ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಲ್ಲಿನ ಪ್ರತಿಷ್ಠಿತ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ #DCC Bank ಇಂದು ನಡೆಯಿತು.
ಮತದಾನ ನಡೆಯುವ ಸುತ್ತಮುತ್ತ ಬಿಗಿ ಭದ್ರತೆಯನ್ನು ಆಯೋಜಿಸಲಾಗಿತ್ತು. ಹಿಂದೆಂದೂ ಕಾಣದ ರೀತಿಯಲ್ಲಿ ಮತದಾರರು ಮತ್ತು ಸಾರ್ವಜನಿಕರು ಚುನಾವಣೆಗೆ ಸ್ಪರ್ಧಿಸಿದ್ದ ಅವರ ಅಭಿಮಾನಿಗಳು ಡಿಸಿಸಿ ಬ್ಯಾಂಕಿನ ಸುತ್ತಮುತ್ತ ಸೇರಿದ್ದು, ತಮ್ಮ ತಮ್ಮ ಅಭ್ಯರ್ಥಿಗಳ ಬಗ್ಗೆ ಕೊನೆಯ ಬಾರಿಗೆ ಮತಯಾಚನೆ ಮಾಡುತ್ತಿದ್ದು, ಕಂಡು ಬಂದಿತ್ತು. ಮತದಾನ ಮಾಡಲು ಹೋಗುವವರಿಗೆ ಮೊಬೈಲ್ನ್ನು ತೆಗೆದುಕೊಂಡು ಹೋಗಲು ಬಿಡಲಿಲ್ಲ.

ಸಂಸದ ಬಿ.ವೈ. ರಾಘವೇಂದ್ರ #B Y Raghavendra ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ #Beluru Gopalakrishna ಪರಸ್ಪರ ಕೈಕುಲಕಿ ಒಬ್ಬರಿಗೊಬ್ಬರು ಅಭಿನಂದಿಸಿದ ದೃಶ್ಯ ರಾಜಕಾರಣಿಗಳು ಒಟ್ಟಾರೆ ಒಂದೇ ಎಂಬ ಸಂದೇಶ ಸಾರಿತ್ತು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ.ಶಿವಮೊಗ್ಗ ತಾಲ್ಲೂಕು ಕ್ಷೇತ್ರದಿಂದ ಕೆ.ಪಿ ದುಗ್ಗಪ್ಪಗೌಡ, ಶಿವನಂಜಪ್ಪ.ಜೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ಭದ್ರಾವತಿ ತಾಲ್ಲೂಕು ಕ್ಷೇತ್ರದಿಂದ ಹೆಚ್.ಎಲ್. ಷಡಾಕ್ಷರಿ, ಸಿ.ಹನುಮಂತಪ್ಪ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ, ತೀರ್ಥಹಳ್ಳಿ ತಾ. ಕ್ಷೇತ್ರದಿಂದ ಬಸವಾನಿ ವಿಜಯದೇವ್, ಕೆ.ಎಸ್.ಶಿವಕುಮಾರ್, ಪ್ರಾ ಕೃ ಪ ಸ ಸಂಘ ನಿ ಸಾಗರ ತಾಲ್ಲೂಕು ಕ್ಷೇತ್ರದಿಂದ ಗೋಪಾಲಕೃಷ್ಣ ಬೇಳೂರು, ರತ್ನಾಕರ ಹೊನಗೋಡು, ಪ್ರಾ ಕೃ ಪ ಸ ಸಂಘ ನಿ ಶಿಕಾರಿಪುರ ತಾಲ್ಲೂಕು ಕ್ಷೇತ್ರದಿಂದ ಅಗಡಿ ಅಶೋಕ, ಎಸ್.ಪಿ ಚಂದ್ರಶೇಖರಗೌಡ, ಪ್ರಾ ಕೃ ಪ ಸ ಸಂಘ ನಿ ಸೊರಬ ತಾಲ್ಲೂಕು ಕ್ಷೇತ್ರದಿಂದ ಕೆ.ಪಿ. ರುದ್ರಗೌಡ, ಶಿವಮೂರ್ತಿಗೌಡ, ತಾಲ್ಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘ ಹಾಘೂ ಇತರೆ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘಗಳು ಶಿವಮೊಗ್ಗ ಉಪ ವಿಭಾಗದಿಂದ ಆರ್.ಎಂ. ಮಂಜುನಾಥ ಗೌಡ ಕಣದಲ್ಲಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post