No Result
View All Result
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ
English Articles

Duniya Vijay, Rachita Ram & Raj B. Shetty’s Landlord Premieres This Saturday on Zee Kannada

by ಕಲ್ಪ ನ್ಯೂಸ್
May 22, 2026
0

Kalpa Media House  |  Bengaluru | Zee Kannada has always captivated its audience with unique content, offering engaging fiction stories,...

Read moreDetails
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
  • Advertise With Us
  • Grievances
  • About Us
  • Contact Us
Saturday, May 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಾರ್ವಜನಿಕ ಪಡಿತರ ವ್ಯವಸ್ಥೆಯಲ್ಲಿ ಸಾರವರ್ಧಿತ ಅಕ್ಕಿ ವಿತರಣೆ

ಪತ್ರಿಕಾಗೋಷ್ಠಿಯಲ್ಲಿ ಭಾರತ ಆಹಾರ ನಿಗಮದ ಶಿವಮೊಗ್ಗ ಡಿವಿಷನಲ್ ಮ್ಯಾನೇಜರ್ ಭಗವಾನ್ ಸಿಂಗ್ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 21, 2022
in ಶಿವಮೊಗ್ಗ
0
ಸಾರ್ವಜನಿಕ ಪಡಿತರ ವ್ಯವಸ್ಥೆಯಲ್ಲಿ ಸಾರವರ್ಧಿತ ಅಕ್ಕಿ ವಿತರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |     

ಆಹಾರ ಭದ್ರತೆಯೊಂದಿಗೆ ಪೋಷಣೆಯ ಭದ್ರತೆಯನ್ನೂ ನೀಡುವ ನಿರ್ಧಾರವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿದ್ದು, ಸಾರ್ವಜನಿಕ ಪಡಿತರ ವ್ಯವಸ್ಥೆಯಲ್ಲಿ ಸಾರವರ್ಧಿತ ಅಕ್ಕಿ ವಿತರಣೆ ಮಾಡಲು ಕ್ರಮ ಕೈಗೊಂಡಿದೆ ಎಂದು ಭಾರತ ಆಹಾರ ನಿಗಮದ ಶಿವಮೊಗ್ಗ ಡಿವಿಷನಲ್ ಮ್ಯಾನೇಜರ್ ಭಗವಾನ್ ಸಿಂಗ್ ತಿಳಿಸಿದರು.

ಇಂದು ಗಾಡಿಕೊಪ್ಪದ ಭಾರತ ಆಹಾರ ನಿಗಮ(ಎಫ್‍ಸಿಐ)ದ ವಿಭಾಗೀಯ ಕಚೇರಿಯಲ್ಲಿ ಸಾರ್ವಜನಿಕ ಪಡಿತರ ವ್ಯವಸ್ಥೆಯಲ್ಲಿ ಸಾರವರ್ಧಿತ ಅಕ್ಕಿ ವಿತರಣೆ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಅವರು ಮಾತಾಡಿದರು.
ಕೋವಿಡ್ ಸಮಯದಲ್ಲಿ ಯಾರೊಬ್ಬರೂ ಆಹಾರದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಪಿಎಂಜಿಕೆವೈ ಯೋಜನೆ ಜಾರಿಗೊಳಿಸಿ ದುರ್ಬಲ ವರ್ಗದವರಿಗೆ ಉಚಿತ ಪಡಿತರ ವಿತರಿಸುತ್ತಿದೆ. ದೇಶದಲ್ಲಿ ಬಹುತೇಕರಲ್ಲಿ ಪೋಷಕಾಂಶದ ಕೊರತೆ ಇರುವುದನ್ನು ಸರ್ಕಾರ ಮನಗಂಡು ಸಾರವರ್ಧಿತ ಅಕ್ಕಿಯನ್ನು ಪಡಿತರ ವ್ಯವಸ್ಥೆ ಮತ್ತು ಮಧ್ಯಾಹ್ನದ ಬಿಸಿಯೂಟದಲ್ಲಿ ನೀಡಲು ಮುಂದಾಗಿದೆ. ಇದರಿಂದ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಎಲ್ಲರಿಗೂ ಅನುಕೂಲವಾಗಲಿದೆ. ಪ್ರಸ್ತುತ ಅತಿ ಹೆಚ್ಚು ಪೋಷಕಾಂಶ ಕೊರತೆ ಇರುವ ಅಧಿಸೂಚಿತ ಜಿಲ್ಲೆಗಳಲ್ಲಿ ಸಾರವರ್ಧಿತ ಅಕ್ಕಿ ಪೂರೈಕೆಯಾಗುತ್ತಿದ್ದು, 2024ರ ಹೊತ್ತಿಗೆ ದೇಶಾದ್ಯಂತ ಪೂರೈಕೆಯಾಗಲಿದೆ ಎಂದರು.

Also read: ಜು.25, 26ರಂದು ಸಿಎಂ ದೆಹಲಿ ಪ್ರವಾಸ: ವರಿಷ್ಠರು ಪ್ರಸ್ತಾಪಿಸಿದರೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ

ರಾಜ್ಯದಲ್ಲಿ ಮೊದಲನೇ ಹಂತದಲ್ಲಿ ಶಿವಮೊಗ್ಗ, ದಾವಣಗೆರೆ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಪೈಲಟ್ ಕಾರ್ಯಕ್ರಮದಡಿ ಆಯ್ಕೆ ಮಾಡಿಕೊಂಡು ಮೇ ಮಾಹೆಯಿಂದ ಸಾರ್ವಜನಿಕ ಪಡಿತರ ವ್ಯವಸ್ಥೆಯಲ್ಲಿ ಸಾರವರ್ಧಿತ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ. ರೈತರಿಗೆ ಕನಿಷ್ಟ ಬೆಂಬಲ ಬೆಲೆ ಖಚಿತಪಡಿಸುವುದು, ಮುಕ್ತ ಮಾರುಕಟ್ಟೆಯಲ್ಲಿ ದರಗಳನ್ನು ಸ್ಥಿರಗೊಳಿಸುವುದು, ಸಮಾಜದ ದುರ್ಬಲ ವರ್ಗದವರಿಗೆ ಆಹಾರ ಧಾನ್ಯ ಒದಗಿಸುವುದು ಮತ್ತು ದೇಶದಲ್ಲಿ ಎಂತಹದೇ ತುರ್ತು ಪರಿಸ್ಥಿತಿ ಬಂದರೂ ಆಹಾರ ಭದ್ರತೆ ಸಾಧಿಸುವುದು ಕೇಂದ್ರ ಸರ್ಕಾರದ ಮುಖ್ಯ ಉದ್ದೇಶವಾಗಿದ್ದು ಕಳೆದ ಸಾಲಿನಲ್ಲೇ ಸರ್ಕಾರ ಆಹಾರ ಭದ್ರತೆಯೊಂದಿಗೆ ಪೊಷಣೆಯ ಭದ್ರತೆಯನ್ನೂ ನೀಡುವ ನಿರ್ಧಾರ ಕೈಗೊಂಡಿದೆ. ಈ ನಿಟ್ಟಿನಲ್ಲಿ ಈಗ ಪೈಲಟ್ ಕಾರ್ಯಕ್ರಮದಡಿ ಸಾರವರ್ಧಿತ ಅಕ್ಕಿ ವಿತರಣೆ ಆಗುತ್ತಿದೆ ಎಂದು ತಿಳಿಸಿದರು.
ವಿಭಾಗೀಯ ಕಚೇರಿಯ ಗುಣಮಟ್ಟ ನಿಯಂತ್ರಣದ ಮ್ಯಾನೇಜರ್ ಶಿವಕುಮಾರ್ ಮಾತನಾಡಿ, ನಮ್ಮ ದೇಶದಲ್ಲಿ ಶೇ.70 ರಷ್ಟು ಜನರು ಪೋಷಕಾಂಶಗಳ ಕೊರತೆಯಿಂದ ಬಳಲುತ್ತಿದ್ದಾರೆ. ಇದನ್ನು ನೀಗಿಸಲು ಜನರು ತಮ್ಮ ಮುಖ್ಯ ಆಹಾರವಾಗಿ ಹೆಚ್ಚಾಗಿ ಬಳಸುವ ಅಕ್ಕಿಯನ್ನು ಸಾರವರ್ಧಿತಗೊಳಿಸಿ ನೀಡಲು ಸರ್ಕಾರ ನಿರ್ಧರಿಸಿ ಕ್ರಮ ಕೈಗೊಂಡಿದೆ. ಅವಶ್ಯಕ ವಿಟಮಿನ್, ಮಿನರಲ್ ಮತ್ತು ಇತರೆ ಪೋಷಕಾಂಶಗಳನ್ನು ಮಿಶ್ರಣ ಮಾಡಿ ಮಷೀನ್‍ನಲ್ಲಿ ಎಫ್‍ಆರ್‍ಕೆ(ಫಾರ್ಟಿಫೈಡ್ ರೈಸ್ ಕರ್ನಲ್ಸ್) ಅಕ್ಕಿ ತಯಾರಿಸಿ ಪಡಿತರದಲ್ಲಿ ನೀಡುವ ಅಕ್ಕಿಯೊಂದಿಗೆ ಮಿಶ್ರಣಮಾಡಿ ನೀಡುವ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ.

ಈ ಅಕ್ಕಿಯನ್ನು ಸುಲಭವಾಗಿ ಗುರುತಿಸಲು ಅಕ್ಕಿಚೀಲದ ಮೇಲೆ +ಎಫ್ ಎಂಬ ನೀಲಿ ಬಣ್ಣದ ಚಿಹ್ನೆ ಇರುತ್ತದೆ. ಈ ಅಕ್ಕಿಯು ಎನ್‍ಎಬಿಎಲ್ ಮಾನ್ಯತೆ, ಎಫ್‍ಎಸ್‍ಎಸ್‍ಎಐ ಪರವಾನಿಗಿ ಸೇರಿದಂತೆ ಎಲ್ಲ ರೀತಿಯ ನಿಯಮಾವಳಿಗಳನ್ನು ಅನುಸರಿಸಿ ತಯಾರಿಸಲಾಗಿದ್ದು ಯಾವುದೇ ರೀತಿಯ ಅಡ್ಡ ಪರಿಣಾಮಗಳು ಇರುವುದಿಲ್ಲ. ಅನೇಕರು ಇದು ಪ್ಲಾಸ್ಟಿಕ್ ಅಕ್ಕಿ ಎಂದು ಗೊಂದಲಕ್ಕೀಡಾಗಿದ್ದು ಇದೆ. ಆದರೆ ಇದು ಸಾರವರ್ಧಿತ ಅಕ್ಕಿಯಾಗಿದ್ದು ಎಲ್ಲರೂ ಇದರ ಪ್ರಯೋಜನ ಪಡೆಯಬೇಕೆಂದರು.
ಶಿವಮೊಗ್ಗ ವಿಭಾಗೀಯ ಕಚೇರಿಯು 8 ಕಂದಾಯ ಜಿಲ್ಲೆ ಮತ್ತು ಕೇಂದ್ರಾಡಳಿತ ಪ್ರದೇಶವಾದ ಲಕ್ಷದ್ವೀಪ್‍ನ ಆಹಾರಧಾನ್ಯದ ಅವಶ್ಯಕತೆಯನ್ನು ಪೂರೈಸುತ್ತಿದೆ. ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆಯಡಿ ಮಾಸಿಕ 45 ಸಾವಿರ ಮೆ. ಟನ್ ಆಹಾರ ಧಾನ್ಯವನ್ನು ಜಿಲ್ಲೆಯಿಂದ ನೀಡಲಾಗುತ್ತಿದೆ ಎಂದರು.

ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಡಿಪೋಗಳಲ್ಲಿನ ಎಲ್ಲ ಕಾರ್ಯಾಚರಣೆಗಳನ್ನು ಡಿಓಎಸ್ ಮೂಲಕ ನಡೆಸಲಾಗುತ್ತಿದ್ದು, ಹೆಚ್ಚುವರಿ ಆಹಾರಧಾನ್ಯ ಹೊಂದಿರವ ರಾಜ್ಯಗಳಿಂದ ಆಹಾರಧಾನ್ಯಗಳನ್ನು ರೇಕ್ ಮೂಲಕ ಸ್ವೀಕರಿಸಿ ಗೋಡಾನ್‍ನಲ್ಲಿ ಸಂಗ್ರಹಿಸಲಾಗುತ್ತಿದೆ. ಆಹಾರ ಧಾನ್ಯಗಳ ಸಂರಕ್ಷಣೆ ಸಮಯ ಮತ್ತು ವಿತರಣೆಗೂ ಮುನ್ನ ಅಗತ್ಯ ಗುಣಮಟ್ಟದ ತಪಾಸಣೆ ಮತ್ತು ಗುಣಮಟ್ಟ ನಿಯಂತ್ರಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.
ಸಾರ್ವಜನಿಕ ಪಡಿತರ ಅಂಗಡಿಗಳಲ್ಲಿ ಮೇ ಮಾಹೆಯಿಂದ ಜುಲೈವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ 18,316 ಮೆಟ್ರಿಕ್ ಟನ್, ದಾವಣಗೆರೆಯಲ್ಲಿ 5,500 ಮೆ.ಟನ್ ಮತ್ತು ಉತ್ತರ ಕನ್ನಡದಲ್ಲಿ 8,026 ಮೆ.ಟನ್ ಸಾರವರ್ಧಿತ ಅಕ್ಕಿಯನ್ನು ವಿತರಿಸಲಾಗಿದೆ.

ಮಧ್ಯಾಹ್ನದ ಬಿಸಿಯೂಟಕ್ಕೆ ಕಳೆದ ಆಗಸ್ಟ್‌ನಿಂದ ಶಿವಮೊಗ್ಗದಲ್ಲಿ 3,577 ಮೆ.ಟನ್, ದಾವಣಗೆರೆಯಲ್ಲಿ 3,532 ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ 1494 ಮೆ.ಟನ್ ಸಾರವರ್ಧಿತ ಅಕ್ಕಿ ನೀಡಲಾಗಿದೆ. ಶಿವಮೊಗ್ಗ ವ್ಯಾಪ್ತಿಗೊಳಪಡುವ 8 ಕಂದಾಯ ಜಿಲ್ಲೆಗಳಿಗೆ ಇದುವರೆಗೆ 23,183 ಮೆಟ್ರಿಕ್ ಟನ್ ಸಾರವರ್ಧಿತ ಅಕ್ಕಿ ವಿತರಿಸಲಾಗಿದೆ.
-ಶಿವಕುಮಾರ್, ಮ್ಯಾನೇಜರ್, ಗುಣಮಟ್ಟ ನಿಯಂತ್ರಣ

ಪತ್ರಿಕಾಗೋಷ್ಟಿಯಲ್ಲಿ ಸೆಂಟ್ರಲ್ ಬ್ಯೂರೋ ಆಫ್ ಇನ್‍ಫಾರ್ಮೇಷನ್‍ನ ಫೀಲ್ಡ್ ಪಬ್ಲಿಸಿಟಿ ಆಫೀಸರ್ ಅಕ್ಷತಾ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಜು.25, 26ರಂದು ಸಿಎಂ ದೆಹಲಿ ಪ್ರವಾಸ: ವರಿಷ್ಠರು ಪ್ರಸ್ತಾಪಿಸಿದರೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ

Next Post

ಬುದ್ಧಿವಾದ ಹೇಳಿದ್ದಕ್ಕೆ ಕಬ್ಬಿಣದ ಸಲಾಕೆಯಿಂದ ಹಲ್ಲೆ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬುದ್ಧಿವಾದ ಹೇಳಿದ್ದಕ್ಕೆ ಕಬ್ಬಿಣದ ಸಲಾಕೆಯಿಂದ ಹಲ್ಲೆ!

ಬುದ್ಧಿವಾದ ಹೇಳಿದ್ದಕ್ಕೆ ಕಬ್ಬಿಣದ ಸಲಾಕೆಯಿಂದ ಹಲ್ಲೆ!

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗಾಯಕಿ ಭೂಮಿಕಾ ಮಧುಸೂಧನ್’ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯ ಗೌರವ

ಗಾಯಕಿ ಭೂಮಿಕಾ ಮಧುಸೂಧನ್’ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯ ಗೌರವ

May 22, 2026
ಕುವೆಂಪು ವಿವಿಯಲ್ಲಿ ಭಯೋತ್ಪಾದನಾ ವಿರೋಧಿ ದಿನ | ಪ್ರತಿಜ್ಞಾ ವಿಧಿ ಸ್ವೀಕಾರ

ಕುವೆಂಪು ವಿವಿಯಲ್ಲಿ ಭಯೋತ್ಪಾದನಾ ವಿರೋಧಿ ದಿನ | ಪ್ರತಿಜ್ಞಾ ವಿಧಿ ಸ್ವೀಕಾರ

May 22, 2026
ಅಕ್ರಮ ಗೋ ಸಾಗಾಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಹಿಂದೂ ಜಾಗರಣ ವೇದಿಕೆ ಆಗ್ರಹ

ಅಕ್ರಮ ಗೋ ಸಾಗಾಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಹಿಂದೂ ಜಾಗರಣ ವೇದಿಕೆ ಆಗ್ರಹ

May 22, 2026
ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ

ನಾಳೆ ರೋಜಗಾರ್ ಮೇಳ | 51,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಣೆ

May 22, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಕನ್ಯಾಕುಮಾರಿ – ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ರೈಲಿನ ಸಮಯ ಬದಲು

May 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL