ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಪರಿಕಲ್ಪನೆಯಂತೆ ಹಳ್ಳಿಗಳು ಬಲಿಷ್ಠಗೊಂಡಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ಅಭಿಪ್ರಾಯಪಟ್ಟರು.
ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿ ಆವರಣದಲ್ಲಿ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣಗೊಳಿಸಿ ಮಾತನಾಡಿದ ಅವರು ನಮ್ಮ ದೇಶದಲ್ಲಿ ಗಡಿಯನ್ನು ಕಾಯುವ ಯೋಧ, ಅನ್ನ ನೀಡುವ ರೈತ, ಶಿಕ್ಷಣ ನೀಡುವ ಶಿಕ್ಷಕರಿಗೆ ಅಮೂಲ್ಯವಾದ ಸ್ಥಾನವಿದೆ. ಭಾರತ ದೇಶ ಅತ್ಯಧಿಕ ಮಾನವ ಸಂಪನ್ಮೂಲವನ್ನು ಹೊಂದಿದ್ದು ಅಮೃತಮಹೋತ್ಸವದ ಈ ಶುಭ ಸಂದರ್ಭದಲ್ಲಿ ಇತಿಹಾಸವನ್ನು ಆದರ್ಶವಾಗಿಟ್ಟುಕೊಂಡು ಮುಂದಿನ ನಾವಿನ್ಯ ಭವಿಷ್ಯದ ಕುರಿತು ಆಲೋಚಿಸಬೇಕಿದೆ ಎಂದರು.

Also read: ಸಾವರ್ಕರ್ ಫ್ಲೆಕ್ಸ್ ವಿವಾದ: ಶಿವಮೊಗ್ಗ ನಗರದಲ್ಲಿ ಎರಡು ದಿನ 144 ಸೆಕ್ಷನ್ ಜಾರಿ
ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ ಮಾತನಾಡಿ ನಮ್ಮ ಹಿರಿಯರು ಹಾಕಿಕೊಟ್ಟ ನೆಲೆಗಟ್ಟುಗಳು ಮುಂದಿನ ತಲೆಮಾರಿಗೆ ಸದಾ ಸ್ಪೂರ್ತಿದಾಯಕ ಎಂದು ಹೇಳಿದರು.


 
	    	



 Loading ...
 Loading ... 
							



 
                
Discussion about this post