ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಇರುವ ಮಹಾನಗರ ಪಾಲಿಕೆ ವ್ಯಾಪ್ತಿಯ ಜಾಗದಲ್ಲಿ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಮತ್ತು ಉಚ್ಚ ನ್ಯಾಯಾಲಯದ ಆದೇಶವನ್ನು ತಿರಸ್ಕರಿಸಿ, ಸರ್ಕಾರದ ಅನುಮತಿ ಇಲ್ಲದೆ ಕಾನೂನುಬಾಹಿರವಾಗಿ ಪ್ರತಿಭಟನೆ ನಡೆಸಿದವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಜಿಲ್ಲಾ ರಕ್ಷಾಾಧಿಕಾರಿಗಳಿಗೆ ಬಿಜೆಪಿ ಶಿವಮೊಗ್ಗ ನಗರ ಘಟಕದಿಂದ ಇಂದು ಅಧಿಕೃತವಾಗಿ ದೂರನ್ನು ಸಲ್ಲಿಸಲಾಯಿತು.
03 ಮೇ 2025ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನದವರೆಗೆ ಸಾರ್ವಜನಿಕ ಓಡಾಟಕ್ಕೆ ಅಡ್ಡಿಪಡಿಸಿದ್ದು, ಅಲ್ಲದೇ ಪ್ರಚೋದಾತ್ಮಕ ಭಾಷಣಗಳ ಮೂಲಕ ಸಾರ್ವಜನಿಕ ಶಾಂತಿಗೆ ಭಂಗ ತರುವ ರೀತಿಯಲ್ಲಿ ನಡೆದಿರುವುದು ಗಂಭೀರ ವಿಷಯವಾಗಿದೆ ದೂರಿನಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಜಗದೀಶ್, ನಗರಾಧ್ಯಕ್ಷ ಮೋಹನ್ ರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರಿಕೃಷ್ಣ, ನಗರ ಪ್ರಧಾನ ಕಾರ್ಯದರ್ಶಿ ದೀನ್ ದಯಾಳ್ ಹಾಗೂ ಮಂಜುನಾಥ್ ನವಲೆ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post