ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ವಿಶ್ವ ಯುವ ಕೌಶಲ್ಯ ದಿನಾಚರಣೆಯ ಅಂಗವಾಗಿ ಕೌಶಲ್ಯ ಸ್ಪೂರ್ತಿ ಶೀರ್ಷಿಕೆ ಅಡಿಯಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲೆಯ ಇಬ್ಬರು ಅಭ್ಯರ್ಥಿಗಳು ವಿಜೇತರಾಗಿದ್ದಾರೆ.
ಕು. ವರ್ಷಿತಾ ಬಿ.ಟಿ ಕಸ್ತೂರಿ ಬಾ ಮಹಿಳಾ ಪಿಯು ಕಾಲೇಜು, ಶಿವಮೊಗ್ಗ ಮತ್ತು ಕು.ಸಿಂಚನಾ ಎಸ್.ಕೆ. ಸೈಂಟ್ ಹೋಂ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಆನವಟ್ಟಿ, ಶಿವಮೊಗ್ಗ ಜಿಲ್ಲೆ. ಅನುಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಸ್ಥಾನದಲ್ಲಿ ವಿಜೇತರಾಗಿ ಜಿಲ್ಲೆಗೆ ಕೀರ್ತಿ ತಂದುಕೊಟ್ಟಿರುತ್ತಾರೆ. ಈ ಅಭ್ಯರ್ಥಿಗಳಿಗೆ ಜಿಲ್ಲಾಡಳಿತ, ಜಿಲಾ ್ಲಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ವಿದ್ಯಾಸಂಸ್ಥೆಯ ಪರವಾಗಿ ಅಭಿನಂದನೆಗಳನ್ನು ಈ ಮೂಲಕ ತಿಳಿಸುತ್ತಿದ್ದೇವೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ತಿಳಿಸಿದ್ದಾರೆ.
Also read: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಪರೀಕ್ಷಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post