ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಿ ಟಿ ರವಿ ಅವರ ಬಂಧನ #C T Ravi Arrest ದುರುದ್ದೇಶ ರಾಜಕೀಯ, ಉದ್ದೇಶ ಪೂರ್ವಕವಾಗಿ ಅವರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ #MLA Channabasappa ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಸಿ.ಟಿ.ರವಿಯವರು ಹಲವು ದಶಕಗಳಿಂದ ರಾಜಕಾರಣ ಮಾಡುತ್ತ ಬಂದಿದ್ದಾರೆ. ಅವರು ಎಂದು ಮಹಿಳೆಯರಿಗೆ ಅಗೌರವ ತೋರಿಲ್ಲ. ತೋರುವುದು ಇಲ್ಲ. ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಸರ್ಕಾರ ಅವರ ಮೇಲೆ ಸುಳ್ಳು ಆರೋಪ ಹೊರಿಸಿದೆ. ತಮ್ಮೆಲ್ಲ ತಪ್ಪುಗಳನ್ನು ಮುಚ್ಚಿ ಹಾಕಲು ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯಲು ಈ ಷಡ್ಯಂತ್ರವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ ಎಂದರು.

Also read: ಜನಪ್ರತಿನಿಧಿಗಳ ಮೇಲೆ ಹಲ್ಲೆ | ಕಾಂಗ್ರೆಸ್ನ ದುಷ್ಕೃತ್ಯ ಖಂಡನೀಯ: ಟಿ.ಡಿ. ಮೇಘರಾಜ್
ಸದನದ ಒಳಗಡೆ ನಿರ್ಣಯ ಆಗಬೇಕಿರುವ ವಿಷಯವನ್ನು ರಸ್ತೆಗೆ ತಂದಿದ್ದಾರೆ. ಇದು ಸರಿಯಲ್ಲ. ಸಾಮಾನ್ಯ ವ್ಯಕ್ತಿಗೂ ಈ ರೀತಿ ನಡೆಸಿಕೊಳ್ಳುವುದಿಲ್ಲ. ಮೂರು ಮೂರು ಸ್ಟೇಶನ್ ಗೆ ಅವರನ್ನು ಅಲೆದಾಡಿಸಿದ್ದಾರೆ. ಸುವರ್ಣ ಸೌಧದ ಒಳಗಡೆ ಬಂದು ಈ ರೀತಿಯ ಆಟ ಆಡುತ್ತಾರೆ ಎಂದರೆ ಪೊಲೀಸ್ನವರು ಏನು ಮಾಡುತ್ತಿದ್ದಾರೆ. ಇದು ಸರ್ಕಾರದ ವಿಫಲತೆ. ಸರ್ಕಾರದ ಕುಮ್ಮಕ್ಕು ಇದಕ್ಕಿದೆ. ರಕ್ಷಣಾ ವ್ಯವಸ್ಥೆ ಕುಸಿದು ಬಿದ್ದಿದೆ. ಈ ಸರ್ಕಾರ ಸತ್ತುಹೋಗಿದೆ ಎಂದು ಕಿಡಿಕಾರಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post