲ್ವೆ ಕಾಲೋನಿ ಅತ್ಯುತ್ತಮ

ನೈಋತ್ಯ ರೈಲ್ವೆ ಮೈಸೂರು ವಿಭಾಗ ಪ್ರಶಸ್ತಿ | ಚಿಕ್ಕಜಾಜೂರು ನಿಲ್ದಾಣ ಬೆಸ್ಟ್ | ಶಿವಮೊಗ್ಗ ರೈಲ್ವೆ ಕಾಲೋನಿ ಅತ್ಯುತ್ತಮ

May 10, 2026
ಮೊದಲ ದಿನವೇ ಡಿಎಂಕೆಗೆ ಸಿಎಂ ವಿಜಯ್ ಶಾಕ್ | ಹಿಂದಿನ ಅವಧಿಯ ಶ್ವೇತ ಪತ್ರ ಹೊರಡಿಸುತ್ತೇನೆ!

ಮೊದಲ ದಿನವೇ ಡಿಎಂಕೆಗೆ ಸಿಎಂ ವಿಜಯ್ ಶಾಕ್ | ಹಿಂದಿನ ಅವಧಿಯ ಶ್ವೇತ ಪತ್ರ ಹೊರಡಿಸುತ್ತೇನೆ!

May 10, 2026
ಕಾಂಗ್ರೆಸ್ ಎಲ್ಲಿ ಅಧಿಕಾರದಲ್ಲಿರುತ್ತದೋ ಅಲ್ಲೆಲ್ಲಾ ಗುಂಪುಗಾರಿಕೆ | ಪ್ರಧಾನಿ ಮೋದಿ ಟೀಕೆ

ಕಾಂಗ್ರೆಸ್ ಎಲ್ಲಿ ಅಧಿಕಾರದಲ್ಲಿರುತ್ತದೋ ಅಲ್ಲೆಲ್ಲಾ ಗುಂಪುಗಾರಿಕೆ | ಪ್ರಧಾನಿ ಮೋದಿ ಟೀಕೆ

May 10, 2026
ಭಾಷೆ, ಆಹಾರ, ವಿಹಾರ ಸನಾತನ ಸಂಸ್ಕೃತಿಗಳ ಪ್ರತೀಕವಾಗಿರಬೇಕು | ಜುಕ್ತಿ ಹಿರೇಮಠ ಸ್ವಾಮೀಜಿ

ಭಾಷೆ, ಆಹಾರ, ವಿಹಾರ ಸನಾತನ ಸಂಸ್ಕೃತಿಗಳ ಪ್ರತೀಕವಾಗಿರಬೇಕು | ಜುಕ್ತಿ ಹಿರೇಮಠ ಸ್ವಾಮೀಜಿ

May 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL