No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Monday, March 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ದೇವೇಗೌಡರ ಕುಟುಂಬವೇ ಬೇರೆ, ರೇವಣ್ಣ ಅವರ ಕುಟುಂಬವೇ ಬೇರೆ: ಕುಮಾರಸ್ವಾಮಿ ಹೀಗೆ ಹೇಳಿದ್ದೇಕೆ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 29, 2024
in ಶಿವಮೊಗ್ಗ
0
ದೇವೇಗೌಡರ ಕುಟುಂಬವೇ ಬೇರೆ, ರೇವಣ್ಣ ಅವರ ಕುಟುಂಬವೇ ಬೇರೆ: ಕುಮಾರಸ್ವಾಮಿ ಹೀಗೆ ಹೇಳಿದ್ದೇಕೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಉಪ್ಪು ತಿಂದವರು ನೀರು ಕುಡಿಯಲೇಬೇಕು, ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇಬೇಕು ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ #H D Kumaraswamy ಹೇಳಿದರು.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ #Prajwal Revanna ಅವರಿಗೆ ಸಂಬಂಧಿಸಿದೆನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ ತಪ್ಪು ಯಾರು ಮಾಡಿದರೂ ಅದು ತಪ್ಪೇಆಗುತ್ತದೆ. ಸರ್ಕಾರ ಈಗಾಗಲೇ ಎಸ್‍ಐಟಿ ತನಿಖೆಗೆ ಒಪ್ಪಿಸಿದೆ. ಅದರ ವರದಿ ಬಂದ ನಂತರ ಸತ್ಯ ಹೊರಬೀಳುತ್ತದೆ. ಇದರಲ್ಲಿ ನಮ್ಮ ಪಾತ್ರ ಏನೂ ಇರುವುದಿಲ್ಲ ಎಂದರು.
ನಮ್ಮದು ಮತ್ತು ರೇವಣ್ಣ ಕುಟುಂಬ ಬೇರೆ ಬೇರೆ ಇದ್ದೇವೆ. ಇದನ್ನು ಪ್ರಜ್ವಲ್ ಪ್ರಕರಣದಲ್ಲಿ ದೇವೇಗೌಡರ #Devegowda ಮತ್ತು ನನ್ನ ಕುಟುಂಬವನ್ನು ಎಳೆದು ತರಬಾರದು. ತಪ್ಪಿತಸ್ಥರು ಯಾರೇ ಇದ್ದರೂ ಅವರು ಶಿಕ್ಷೆ ಅನುಭವಿಸಲೇಬೇಕು. ಈ ಮೊದಲೆ ಹೇಳಿದ್ದೇನೆ. ಉಪ್ಪು ತಿಂದವರು ನೀರು ಕುಡಿಯಲೇಬೇಕೆಂದು, ಎಲ್ಲವೂ ತನಿಖೆಯಾಗಲಿ ಇದರಲ್ಲಿ ನಾನಾಗಲಿ, ದೇವೇಗೌಡರಾಗಲಿ ಯಾವುದೇ ರೀತಿಯ ಪ್ರಭಾವ ಬೀರುವ ಪ್ರಶ್ನೆಯೇ ಇಲ್ಲ. ಇಂತಹ ಕೃತ್ಯಗಳು ನಡೆಯಬಾರದು ಎಂದು ಸ್ಪಷ್ಟಪಡಿಸಿದರು.

ನಾನು ಮುಖ್ಯಮಂತ್ರಿಯಾಗಿದ್ದಾಗ ಮತ್ತು ದೇವೆಗೌಡರು ಪ್ರಧಾನಿಯಾಗಿದ್ದಾಗಲೂ ಸಾವಿರಾರೂ ಜನ ಹೆಣ್ಣುಮಕ್ಕಳು ತಮ್ಮ ಕಷ್ಟ, ಸಮಸ್ಯೆಗಳಿಗೆ ಬಂದಿದ್ದಾರೆ. ಅವರನ್ನು ಅತ್ಯಂತ ಗೌರವದಿಂದ ಕಂಡಿದ್ದೇವೆ. ನನ್ನ ಮತ್ತು ದೇವೇಗೌಡರ ಕುಟುಂಬವೇ ಬೇರೆ, ರೇವಣ್ಣ ಅವರ ಕುಟುಂಬವೇ ಬೇರೆ. ಪೆನ್ ಡ್ರೈವ್ ಪ್ರಕರಣದಿಂದ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ತನಿಖೆ ಪಾರದರ್ಶಕವಾಗಿ ನಡೆಯಲಿ, ಇದರಲ್ಲಿ ರಾಜಕೀಯ ಸಂಚು ಇರುವುದೂ ಕೂಡ ಬಯಲಾಗಲಿದೆ ಎಂದು ಕುಮಾರಸ್ವಾಮಿ ಹೇಳಿದರು.
ಇದು ಕೇವಲ ನಮ್ಮ ಕುಟುಂಬದ(ಅಂದರೆ ನಾನು ಮತ್ತು ನಮ್ಮ ತಂದೆ) ಪ್ರಶ್ನೆ ಮಾತ್ರವಲ್ಲ, ಇಡೀ ಸಮಾಜವೇ ತಲೆ ತಗ್ಗಿಸುವಂತಹುದು. ಬಹುಶಃ ನನ್ನ ಗಮನಕ್ಕೆ ಬಂದಿದ್ದರೆ ಮುಜುಗರ ತಪ್ಪಿಸಬಹುದಿತ್ತು. ಚುನಾವಣೆಯ ಸಂದರ್ಭವಾದ್ದರಿಂದ ಷಡ್ಯಂತ್ರವಾದರೂ ಇರಬಹುದೋ ಏನೋ ಗೊತ್ತಿಲ್ಲ. ಆದರೂ ವರದಿ ಬರಲಿ, ನೋಡೋಣ. ನಾನು ಮತ್ತು ನನ್ನ ತಂದೆಯವರು ಮಹಿಳೆಯರಿಗೆ ಯಾವಾಗಲೂ ಗೌರವ ಕೊಡುತ್ತೇವೆ ಎಂದರು.

Also read: ನಿಯಂತ್ರಣ ತಪ್ಪಿದ ಹೆಲಿಕಾಪ್ಟರ್ | ಕೂದಲೆಳೆ ಅಂತರದಲ್ಲಿ ಪಾರಾದ ಅಮಿತ್ ಶಾ | ವೀಡಿಯೋ ನೋಡಿ

ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದ ಕುಮಾರಸ್ವಾಮಿ, ಬರ ಪರಿಹಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೇಂದ್ರದ ಮೇಲೆ ವಿನಾಕಾರಣ ಗೂಬೆ ಕೂರಿಸಿದೆ. ಕೇಂದ್ರದ ಯಾವ ಅನುದಾನಗಳೇ ಆಗಲಿ ಹಣಕಾಸು ಆಯೋಗದ ನಿರ್ದೇಶನದಂತೆ ಮಾಡಲಾಗುತ್ತದೆ ಅಷ್ಟೇ. ಅದಕ್ಕೆ ತಕ್ಕಂತೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಹಣ ಬಿಡುಗಡೆ ಮಾಡಿದೆ. ಕೇಂದ್ರದ ಹಣದ ಜೊತೆಗೆ ರಾಜ್ಯ ಸರ್ಕಾರವೂ ಹೆಚ್ಚಿನ ಹಣ ಬಿಡುಗಡೆ ಮಾಡಿ ಬರ ನಿರ್ವಹಣೆಯನ್ನು ಸಮರ್ಥವಾಗಿ ನಿರ್ವಹಿಸಬೇಕು ಎಂದರು.

ರಾಜ್ಯ ಸರ್ಕಾರದ ಗ್ಯಾರಂಟಿಯ ಭಜನೆ ಮುಂದುವರೆದಿದೆ. ಬರಗಾಲದ ಬಗ್ಗೆ ರಾಜ್ಯ ಸರ್ಕಾರ ಯಾವ ಕ್ರಮವನ್ನೂ ಕೈಗೊಂಡಿಲ್ಲ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರದ ಪ್ರೀತಿ ಗಳಿಸಬೇಕೆ ಹೊರತೂ ದ್ವೇಷವಲ್ಲ. ಸಂಘರ್ಷದಿಂದ ಏನೂ ಸಾಧ್ಯವಿಲ್ಲ. ರಾಜ್ಯ ಸರ್ಕಾರದ ಖಜಾನೆಯೀಗ ಖಾಲಿಯಾಗಿದೆ. ಅದಕ್ಕಾಗಿ ವಿಶೇಷ ತೆರಿಗೆಗಳನ್ನು ಜನಸಾಮಾನ್ಯರ ಮೇಲೆ ಹೊರಿಸಲಾಗುತ್ತಿದೆ ಎಂದರು.

ಮೊದಲ ಹಂತದ ಚುನಾವಣೆ ಮುಗಿದಿದೆ. 14 ಕ್ಷೇತ್ರಗಳ ಪೈಕಿ 12ರಲ್ಲಂತೂ ನಾವು ಗೆದ್ದೇ ಗೆಲ್ಲುತ್ತೇವೆ. ಈಗ ಎರಡನೇ ಹಂತದ ಚುನಾವಣೆಯಲ್ಲಿ ಪ್ರಚಾರಕ್ಕಾಗಿ ನಾನು ಬಂದಿದ್ದೇನೆ. ನಾಲ್ಕೈದು ದೊಡ್ಡ ಸಭೆಗಳಲ್ಲಿ ಭಾಗವಹಿಸುತ್ತೇನೆ. ಮೈತ್ರಿ ಪಕ್ಷದ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು ಗೆದ್ದೇ ಗೆಲ್ಲುತ್ತಾರೆ. ಈ ದೇಶಕ್ಕೆ ಮೋದಿ ಪ್ರಧಾನಿಯಾಗುವುದು ಅನಿವಾರ್ಯ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಶಾರದಾ ಪೂರ್ಯಾನಾಯ್ಕ್, ಎಸ್.ಎಲ್. ಭೋಜೇಗೌಡ, ಪ್ರಮುಖರಾದ ಕೆ.ಬಿ. ಪ್ರಸನ್ನಕುಮಾರ್, ಕಡಿದಾಳ್ ಗೋಪಾಲ್, ಟಿ.ಡಿ. ಮೇಘರಾಜ್, ರಘುಪತಿ ಭಟ್ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

 

Tags: DevegowdaH D KumaraswamyKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaPrajwal RevannaShimogaShivamogga Newsದೇವೇಗೌಡಪ್ರಜ್ವಲ್ ರೇವಣ್ಣಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಹೆಚ್.ಡಿ. ಕುಮಾರಸ್ವಾಮಿ
Share200Tweet123Send
Previous Post

ನಿಯಂತ್ರಣ ತಪ್ಪಿದ ಹೆಲಿಕಾಪ್ಟರ್ | ಕೂದಲೆಳೆ ಅಂತರದಲ್ಲಿ ಪಾರಾದ ಅಮಿತ್ ಶಾ | ವೀಡಿಯೋ ನೋಡಿ

Next Post

ಲಕ್ಷಕ್ಕೂ ಅಧಿಕ ಮತ ಅಂತರದಿಂದ ಗೆಲುವಿನಲ್ಲಿ ಯಾವುದೇ ಅನುಮಾನವಿಲ್ಲ: ಈಶ್ವರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅ.ಪ. ರಾಮಭಟ್ಟರ ಹೆಸರಿನಲ್ಲಿ ಟ್ರಸ್ಟ್ ರೂಪಿಸಲು ಚಿಂತನೆ: ಶಾಸಕ ಈಶ್ವರಪ್ಪ

ಲಕ್ಷಕ್ಕೂ ಅಧಿಕ ಮತ ಅಂತರದಿಂದ ಗೆಲುವಿನಲ್ಲಿ ಯಾವುದೇ ಅನುಮಾನವಿಲ್ಲ: ಈಶ್ವರಪ್ಪ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಛಾಯಾಗ್ರಹಣ ಕ್ಷೇತ್ರದ ವಿಶ್ವಾಸಾರ್ಹ ಹೆಸರು ಕರಾವಳಿಯ ಉದಯ್‌ ಶಂಕರ್ ಪಡಿಯಾರ್

ಛಾಯಾಗ್ರಹಣ ಕ್ಷೇತ್ರದ ವಿಶ್ವಾಸಾರ್ಹ ಹೆಸರು ಕರಾವಳಿಯ ಉದಯ್‌ ಶಂಕರ್ ಪಡಿಯಾರ್

March 19, 2026
National Safety Week 2026 Observed at Carriage Repair Workshop, Hubballi

National Safety Week 2026 Observed at Carriage Repair Workshop, Hubballi

March 18, 2026
7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

ಹುಬ್ಬಳ್ಳಿ | ರೈಲ್ವೆ ಇಲಾಖೆ ಪರೀಕ್ಷೆ ಮುಂದೂಡಿಕೆ

March 18, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಯುಗಾದಿ ಹಬ್ಬ ಹಿನ್ನೆಲೆ: ಯಶವಂತಪುರ ಮತ್ತು ಹೊಸಪೇಟೆ ನಡುವೆ ವಿಶೇಷ ರೈಲು ಸೇವೆ

March 18, 2026
ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

March 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL