ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಅವರಿಗೆ ಟಿಕೆಟ್ ಸಿಗದಿರುವುದಕ್ಕೆ ಕೆಬಿಪಿ ಅಭಿಮಾನಿಗಳು ಹಾಗೂ ಕಾರ್ಯಕರ್ತರಿಂದ ಆಕ್ರೋಶ ವ್ಯಕ್ತವಾಗಿದೆ. ತಮ್ಮ ನಾಯಕನಿಗ ಟಿಕೆಟ್ ಸಿಗದೇ ಇರುವುದಕ್ಕೆ ಬೇಸರ ಹೊರ ಹಾಕಿದರೆ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಅವರಿಗೆ ಟಿಕೆಟ್ “ಕೈ”ತಪ್ಪಿರುವುದಕ್ಕೂ ಆಕ್ರೋಶ ವ್ಯಕ್ತವಾಗಿದೆ.
ಅತ್ತ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲೂ ಅಸಮಾಧಾನ ಸ್ಪೋಟಗೊಂಡಿದೆ. ಶ್ರೀನಿವಾಸ್ ಕರಿಯಣ್ಣಗೆ ಟಿಕೇಟ್ ಘೋಷಣೆಯಾಗುತ್ತಿದ್ದಂತೆ ಟಿಕೆಟ್ ಕೈ ತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಕಾಂಗ್ರೆಸ್ ಮುಖಂಡ ನಾರಾಯಣಸ್ವಾಮಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ತೀರ್ಮಾನ ಕೈಗೊಂಡಿದ್ದಾರೆ.
ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಿಂದ ಕೆ.ಬಿ. ಪ್ರಸನ್ನ ಕುಮಾರ್ ಗೆ ಟಿಕೆಟ್ ಸಿಗುತ್ತದೆ ಎಂದು ಕಾರ್ಯಕರ್ತರು, ಅಭಿಮಾನಿಗಳು ಆಶಾಭಾವನೆಯಲ್ಲಿದ್ದರು. ಆದರೆ ಹೆಚ್ಚಿಸಿ ಯೋಗೇಶ್ ಅವರಿಗೆ ಟಿಕೆಟ್ ಘೋಷಣೆ ಆಗುತ್ತಿದ್ದಂತೆ. ಅಸಮಾಧಾನ ಸ್ಪೋಟಗೊಂಡಿದೆ.
ಕಾಂಗ್ರೆಸ್ ಪಕ್ಷ ಹಾಗೂ ಪಕ್ಷದ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕೆ.ಬಿ. ಪ್ರಸನ್ನ ಕುಮಾರ್ ಅಭಿಮಾನಿಗಳು, ಕಾಂಗ್ರೆಸ್ ಮತ್ತು ಕಾಂಗ್ರೆಸ್ ನಾಯಕರ ವಿರುದ್ಧ ಘೋಷಣೆ ಕೂಗಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಧಿಕ್ಕಾರ ಎಂದು ಘೋಷಣೆ ಕೂಗುವುದರ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧವೂ ಘೋಷಣೆ ಕೂಗಿದ ಕೆಲ ಅಭಿಮಾನಿಗಳು, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಅಭ್ಯರ್ಥಿಯನ್ನು ಬದಲಾವಣೆ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಒಂದು ವೇಳೆ ಟಿಕೆಟ್ ಸಿಗದಿದ್ದರೆ ಬಂಡಾಯವಾಗಿ ಸ್ಪರ್ಧೆ ಮಾಡುವಂತೆಯೂ ಕೆ.ಬಿ. ಪ್ರಸನ್ನ ಕುಮಾರ್ ಅವರನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್, ಈ ಬಾರಿಯೂ ತಮಗೆ ಟಿಕೆಟ್ ದೊರಕುತ್ತದೆ ಎಂಬ ವಿಶ್ವಾಸವಿತ್ತು. ಪಕ್ಷದ ನಾಯಕರು, ನಮ್ಮ ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ಸಮಾಲೋಚಿಸಿ ಮುಂದಿನ ತೀರ್ಮಾನ ಕೈಗೂಡುವುದಾಗಿ ಪ್ರತಿಕ್ರಿಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್ಎಸ್ ಸುಂದರೇಶ್ ಅವರಿಗೆ ಕೈ ಟಿಕೆಟ್ ತಪ್ಪಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಪಕ್ಷದ ಕಚೇರಿ ಮುಂದೆ ಸುಂದರೇಶ್ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ. ಬೆಂಕಿ ಹಚ್ಚಿ ಕಾಂಗ್ರೆಸ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಅಭ್ಯರ್ಥಿ ಆಯ್ಕೆ ಮರುಪರಿಶೀಲನೆ ನಡೆಸುವಂತೆಯೂ ಮನವಿ ಮಾಡಿದ್ದಾರೆ.
ಇದೇ ವೇಳೆ ಶಿವಮೊಗ್ಗ ಗ್ರಾಮಾಂತರ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಬೇಕೆಂದು ಶತಾಯಗತಾಯ ಪ್ರಯತ್ನ ನಡೆಸಿದ್ದ ನಾರಾಯಣಸ್ವಾಮಿ ಇದೀಗ ಟಿಕೆಟ್ ಸಿಗದೇ ಅಸಮಾಧಾನಗೊಂಡಿದ್ದಾರೆ. ಅಲ್ಲದೆ, ಪಕ್ಷೇತರರಾಗಿ ಸ್ಪರ್ಧೆ ಮಾಡುವ ನಿಲುವನ್ನು ಪ್ರಕಟಿಸಿದ್ದಾರೆ.
ಕಾಂಗ್ರೆಸ್ ನಿಂದ ಟಿಕೇಟ್ ದೊರಕುತ್ತದೆ ಎಂಬ ಆಕಾಂಕ್ಷೆಯನ್ನು ನಾರಾಯಣಸ್ವಾಮಿ ಹೊಂದಿದ್ದರು. ಆದರೆ ಕಾಂಗ್ರೆಸ್ ಬಿಡುಗಡೆಗೊಳಿಸಿದ 3ನೇ ಪಟ್ಟಿಯಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದ ಡಾ. ಶ್ರೀನಿವಾಸ್ ಕರಿಯಣ್ಣ ಅವರ ಹೆಸರನ್ನು ಅಂತಿಮಗೊಳಿಸಿದೆ. ಶ್ರೀನಿವಾಸ್ ಕರಿಯಣ್ಣಗೆ ಟಿಕೆಟ್ ನೀಡಿದ್ದಕ್ಕೆ ಅಸಮಾಧಾನಗೊಂಡಿರುವ ನಾರಾಯಣಸ್ವಾಮಿ, ಇದೀಗ ಪಕ್ಷೇತರ ಅಭ್ಯರ್ಥಿಯಾಗಿ ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದ ಗೋಲ್ಡನ್ ಸಿಟಿ ಬಡಾವಣೆಯಲ್ಲಿರುವ ತಮ್ಮ ನಿವಾಸದಲ್ಲಿ ಭಾನುವಾರ ಅಭಿಮಾನಿಗಳೊಂದಿಗೆ ಸಭೆ ನಡೆಸಿದ ನಾರಾಯಣಸ್ವಾಮಿ, ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಬಂಡಾಯವಾಗಿ ಸ್ಪರ್ಧೆ ಮಾಡಲು ಮುಂದಾಗಿದ್ದಾರೆ.
ಈ ಬಾರಿ ಸ್ಪರ್ಧೆ ಮಾಡುವುದು ನಿಶ್ಚಿತ. ತಾವು ಸ್ಪರ್ಧೆ ಮಾಡಬೇಕೆಂದು ಅಭಿಮಾನಿಗಳು ಸಾಕಷ್ಟು ಒತ್ತಾಯ ಮಾಡಿದ್ದಾರೆ. ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ. ಸ್ಪರ್ಧೆ ಮಾಡುತ್ತೇನೆ ಎಂದು ನಾರಾಯಣಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post