No Result
View All Result
Sagara Engulfed In The Ocean of Music
English Articles

Sagara Engulfed In The Ocean of Music

by ಕಲ್ಪ ನ್ಯೂಸ್
March 23, 2026
0

Kalpa Media House  |  Special Article by Rasikapriya  | An invigorating music festival held recently at Sagara, Shimoga Dist., took...

Read moreDetails
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
  • Advertise With Us
  • Grievances
  • About Us
  • Contact Us
Tuesday, March 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗೋಹತ್ಯೆ? ಹಾಗಾದರೆ ಈ ವೀಡಿಯೋ ಸುಳ್ಳೇ? ಕೆಡಿಪಿ ಸಭೆಯಲ್ಲಿ ಎಂಎಲ್’ಸಿ ಬಲ್ಕಿಷ್ ಬಾನುಗೆ ಶಾಸಕ ಚೆನ್ನಿ ಟಕ್ಕರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 29, 2024
in ಶಿವಮೊಗ್ಗ
0
ಗೋಹತ್ಯೆ? ಹಾಗಾದರೆ ಈ ವೀಡಿಯೋ ಸುಳ್ಳೇ? ಕೆಡಿಪಿ ಸಭೆಯಲ್ಲಿ ಎಂಎಲ್’ಸಿ ಬಲ್ಕಿಷ್ ಬಾನುಗೆ ಶಾಸಕ ಚೆನ್ನಿ ಟಕ್ಕರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕೃಷಿ, ತೋಟಗಾರಿಕೆ ಹಾಗೂ ಗೋ ಹತ್ಯೆ ನಿಷೇಧದ ಬಗ್ಗೆ ಸುಧೀರ್ಘ ಚರ್ಚೆಗೆ ಇಂದಿನ  2024-25ನೇ ಸಾಲಿನ ಪ್ರಥಮ ತ್ರೈಮಾಸಿಕ ಕೆಡಿಪಿ ಸಭೆ #KDP Meeting ಸಾಕ್ಷಿಯಾಯಿತು.

ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ #Madhu Bangarappa ಅಧ್ಯಕ್ಷತೆಯನ್ನು ವಹಿಸಿದ್ದ ಈ ಸಭೆಯ ಆರಂಭದಲ್ಲಿ ವಿಧಾನಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿ ರೈತರಿಗೆ ನಿಗಧಿತ ಸಮಯದಲ್ಲಿ ಸೌಲಭ್ಯಗಳು ದೊರಕದೇ ಇರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ನಿಗಧಿತ ಸಮಯದಲ್ಲಿ ಕೆಡಿಪಿ ಸಭೆಯನ್ನೇ ಕರೆಯದೇ ರೈತರಿಗೆ ಹೇಗೆ ಸೌಲಭ್ಯ ಒದಗಿಸುತ್ತೀರಿ ಎಂದು ಆಕ್ರೋಶ ಭರಿತವಾಗಿ ಪ್ರಶ್ನಿಸಿದರು.
ಸಂಬಂಧಿಸಿದ ಅಧಿಕಾರಿಗೆ ಇದಕ್ಕೆ ಉತ್ತರ ನೀಡಿ 275 ಮನೆಗಳಿಗೆ ಹಾನಿಯಾಗಿದೆ. 2.28 ಕೋಟಿ ರೂ. ಪರಿಹಾರ ನೀಡಲಾಗಿದೆ ಎಂದು ತಿಳಿಸಿದರು.

ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿ ಗುರುದತ್ತ್ ಹೆಗಡೆ ಕಳೆದ ಕೆಡಿಪಿ ಸಭೆ ಕರೆಯುವ ಸಂದರ್ಭದಲ್ಲಿಯೇ ಚುನಾವಣೆ ಪ್ರಕಟಗೊಂಡಿದ್ದರಿಂದ ಅಂದಿನ ಸಭೆಯನ್ನು ಮುಂದೂಡಲಾಯಿತು. ಅದಕ್ಕೆ ಬೇರೆ ಯಾವ ಕಾರಣವೂ ಇಲ್ಲ ಅಂದ ಅವರು ಇಲ್ಲಿಯವರೆಗೆ 68 ಕೋಟಿ ರೂ. ಬೆಳೆ ವಿಮೆ ಬಿಡುಗಡೆ ಮಾಡಿರುವುದಾಗಿ ತಿಳಿಸಿದರು.
ಈ ಬಾರಿ ಪೂರ್ವ ಮುಂಗಾರಿನಲ್ಲಿ ಶೇ.36ರಷ್ಟು ಮಳೆ ಕೊರತೆ ಇರುವುದಾಗಿ ಸಭೆಗೆ ತಿಳಿಸಲಾಗಿದೆ. ಶಾಸಕಿ ಶಾರದಪೂರ್ಯನಾಯ್ಕ್, #Sharada Pooryanaik ಮನೆಗಳಿಗೆ ಪರಿಹಾರ ನೀಡುವ ವಿಷಯವಾಗಿ ವಿಷಯವನ್ನು ಪ್ರಸ್ತಾಪಿಸಿ ಶಿವಮೊಗ್ಗ ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ “ಬಿ ಖಾತೆ” ಹೊಂದಿದ ಮನೆಗಳಿಗೆ ನೆರೆ ಪರಿಹಾರ ನೀಡಬೇಕು ಎಂಬ ನಿಯಮವಿದೆ. ಆದರೆ ಅಧಿಕಾರಿಗಳು ನೆರೆ ಪೀಡಿತರನ್ನು ಇಲ್ಲದ ನೆಪ ಹೇಳಿ ಪರಿಹಾರದಿಂದ ವಂಚಿಸುತ್ತಿದ್ದಾರೆ ಎಂಬ ಆಕ್ರೋಶ ವ್ಯಕ್ತಪಡಿಸಿದರು.

ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿ ಈ ಕುರಿತು ರಾಜೀವ್ ಗಾಂಧಿ #Rajeev Gandhi ವಸತಿ ನಿಗಮಕ್ಕೆ ಪತ್ರ ಬರೆಯಲಾಗಿದೆ. ಉತ್ತರ ಬಂದ ತಕ್ಷಣ ಪರಿಹಾರ ಕೊಡಿಸುವ ಕ್ರಮ ಕೈಗೊಳ್ಳಲಾಗುವುದು ಎಂದರು.
ಶಾಸಕ ಅರಗ ಜ್ಞಾನೇಂದ್ರ ಇದಕ್ಕೆ ಧ್ವನಿಗೂಡಿಸಿ ಜನರು ಕಂದಾಯ ಕಟ್ಟಿದ್ದಾರೆ. ಉಳಿದ ತೆರಿಗೆಯನ್ನು ಸರ್ಕಾರಕ್ಕೆ ಪಾವತಿಸಿದ್ದಾರೆ. ಆದರೂ ಅವರಿಗೆ ಸರ್ಕಾರ ಪರಿಹಾರ ನೀಡುವಲ್ಲಿ ಮೀನಾಮೇಷ ಏಣಿಸುತ್ತಿದೆ ಎಂದು ಆರೋಪಿಸಿದರು. ಅಧಿಕೃತ, ಅನಧಿಕೃತ ಮನೆಗಳು ಯಾವುವು ಎಂಬುವುದನ್ನು ಅಧಿಕಾರಿಗಳು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಿಸಿ ಅಧಿಕೃತ, ಅನಧಿಕೃತ ಎಂಬ ವಿಂಗಡಣೆ ಸಲ್ಲ, ಇದಕ್ಕೆ ಸಂಬಂಧಿಸಿದ ಸರ್ಕಾರದ ಮಾರ್ಗದರ್ಶಿ ಇನ್ನೂ ಬದಲಾವಣೆಯಾಗಿಲ್ಲ. ಆದ್ದುದರಿಂದ ಸಂತ್ರಸ್ಥರಿಗೆ ಪರಿಹಾರ ನೀಡಿ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಚರ್ಚೆಯಲ್ಲಿ ಪಾಲ್ಗೊಂಡು ಕೃಷಿ ಇಲಾಖೆಗೆ ಸಂಬಂಧಿಸಿದ 2024-25ರ ಕ್ರಿಯಾ ಯೋಜನೆ ಇನ್ನೂ ಸಿದ್ದವಾಗಿಲ್ಲ. 5 ಪಶುಪಾಲನಾ ಅಧಿಕಾರಿಗಳು ಉನ್ನತ ವ್ಯಾಸಂಗಕ್ಕೆ ತೆರಳಿದ್ದಾರೆ. ಎಂಬುವುದನ್ನು ಸಭೆ ಗಮನಕ್ಕೆ ತಂದಾಗ ಇನ್ನೂ 10-15 ದಿನಗಳಲ್ಲಿ ಇದನ್ನು ಸಿದ್ದಪಡಿಸುವುದಾಗಿ ಕೃಷಿ ಅಧಿಕಾರಿಗಳು ತಿಳಿಸಿದರು.ಇದಕ್ಕೆ ಉತ್ತರಿಸಿದ ಸಚಿವರು ಎಲ್ಲಾ ಇಲಾಖೆಗಳಲ್ಲಿ ಇದೇ ರೀತಿ ತೊಂದರೆಯಿದೆ. ಇದನ್ನು ನೀಗಿಸಲು ಚಿಂತನೆ ನಡೆಸುತ್ತಿರುವುದಾಗಿ ಹೇಳಿದರು.

Also read: Union Minister H.D. Kumaraswamy to visit Bhadravathi VISL Plant on Sunday

ಬೆಳೆ ವಿಮೆಗೆ ಸಂಬಂಧಿಸಿದಂತೆ ಶಾಸಕ ಅರಗಜ್ಞಾನೇಂದ್ರ #Araga Gnanendra ವಿಷಯ ಪ್ರಸ್ತಾಪಿಸಿ ತಮ್ಮ ತಾಲ್ಲೂಕಿನಲ್ಲಿ ಯಾವುದೇ ಮಳೆ ಮಾಪಾಕವು ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ. ನೀವು ಬೆಳೆ ವಿಮೆ ಹೇಗೆ ಅಂದಾಜು ಮಾಡುತ್ತೀರಿ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಅಧಿಕಾರಿಗಳು 3583 ರೈತರಿಗೆ ಬೆಳೆ ವಿಮೆ  ಬಾಕಿ ಇದೆ ಎಂದು ತಿಳಿಸಿದರು.

ಅಡಿಕೆ ಬೆಳೆ ಸುಧೀರ್ಘ ಬೆಳೆಯಾಗಿದ್ದು, ತಮ್ಮ ಪಹಣಿಯ ಕಾಲಂನಲ್ಲಿ ಅಡಿಕೆ ಬೆಳೆಯ ಉಲ್ಲೇಖವೇ ನಾಪತ್ತೆಯಾಗಿರುವ ವಿಷಯವನ್ನು ಸಭೆ ಗಮನಕ್ಕೆ ತಂದರು. ಸುಧೀರ್ಘ ಬೆಳೆಗಳಿಗೆ ಪ್ರತಿವರ್ಷ ಬೆಳೆ ನಮೂದು ಮಾಡುವ ಪದ್ಧತಿಯನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.
ಇತ್ತೀಚೆಗೆ ನಡೆಯುತ್ತಿರುವ ಗೋಹತ್ಯೆ ಕುರಿತು ಪ್ರಸ್ತಾಪಿಸಿದ ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ, ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಅಸ್ತಿತ್ವದಲ್ಲಿಯೇ ಇದೆಯೇ ಎಂದು ಖಾರವಾಗಿಯೇ ಸಚಿವರನ್ನು ಪ್ರಶ್ನಿಸಿದರು.

ಜಿಲ್ಲೆಯಲ್ಲಿ ಅವ್ಯಾಹತವಾಗಿ ಗೋಹತ್ಯೆ ನಡೆಯುತ್ತಿದೆ. ಗೋಕಳ್ಳರನ್ನು ಪೊಲೀಸರಿಗೆ ಹಿಡಿದುಕೊಟ್ಟರು, ಹಿಡಿದುಕೊಟ್ಟವರ ಮೇಲೆಯೇ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ಹಸುಗಳ ಮಾರಣಹೋಮವನ್ನು ನಿಲ್ಲಿಸುವ ಕ್ರಮವಾಗಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಭಾನು, ಮಧ್ಯಪ್ರವೇಶಿಸಿ ಇತ್ತೀಚಿಗೆ ನಡೆದ ಬಕ್ರೀದ್ ಹಬ್ಬದಲ್ಲಿ ಯಾವುದೇ ಹಸುವನ್ನು ಹತ್ಯೆಗೈಯ್ಯಲ್ಲಿಲ್ಲ. ಅತ್ಯಂತ ಶಾಂತಿಯುತವಾಗಿಯೇ ಹಬ್ಬವನ್ನು ಆಚರಿಸಲಾಗಿದೆ. ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳುತ್ತಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದಾಗ ಎಸ್.ಎನ್. ಚನ್ನಬಸಪ್ಪನವರು ತಮ್ಮ ಮೊಬೈಲ್‍ನಲ್ಲಿದ್ದ ಗೋಹತ್ಯೆ ಸಂಬಂಧಿಸಿದ ವೀಡಿಯೋ ಮತ್ತು ಪೋಟೋಗಳನ್ನು ತೋರಿಸಿ ಹಾಗಾದರೆ ಇದು ಸುಳ್ಳೇ ಎಂದು ಕುಟುಕಿದರು.
ಭದ್ರಾವತಿಗೆ ಸಂಬಂಧಿಸಿದ ವಿಷಯದ ಕುರಿತು ಶಾಸಕ ಎಸ್.ಎಲ್. ಬೋಜೇಗೌಡ ಮಾಹಿತಿ ಕೇಳಿದಾಗ ಸಂಬಂಧಿಸಿದ ಅಧಿಕಾರಿಗಳು ತಾವು ಆ ಮಾಹಿತಿಯನ್ನು ತಂದಿಲ್ಲ ಎಂದು ಹೇಳಿದಾಗ ಶಾಸಕರು ಅಧಿಕಾರಿಗಳು ಸಭೆಗೆ ಬರುವಾಗ ಮಾಹಿತಿ ತರಬೇಕೆಂಬ ತಿಳುವಳಿಕೆಯನ್ನು ಹೊಂದಿರಬೇಕು. ಮಾಹಿತಿಯನ್ನು ತರದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಸಚಿವರನ್ನು ಒತ್ತಾಯಿಸಿದಾಗ ಈ ಅಧಿಕಾರಿಗೆ ನೋಟೀಸ್ ನೀಡಿ ಕ್ರಮ ಕೈಗೊಳ್ಳಿ ಎಂದು ಮಧುಬಂಗಾರಪ್ಪ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಡಿ.ಎಸ್.ಅರುಣ್, ಶಾಸಕÀ ಸಂಗಮೇಶ್, ಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ್‍ಗೌಡ, ಜಿ.ಪಂ. ಸಿ.ಇ.ಓ. ಸುಧಾಕರ್ ಸ್ನೇಹಲ್ ಲೋಖಂಡೆ ಮೊದಲಾದವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

 

Tags: #Sharada PooryanaikAraga GnanendraKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteKDP MeetingLatestNewsKannadaLocalNewsMadhu BangarappaMalnadNewsNews_in_KannadaNews_KannadaRajeev GandhiShimogaShivamoggaNewsಕೆಡಿಪಿ ಸಭೆಮಧುಬಂಗಾರಪ್ಪಮಲೆನಾಡು_ಸುದ್ಧಿರಾಜೀವ್ ಗಾಂಧಿಶಾರದಪೂರ್ಯನಾಯ್ಕ್ಶಾಸಕ ಅರಗಜ್ಞಾನೇಂದ್ರಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet123Send
Previous Post

Union Minister H.D. Kumaraswamy to visit Bhadravathi VISL Plant on Sunday

Next Post

ಯೋಗದಿಂದ ದೈಹಿಕ, ಮಾನಸಿಕ, ಭಾವನಾತ್ಮಕ ಸಮಸ್ಯೆಗೆ ಪರಿಹಾರ | ಡಾ.ಎಚ್.ಎ. ಶಶಿರೇಖಾ ಅಭಿಮತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಯೋಗದಿಂದ ದೈಹಿಕ, ಮಾನಸಿಕ, ಭಾವನಾತ್ಮಕ ಸಮಸ್ಯೆಗೆ ಪರಿಹಾರ | ಡಾ.ಎಚ್.ಎ. ಶಶಿರೇಖಾ ಅಭಿಮತ

ಯೋಗದಿಂದ ದೈಹಿಕ, ಮಾನಸಿಕ, ಭಾವನಾತ್ಮಕ ಸಮಸ್ಯೆಗೆ ಪರಿಹಾರ | ಡಾ.ಎಚ್.ಎ. ಶಶಿರೇಖಾ ಅಭಿಮತ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಮುಳ್ಳಿನಿಂದ ಶಾಲನ್ನು ಬಿಡಿಸಿ ಹೊದೆಸುವ ಮೂಲಕ ಕಷ್ಟದಲ್ಲಿದ್ದ ಕುಟುಂಬಕ್ಕೆ ರಾಮಚಂದ್ರಾಪುರ ಮಠ ಶ್ರೀರಕ್ಷೆ

ಮುಳ್ಳಿನಿಂದ ಶಾಲನ್ನು ಬಿಡಿಸಿ ಹೊದೆಸುವ ಮೂಲಕ ಕಷ್ಟದಲ್ಲಿದ್ದ ಕುಟುಂಬಕ್ಕೆ ರಾಮಚಂದ್ರಾಪುರ ಮಠ ಶ್ರೀರಕ್ಷೆ

March 23, 2026
Sagara Engulfed In The Ocean of Music

Sagara Engulfed In The Ocean of Music

March 23, 2026
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ಹುಬ್ಬಳ್ಳಿ-ವಿಜಯಪುರ ನಡುವಿನ ರೈಲುಗಳ ಸೇವೆ ಪೂರ್ಣ ಪುನಾರಂಭ

March 23, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಬೆಂಗಳೂರು-ತಿರುಪತಿ, ಸುಬ್ರಹ್ಮಣ್ಯ-ಮಂಗಳೂರು ಸೇರಿ 9 ಪ್ರಮುಖ ರೈಲುಗಳ ಮಹತ್ವದ ಅಪ್ಡೇಟ್

March 23, 2026
ಸಮೀಕ್ಷಾ ರೆಡ್ಡಿ ಸಾವಿನ ಪ್ರಕರಣ | ಲಯನ್ ಸಫಾರಿಗೆ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರ ಭೇಟಿ

ಸಮೀಕ್ಷಾ ರೆಡ್ಡಿ ಸಾವಿನ ಪ್ರಕರಣ | ಲಯನ್ ಸಫಾರಿಗೆ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರ ಭೇಟಿ

March 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL