No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Saturday, August 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಾದಕ ವಸ್ತುಗಳ ವಿರುದ್ಧ ಸಮರ ಸಾರಲು ಪೊಲೀಸರೊಂದಿಗೆ ಸಹಕರಿಸಿ: ಎಸ್’ಪಿ ಮಿಥುನ್ ಕುಮಾರ್ ಕರೆ

kalpa News by kalpa News
June 26, 2024
in ಶಿವಮೊಗ್ಗ
0
ವಾಹನ ಸವಾರರು ಸಂಚಾರಿ ನಿಯಮ ಉಲ್ಲಂಘಿಸಿದರೆ ದಂಡ ಖಚಿತ: ಎಸ್‌ಪಿ ಮಿಥುನ್‌ಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಾದಕ ವಸ್ತುಗಳಿಂದ ದೂರವಿರಿ. ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ #SP Mithun Kumar ಕರೆ ನೀಡಿದರು.

ಅವರು ಇಂದು ಜಿಲ್ಲಾ ಪೊಲೀಸ್ ಇಲಾಖೆ, ಕೋಟೆ ಪೊಲೀಸ್ ಠಾಣೆ. ಸಹ್ಯಾದ್ರಿ ಕಲಾ ಕಾಲೇಜ್ ಇವರ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಮಾದಕ ವಸ್ತುಗಳ ವಿರೋಧಿ ದಿನಾಚರಣೆಯ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇತ್ತೀಚಿನ ವರ್ಷಗಳಲ್ಲಿ ಯುವಕರು ಅದರಲ್ಲೂ ವಿದ್ಯಾರ್ಥಿಗಳು ಮಾದಕ ವಸ್ತುಗಳತ್ತ ಆಕರ್ಷಿತರಾಗುತ್ತಿದ್ದಾರೆ. ಕುತೂಹಲಕ್ಕಾಗಿ ಮಾದಕ ವಸ್ತುಗಳ ಚಟವನ್ನು ಅಂಟಿಸಿಕೊಂಡು ಅದಕ್ಕೆ ದಾಸರಾಗಿ ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಹದಿಹರೆಯದವರಲ್ಲಿ ಈ ಸಮಸ್ಯೆ ಹೆಚ್ಚಾಗುತ್ತಿರುವುದು ಅತ್ಯಂತ ಅಪಾಯಕಾರಿಯಾಗಿದೆ. ಯುವಕರು ಇದರಿಂದ ಹೊರ ಬರಬೇಕು. ಪೊಲೀಸ್ ಇಲಾಖೆಯ ಜೊತೆಗೆ ಪೋಷಕರು, ಶಿಕ್ಷಕರು, ಸಂಘ ಸಂಸ್ಥೆಗಳು ಹೀಗೆ ಎಲ್ಲರೂ ಸೇರಿ ಮಾದಕ ವಸ್ತುಗಳ ವಿರುದ್ಧ ಸಮರ ಸಾರಿದಾಗ ಮಾತ್ರ ಇದನ್ನು ತಡೆಯಲು ಸಾಧ್ಯ ಎಂದರು.

ಮುಖ್ಯವಾಗಿ ವಿದ್ಯಾರ್ಥಿಗಳು ಈ ಬಗ್ಗೆ ಜಾಗೃತರಾಗಬೇಕಾಗಿದೆ. ಒಳ್ಳೆಯ ಸ್ನೇಹಿತರನ್ನು ಪಡೆಯಿರಿ. ಯಾರಾದರೂ ದುಶ್ಚಟಕ್ಕೆ ಬಲಿಯಾಗಿದ್ದರೆ ಆ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ. ಪೋಷಕರು ಕೂಡ ತಮ್ಮ ಮಕ್ಕಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದರು.

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರೆಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿ, ಮಾದಕ ವ್ಯಸನಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದವರು ಕೂಡ ಗಾಂಜಾ ಬೆಳೆಯುವ ಉದಾಹರಣೆ ಇದೆ. ವಿದ್ಯಾವಂತರೆ ಮಾದಕ ವ್ಯಸನಿಗಳಾಗಿ ಸಮಾಜಕ್ಕೆ ಕಂಟಕವಾಗುತ್ತಿದ್ದಾರೆ. ಸಮಾಜದ ಹಿತ ಕಾಪಾಡುವವರೇ ಈ ರೀತಿಯಾದರೆ ಭವಿಷ್ಯದ ಗತಿ ಏನು? ಇದನ್ನು ತಪ್ಪಿಸಬೇಕು ಎಂಬ ಹಿನ್ನಲೆಯಲ್ಲಿ ಇಂತಹ ಜಾಗೃತಿ ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆ ಹಮ್ಮಿಕೊಂಡಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಸೈಯದ್ ಸನಾವುಲ್ಲಾ ಮಾತನಾಡಿ, ಇದೊಂದು ಉತ್ತಮ ಕಾರ್ಯಕ್ರಮ. ವಿದ್ಯಾರ್ಥಿಗಳು ಪೋಷಕರ ಕಷ್ಟಗಳನ್ನು ನೆನಪು ಮಾಡಿಕೊಳ್ಳಿ. ಜೊತೆಗೆ ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ. ದುಶ್ಚಟಗಳಿಂದ ದೂರವಿರಿ ಎಂದರು.

Also read: ಚಿಕ್ಕಂದಿನಿಂದಲೇ ಮಕ್ಕಳಿಗೆ ವಿದ್ಯೆಯೊಂದಿಗೆ ಸಂಸ್ಕಾರ ಕೊಡಿ: ಶೃಂಗೇರಿ ವಿಧುಶೇಖರ ಶ್ರೀಗಳ ಸಲಹೆ

ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ.ಕೆ.ಎನ್. ಮಂಜುನಾಥ್ ಮಾತನಾಡಿ, ಪೊಲೀಸ್ ಇಲಾಖೆಯ ಅಂಕಿ ಅಂಶಗಳು ಮಾದಕ ವ್ಯಸನಿಗಳು ಹೆಚ್ಚಾಗುತ್ತಿರುವ ಬಗ್ಗೆ ಆತಂಕ ಮೂಡಿಸುತ್ತವೆ. ಕೆಲವು ವರ್ಷಗಳ ಹಿಂದೆ ವರ್ಷಕ್ಕೆ ಮೂರು ನಾಲ್ಕು ಗಾಂಜಾ ಕೇಸ್ ಗಳು ಇರುತ್ತಿದ್ದವು. ಈಗ ವರ್ಷಕ್ಕೆ ಮುನ್ನೂರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ ಎಂದರೆ ಇದನ್ನು ತಡೆಗಟ್ಟಬೇಕಾದ ಅಗತ್ಯವಿದೆ ಎಂದರು.

ಕೋಟೆ ಪೊಲೀಸ್ ಠಾಣೆಯ ರವಿಕುಮಾರ್ ಅವರು ಪ್ರಾತ್ಯಕ್ಷಿಕೆ ಮೂಲಕ ಸೈಬರ್ ಅಪರಾಧಗಳು, ಇದರಿಂದ ಎಚ್ಚರಿಕೆ ವಹಿಸಬೇಕಾದ ಕ್ರಮಗಳು, ಮೊಬೈಲ್ ನ ಕೆಲವು ಆಪ್ ಗಳಿಂದ ಆಗುವ ತೊಂದರೆಗಳು, ಹಣ ಕದಿಯುವ ಜಾಲ ಮುಂತಾದ ವಿಷಯಗಳ ಕುರಿತಂತೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದರು.

ಕಾರ್ಯಕ್ರಮದಲ್ಲಿ ಡಿ.ವೈ.ಎಸ್.ಪಿ. ಬಾಬು ಅಂಜನಪ್ಪ, ಕೋಟೆ ಪೊಲೀಸ್ ಠಾಣೆಯ ಕೊಪ್ಪದ್ ಸಿ.ಆರ್. ಮುಂತಾದವರಿದ್ದರು. ಪ್ರಣತಿ ಪ್ರಾರ್ಥಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/05/Kumadwathi-1.mp4
https://kalpa.news/wp-content/uploads/2024/04/VID-20240426-WA0008.mp4

      

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsSP Mithun Kumarಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚಿಕ್ಕಂದಿನಿಂದಲೇ ಮಕ್ಕಳಿಗೆ ವಿದ್ಯೆಯೊಂದಿಗೆ ಸಂಸ್ಕಾರ ಕೊಡಿ: ಶೃಂಗೇರಿ ವಿಧುಶೇಖರ ಶ್ರೀಗಳ ಸಲಹೆ

Next Post

ಸೊರಬ | ಅಪರಿಚಿತ ವಾಹನ ಡಿಕ್ಕಿಗೆ ದನಗಳ ಭೀಕರ ಸಾವು | ಬಿಡಾಡಿ ದನಗಳ ಮಾಲೀಕರ ವಿರುದ್ಧ ಕ್ರಮಕ್ಕೆ ಆಗ್ರಹ

kalpa News

kalpa News

Next Post
ಸೊರಬ | ಅಪರಿಚಿತ ವಾಹನ ಡಿಕ್ಕಿಗೆ ದನಗಳ ಭೀಕರ ಸಾವು | ಬಿಡಾಡಿ ದನಗಳ ಮಾಲೀಕರ ವಿರುದ್ಧ ಕ್ರಮಕ್ಕೆ ಆಗ್ರಹ

ಸೊರಬ | ಅಪರಿಚಿತ ವಾಹನ ಡಿಕ್ಕಿಗೆ ದನಗಳ ಭೀಕರ ಸಾವು | ಬಿಡಾಡಿ ದನಗಳ ಮಾಲೀಕರ ವಿರುದ್ಧ ಕ್ರಮಕ್ಕೆ ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL