ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಾಂಗ್ರೆಸ್ ಮೇಲೆ ಈ ಬಾರಿ ಜನರು ಪೂರ್ಣ ವಿಶ್ವಾಸವಿಟ್ಟಿದ್ದು, ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ. ನಾಡಿನ ಜನರ ಕಲ್ಯಾಣವಾಗುತ್ತದೆ ಎಂದು ಎಐಸಿಸಿ ಸದಸ್ಯ ಮಧು ಬಂಗಾರಪ್ಪ ಹೇಳಿದರು.
ಹಸೂಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಹೊಳೆಬೆನವಳ್ಳಿಯಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ಹಮ್ಮಿಕೊಂಡಿದ್ದ ಗ್ಯಾರಂಟಿ ಕಾರ್ಡ್ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಚುನಾವಣಾ ಸಂದರ್ಭದಲ್ಲಿ ಎಲ್ಲ ಪಕ್ಷದವರು ಬಂದು ಮತ ಕೇಳುತ್ತಾರೆ. ಆದರೆ ಬಡವರ ಪರವಾಗಿ ನಿಲ್ಲುವ ಏಕೈಕ ಪಕ್ಷ ಕಾಂಗ್ರೆಸ್ ಮಾತ್ರ. ಹಾಗಾಗಿ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಬೇಕು. ಬಿಜೆಪಿಯವರು ಜಾತಿ ಧರ್ಮದ ಮೇಲೆ ಸಮಾಜ ಒಡೆಯುತ್ತಾರೆ. ಇವರಿಗೆ ಮತ ನೀಡದೆ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸುವಂತೆ ಮನವಿ ಮಾಡಿದರು.
ಬಂಗಾರಪ್ಪನವರು ಮುಖ್ಯಮಂತ್ರಿ ಆದ ಅವಧಿಯಲ್ಲಿ ಆಶ್ರಯ ಮನೆ ನೀಡುವ ಮೂಲಕ ಬಡವರ ಕಲ್ಯಾಣ ಮಾಡಿದ್ದರು, ಆದರೆ ಬಿಜೆಪಿ ಸರ್ಕಾರದಲ್ಲಿ ಬಡವರಿಗೆ ಮನೆ ಹಂಚಿಕೆ ಮಾಡಿಲ್ಲ. ಯಾಕೆಂದರೆ 40% ಕಮಿಷನ್ ಸಿಗಲ್ಲ. ಹಾಗಾಗಿ, ಮನೆ ಹಂಚಿಕೆ ಮಾಡಿಲ್ಲ ಎಂದು ಟೀಕಿಸಿದರು.
ಬಿಜೆಪಿ ಸರ್ಕಾರ ಗ್ರಾಮೀಣ ಪ್ರದೇಶಕ್ಕೆ 7 ತಾಸು ವಿದ್ಯುತ್ ನೀಡುತ್ತಿಲ್ಲ. ಹೊರ ರಾಜ್ಯಕ್ಕೆ ವಿದ್ಯುತ್ ಮಾರಿಕೊಳ್ಳುತ್ತಿದ್ದಾರೆ. ನಮಗೆ ಜಾಸ್ತಿ ಶುಲ್ಕ ವಿಧಿಸಿ, ಹೊರ ರಾಜ್ಯಕ್ಕೆ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ನರೇಂದ್ರ ಮೋದಿ 15 ಲಕ್ಷ ಹಾಕುತ್ತೇನೆ ಎಂದು ಹೇಳಿ ಮತ ಪಡೆದುಕೊಂಡ್ರು ಆದರೆ 15 ಪೈಸೆ ಕೊಟ್ಟಿಲ್ಲ. ಬರೀ ಸುಳ್ಳು ಹೇಳುತ್ತಿದ್ದಾರೆ. ಬಿಜೆಪಿಯ ಸುಳ್ಳಿನ ಖಜಾನೆ ಖಾಲಿಯಾಗಿದೆ ಎಂದರು.
ಬಿಜೆಪಿಯವರದು 40% ಸರ್ಕಾರ ಎಂಬುದು ಸಾಬೀತಾಗಿದೆ. ಸರ್ಕಾರದ ಮೇಲೆ 40% ಕಮಿಷನ್ ಆರೋಪ ಮಾಡಿದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಂಣ್ಣ ಅವರನ್ನು ರಾತ್ರೋರಾತ್ರಿ ಬಂಧಿಸಿದ್ದರು. ಆದರೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮೇಲೆ ಕೋಟಿ ಕೋಟಿ ಹಣ ಸಿಕ್ಕಿದ್ದರೂ ಬಂಧಿಸಿಲ್ಲ. ಲೂಕ್ ಔಟ್ ನೋಟಿಸ್ ಕೊಟ್ಟರೂ ಅವರ ಬಂಧನ ಯಾಕಿಲ್ಲ. ಸರ್ಕಾರ ಅವರನ್ನು ರಕ್ಷಣೆ ಮಾಡುತ್ತಿದೆ ಎಂದು ಆರೋಪಿಸಿದರು.
ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎನ್. ರಮೇಶ್ ಮಾತನಾಡಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾತ್ರ ಹಳ್ಳಿಯ ಮತ್ತು ಬಡವರ ಉದ್ಧಾರವಾಗುತ್ತದೆ. ಬಿಜೆಪಿಯ ಮೇಲೆ ಜನ ನಂಬಿಕೆಯನ್ನೇ ಕಳೆದುಕೊಂಡಿದ್ದಾರೆ. ಕಾಂಗ್ರೆಸ್ ತನ್ನ ಸಾಮ್ರಾಜ್ಯವನ್ನು ಮತ್ತೆ ವಿಸ್ತರಿಸಲಿದೆ. ಈ ಹಿನ್ನಲೆಯಲ್ಲಿಯೇ ಗ್ಯಾರಂಟಿ ಕಾರ್ಡ್ ಅನ್ನು ಪಕ್ಷದ ವತಿಯಿಂದ ನಾವು ಪ್ರಣಾಳಿಕೆ ರೂಪದಲ್ಲಿ ನೀಡುತ್ತಿದ್ದೇವೆ. ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ., ಎಲ್ಲಾ ಮನೆಗಳಿಗೂ 200 ಯುನಿಟ್ ವಿದ್ಯುತ್ ಉಚಿತ ಹಾಗೂ ಬಿಪಿಎಲ್ ಕಾರ್ಡ್ ದಾರರಿಗೆ 10೦ ಕೆಜಿ ಅಕ್ಕಿ ಉಚಿತವಾಗಿ ನೀಡುತ್ತೇವೆ. ಈ ಬಾರಿ ಕಾಂಗ್ರೆಸ್ 135 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದು ಸ್ಪಷ್ಟ ಬಹುಮತ ಪಡೆಯಲಿದೆ ಎಂದರು.
Also read: ಅ.ಪ. ರಾಮಭಟ್ಟರ ಹೆಸರಿನಲ್ಲಿ ಟ್ರಸ್ಟ್ ರೂಪಿಸಲು ಚಿಂತನೆ: ಶಾಸಕ ಈಶ್ವರಪ್ಪ
ಕಾಂಗ್ರೆಸ್ ಮುಖಂಡ ವಿಜಯ್ ಕುಮಾರ್ ಮಾತನಾಡಿ, ಗೃಹ ಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು ಹೆಣ್ಣು ಮಕ್ಕಳ ಖಾತೆಗೆ ಎರಡು ಸಾವಿರ ಹಣ ಹಾಕುತ್ತೇವೆ. ಪ್ರತಿಯೊಬ್ಬರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ನಾರಾಯಣ ಸ್ವಾಮಿ ಮಾತನಾಡಿ, ಸ್ವಾತಂತ್ರ ನಂತರ ಬಡವರ ಪರವಾಗಿ ರಚನಾತ್ಮಕವಾಗಿ ಕೆಲಸ ಮಾಡಿದ್ದರೆ ಅದು ಕಾಂಗ್ರೆಸ್ ಪಕ್ಷ ಮಾತ್ರ. ಆಶ್ರಯ ನಿವೇಶನ, ಆರಾಧಾನ, ಗ್ರಾಮೀಣ ಕೃಪಾಂಕ ಸೇರಿದಂತೆ ಬಡವರ ಪರವಾಗಿ ಸಾಕ? ಕೆಲಸ ಮಾಡಿದೆ. ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸುವಂತೆ ಮನವಿ ಮಾಡಿದರು.
ಮಾಜಿ ಶಾಸಕ ಆರ್. ಪ್ರಸನ್ನ ಕುಮಾರ್ ಮಾತನಾಡಿ, ಬಿಜೆಪಿ ಸರ್ಕಾರ ಬಡವರ ಬಗ್ಗೆ ಕಾಳಜಿ ಇಲ್ಲ. ಭ್ರ?ಚಾರ ಮಾಡುವುದರಲ್ಲೆ ಮುಳುಗಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಡಾ. ಶ್ರೀನಿವಾಸ್ ಕರಿಯಣ್ಣ, ವೈ.ಹೆಚ್. ನಾಗರಾಜ್, ಎಸ್.ಪಿ. ದಿನೇಶ್, ವೇದಾ ವಿಜಯಕುಮಾರ್, ಜಿ.ಡಿ. ಮಂಜುನಾಥ್, ಹನುಮಂತು. ಸಿರಿಗೆರೆ ನಾಗರಾಜ್, ಕೃಷ್ಣಪ್ಪ ಮೊದಲಾದವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post