ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಾಗರ ತಾಲ್ಲೂಕಿನ ಕೆಳದಿ ಸಮೀಪದ ಹಾರೆಗೊಪ್ಪ ಗ್ರಾಮದಲ್ಲಿ ಭಾನುವಾರ ನಡೆದ ದುರ್ಘಟನೆಯಲ್ಲಿ ವಿದ್ಯುತ್ ಸ್ಪರ್ಶದಿಂದ Electric shock ಯುವಕನೊಬ್ಬ ಮೃತಪಟ್ಟಿದ್ದಾನೆ.
ಮೃತರನ್ನು ಪ್ರವೀಣ ಹೆಗಡೆ (36) Praveen Hegade ಎಂದು ಗುರುತಿಸಲಾಗಿದೆ. ಅವರು ತಂತಿಗಳಿಗೆ ಅಡ್ಡವಾಗಿ ಬೆಳೆದಿದ್ದ ಮರದ ಕೊಂಬೆಗಳನ್ನು ಕತ್ತರಿಸುವ ಸಂದರ್ಭದಲ್ಲಿ ಅನಾಹುತವಾಗಿ ವಿದ್ಯುತ್ ತಗುಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೂಲತಃ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ತಾರಗೋಡು ಗ್ರಾಮದವರಾದ ಪ್ರವೀಣ ಹೆಗಡೆ, ಕೆಲ ವರ್ಷಗಳ ಹಿಂದೆ ಹಾರೆಗೊಪ್ಪದಲ್ಲಿ ಕೃಷಿ ಭೂಮಿಯನ್ನು ಖರೀದಿಸಿ ನೆಲೆಸಿದ್ದರು.
Also read: ಶಿವಮೊಗ್ಗ | ಆಯನೂರು ಗೇಟ್ ಸರ್ಕಲ್ನಲ್ಲಿ ‘ನೋ ಎಂಟ್ರಿ’ ನಿಯಮ ಜಾರಿ
ಪ್ರವೀಣ ಅವರು ಕ್ರಿಕೆಟ್ Cricket ಕ್ಷೇತ್ರದಲ್ಲಿಯೂ ಸಕ್ರಿಯರಾಗಿದ್ದು, ಕೆಎಸ್ಸಿಎ KSCA ಶಿವಮೊಗ್ಗ ವಲಯದ ಲೀಗ್ ಪಂದ್ಯಗಳಲ್ಲಿ ನಿಸರಾಣಿ ಕ್ಲಬ್ ಪರವಾಗಿ ಆಡಿದ್ದರು. ಹವ್ಯಕ ಕ್ರಿಕೆಟ್ ಲೀಗ್ ಸೇರಿದಂತೆ ಹಲವು ಟೂರ್ನಿಗಳಲ್ಲೂ ಭಾಗವಹಿಸಿದ್ದರೆಂದು ತಿಳಿದುಬಂದಿದೆ.
ಈ ಕುರಿತು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















