ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದೇಶದ ಹಳ್ಳಿ ಹಳ್ಳಿಗಳಲ್ಲೂ ಯುವಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೈಕಾರ ಹಾಕುವುದನ್ನು ಸಹಿಸಲಾಗದೆ ಸಿದ್ಧರಾಮೋತ್ಸವ ಕಾರ್ಯಕ್ರಮ ಮಾಡಿದ್ದಾರೆ ಎಂದು ಶಾಸಕ ಈಶ್ವರಪ್ಪ MLA Eshwarappa ಲೇವಡಿ ಮಾಡಿದರು.
ನಗರದಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಯುವಕರ ಸಿಂಹಗರ್ಜನೆಯಿಂದ ಸಿದ್ಧರಾಮಯ್ಯ ಅವರಿಗೆ ಭಯ ಹುಟ್ಟಿದೆ. ಚುನಾವಣೆಗೂ ಮುನ್ನ ಸಿದ್ಧರಾಮೋತ್ಸವದಂತಹ 100 ಕಾರ್ಯಕ್ರಮಗಳನ್ನು ನಾವು ಮಾಡಿ ತೋರಿಸುತ್ತೇವೆ ಎಂದು ಸವಾಲು ಹಾಕಿದರು.
ಅಮೃತ ಮಹೋತ್ಸದಲ್ಲಿ ರಾಜಕಾರಣ ತರಬೇಡಿ:
ಸಾಧ್ಯವಾದರೆ ದೇಶದ ಯುವಕರಲ್ಲಿ ರಾಷ್ಟ್ರಭಕ್ತಿ ಮೂಡಿಸುವ ಪ್ರಯತ್ನ ಮಾಡಿ. ಇಲ್ಲವೇ, ನೀವೇ ನಿಮ್ಮ ಪಕ್ಷದಲ್ಲಿ ಬಡಿದಾಡಿಕೊಳ್ಳಿ. ಆದರೆ ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿ ರಾಜಕಾರಣ ಮಾಡಬೇಡಿ ಎಂದು ಸಿದ್ಧರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಇಬ್ಬರಿಗೂ ವಿನಂತಿ ಮಾಡುತ್ತೇನೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post