ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿದ್ಯಾರ್ಥಿಗಳ ಮನೋವಿಕಾಸಕ್ಕೆ ನೃತ್ಯ ಯಾವ ರೀತಿ ಸಹಕಾರಿಯಾಗುತ್ತದೆ ಎಂದು ನಗರದ ಖ್ಯಾತ ಮನೋವೈದ್ಯೆ ಡಾ.ಕೆ.ಎಸ್. ಪವಿತ್ರಾ ಅಭಿಪ್ರಾಯ ವ್ಯಕ್ತಪಡಿಸಿದರು.
ರಾಜೇಂದ್ರನಗರದಲ್ಲಿರುವ ರೋಟರಿ ಪೂರ್ವ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂರ್ಯಾಕ್ಟ್ ಕ್ಲಬ್ ವರಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ವಿದ್ಯಾಭ್ಯಾಸದ ಜೊತೆಗೆ ವಿದ್ಯಾರ್ಥಿಗಳು ತಮ್ಮ ಬಿಡುವಿನ ವೇಳೆಯಲ್ಲಿ ಕಲೆ, ಸಂಸ್ಕೃತಿ, ಸಾಹಿತ್ಯದ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
Also read: ದೇಶಪ್ರೇಮ ಜಾಗೃತಿ ಕಾರ್ಯಕ್ರಮಗಳಿಂದ ಐತಿಹಾಸಿಕ ವಿಷಯಗಳ ಅರಿವು: ಅಶ್ವತ್ಥ್ ನಾರಾಯಣ ಶೆಟ್ಟಿ
ಶಿವಮೊಗ್ಗದ ಭಾವಾಭಿನಯ ಅಥವಾ ನೃತ್ಯಾಭಿನಯದ ಮೂಲಕ ಪ್ರತಿಯೊಬ್ಬ ವಿದ್ಯಾರ್ಥಿಯು ಮಾನಸಿಕವಾಗಿ ಸಧೃಡಗೊಳ್ಳಲು ಕಲೆ, ಸಾಹಿತ್ಯ ಸಂಸ್ಕೃತಿಯ ಅರಿವು ಬಹಳ ಮುಖ್ಯವಾಗಿರುತ್ತದೆ. ಸುವರ್ಣ ಕರ್ನಾಟಕ ರಾಜ್ಯೋತ್ಸವ ಸಂಭ್ರಮಕ್ಕಾಗಿ ಶ್ರೀವಿಜಯ ಸಂಸ್ಥೆ ಆನಂದ, ಆರೋಗ್ಯ ಎನ್ನುವ ವಿಶಿಷ್ಟ ಪ್ರಾತ್ಯಕ್ಷಿಕಾ ಮಾಲಿಕೆಯನ್ನು ವಿದ್ಯಾರ್ಥಿಗಳಿಗೆ ತಲುಪಿಸುತ್ತಿದ್ದೇವೆ ಎಂದರು.
ರೋಟರಿ ಶಿವಮೊಗ್ಗ ಪೂರ್ವ ಎಜುಕೇಷನಲ್ ಛಾರಿಟಬಲ್ ಟ್ರಸ್ಟ್ ಕಾರ್ಯದರ್ಶಿ ರೊ. ಎಸ್.ಸಿ. ರಾಮಚಂದ್ರ ಅವರು ಮಾತನಾಡಿ, ವೈದ್ಯೋ ನಾರಾಯಣೋ ಹರಿ ಎನ್ನುವ ನಾಣ್ಣುಡಿಯನ್ನು ಉಲ್ಲೇಖಿಸಿ, ಪ್ರಖ್ಯಾತ ಮನೋವೈದ್ಯೆಯಾಗಿದ್ದರೂ ಕಲೆ, ಸಂಸ್ಕೃತಿ, ಸಾಹಿತ್ಯದ ಅಭಿರುಚಿಯನ್ನು ಬೆಳೆಸಿಕೊಂಡಿರುವ ಡಾ. ಕೆ.ಎಸ್. ಪವಿತ್ರ ಅವರು ಈ ನಾಡಿನ ಸಾಂಸ್ಕೃತಿಕ ರಾಯಭಾರಿ. ಅವರಲ್ಲಿ ಅಡಗಿರುವ ಕಲಾ ಸರಸ್ವತಿಗೆ ಆಡಳಿತ ಮಂಡಳಿ ವತಿಯಿಂದ ಎಷ್ಟು ವಂದಿಸಿದರು ಸಾಲದು. ಮುಖ್ಯವಾಗಿ ನಮ್ಮ ಶಾಲೆಯ ಹಳೆಯ ವಿದ್ಯಾರ್ಥಿನಿಯಾಗಿ ರಾಷ್ಟಮಟ್ಟಕ್ಕೆ ಸಾಂಸ್ಕೃತಿಕ ರಾಯಭಾರಿಯಾಗಿ ಬೆಳೆದಿರುವುದು ಹೆಮ್ಮೆಯ ವಿಷಯ ಎಂದರು.
ಟ್ರಸ್ಟ್ ಖಜಾಂಚಿಯಾದ ವಿಜಯ್ ಕುಮಾರ್ ಮಾತನಾಡಿ, ಕಲೆ ಮತ್ತು ಸಂಸ್ಕೃತಿಯ ಮೈಗೂಡಿಸಿಕೊಳ್ಳುವುದರಿಂದ ಖಿನ್ನತೆ, ಉತ್ತಮ ಆರೋಗ್ಯ ಹಾಗೂ ಸಂಸ್ಕಾರಯುತ ವ್ಯಕ್ತಿಯಾಗಿ ಬೆಳೆಯಲು ಸಹಕಾರಿಯಾಗಿರುತ್ತಾರೆ ಎಂದರು.
ನಾಡಿನ ಹೆಸರಾಂತ ಕವಿಗಳು ರಚಿಸಿದ ಕವನಗಳಿಗೆ ತಮ್ಮ ಭಾವಾಭಿನಯದ ಮೂಲಕ ವಿದ್ಯಾರ್ಥಿಗಳ ಮನಸೂರೆಗೊಂಡರು.
ಕಾರ್ಯಕ್ರಮದಲ್ಲಿ ಇಂರ್ಯಾಕ್ಟ್ ಕ್ಲಬ್ ಅಧ್ಯಕ್ಷರಾದ ಆರ್.ಎಸ್. ಹರ್ಷಿತ್, ಕಾರ್ಯದರ್ಶಿ ಎಂ.ಪಿ. ಗಾನವಿ, ಪ್ರಾಂಶುಪಾಲರಾದ ಆರ್. ಸೂರ್ಯನಾರಾಯಣ್, ಸಹ ಶಿಕ್ಷಕರುಗಳಾದ ನರಸಿಂಹಯ್ಯ, ಬಿ.ಟಿ. ಪ್ರಶಾಂತ್, ರುಕ್ಕಯ್ಯ, ಬಿ.ಎಸ್. ಸುಷ್ಮಾ, ದಿವ್ಯಾ, ರೂಪ ರಾವ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post