No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಆರ್ಯವೈಶ್ಯ ಸಮಾಜ ‘ವಾಸವಿ ಜಯಂತಿ’ಯನ್ನು ಮಾದರಿಯಾಗಿ ಆಚರಿಸುತ್ತಿರುವುದು ಹೇಗೆ ಗೊತ್ತಾ?

kalpa News by kalpa News
April 30, 2020
in Special Articles
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಧಾರ್ಮಿಕ ಆಚರಣೆಗಳು ಭಾವೈಕ್ಯ ಸಾರುವ ಆಚರಣೆಗಳಾಗಿ ವಿವಿಧತೆಯಲ್ಲಿ ಏಕತೆಯ ಭಾವ ಬೀರುತ್ತ ಭಾರತೀಯ ಸಂಸ್ಕೃತಿಗಳ ಪ್ರತಿನಿಧಿತ್ವ ವಹಿಸುತ್ತ ಸಾಮಾಜಿಕ ಪ್ರಗತಿಗೆ ನಾಂದಿ ಹಾಡುವ ಆಚರಣೆಗಳಾಗಿ ಹೊರಹೊಮ್ಮಿ ಸಂಸ್ಕೃತಿಗಳ ಹೆಮ್ಮೆ ಎನಿಸುತ್ತಿವೆ. ಸಾಮಾಜಿಕ ಸಾಮರಸ್ಯ ಬಿಂಬಿಸುವ ಸತ್ಕಾರ್ಯಗಳ ಮೂಲಕ ಆಚರಣೆಗಳ ಮಹತ್ವವನ್ನು ಸಾರುವುದೇ ಮೂಲ ಉದ್ದೇಶ ಎಂಬ ಮಹತ್ವದ ಮಾತಿಗೆ ಸಾಕ್ಷಿಯಾಗಿ ಪ್ರತಿಯೊಂದು ಜನಾಂಗದ ವಿಶಿಷ್ಟ ಆಚರಣೆಗಳಂತೆ ಆರ್ಯ ವೈಶ್ಯ ಸಮಾಜದ ವಾಸವಿ ಜಯಂತಿ ಆಚರಣೆಯು ಮೇ 2 ರಂದು ಜರುಗಲಿದೆ.

ವಿಶ್ವದಾದ್ಯಂತ ಅಪ್ಪಳಿಸಿರುವ ಕೊರೊನಾ ಮಹಾಮಾರಿಯಿಂದಾಗಿ ಪ್ರತಿ ವರ್ಷದಂತೆ ಈ ವರ್ಷದ ಆಚರಣೆಯಲ್ಲಿ ವಿಜೃಂಬಣೆ ಇರದೇ ತಮ್ಮ ತಮ ಮನೆಗಳಲ್ಲಿಯೇ ವಾಸವಿ ಜಯಂತಿಯನ್ನು ಆಚರಿಸಲು ಸಮಾಜ ಬಾಂಧವರು ಸ್ವಯಂಪ್ರೇರಿತರಾಗಿ ಸಿದ್ದರಾಗಿರುವುದು ಸರ್ಕಾರದ ನಿಯಮಾವಳಿಗೆ ಪೂರಕವಾಗಿದೆ. ಆದರೆ ಆಚರಣೆಯ ಭಾಗವಾಗಿ ನಡೆಯುತ್ತಿದ್ದ ಸಾಮಾಜಿಕ ಸದುದ್ದೇಶದ ಕಾರ್ಯಗಳು ಎಂದಿಗಿಂತ ಇಂದು ಹೆಚ್ಚಾಗಿ ನಡೆಯುತ್ತಿದ್ದು ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುತ್ತಿವೆ.

ಶಿವಮೊಗ್ಗದ ವಾಸವಿ ಯುವಜನ ಸಂಘ, ಗಾಂಧಿ ಬಜಾರ್ ಮತ್ತು ವಾಸವಿ ಯುವಜನ ಸಂಘ(ಬಡಾವಣೆ) ಇವರ ಸಂಯುಕ್ತಾಶ್ರಯದಲ್ಲಿ ಕಳೆದ ಹದಿನಾರು ವರ್ಷಗಳಿಂದ ನಡೆದು ಬಂದ ಸಂಪ್ರದಾಯದಂತೆ ಈ ಬಾರಿಯೂ ರಕ್ತದಾನ ಶಿಬಿರವನ್ನು ಏರ್ಪಡಿಸಿ ಸಾರ್ಥಕತೆ ಮೆರೆಯುತ್ತಿವೆ. ಲಾಕ್ ಡೌನ್ ನಂತಹ ಭಿನ್ನ ಪರಿಸ್ಥಿತಿಯಲ್ಲಿ ರಕ್ತದ ಅಭಾವ ಹೆಚ್ಚಾಗಿದ್ದು ಸ್ವಯಂ ಪ್ರೇರಿತ ರಕ್ತದಾನಿಗಳು ಹೊರಬರಲು ಹಿಂದೇಟು ಹಾಕುತ್ತಿರುವುದರ ಪರಿಣಾಮ, ರಕ್ತದ ಯೂನಿಟ್ ಗಳ ಸಂಗ್ರಹ ಪ್ರಮಾಣ ಅನಿರೀಕ್ಷಿತ ಪ್ರಮಾಣಕ್ಕೆ ಕುಸಿದು, ನಿತ್ಯ ರಕ್ತದ ಅವಲಂಬಿತರನ್ನು ಚಿಂತೆಗೀಡು ಮಾಡಿರುವ ಸಂದಿಗ್ದ ಪರಿಸ್ಥಿತಿಯಲ್ಲಿ ವಾಸವಿ ಯುವಜನ ಸಂಘವು ವಾಸವಿ ಜಯಂತಿಯ ದಿನವಾದ ಮೇ 2  ರಿಂದ 9 ರವರೆಗೆ ರಕ್ತದಾನ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಂಡು ಸ್ವಯಂ ಪ್ರೇರಿತ ರಕ್ತದಾನಿಗಳಿಗೆ ವೇದಿಕೆ ಸೃಷ್ಟಿ ಮಾಡಿದೆ.

ಪ್ರತಿ ವರ್ಷ ಕೇವಲ ಒಂದು ದಿನಕ್ಕೆ ಸೀಮಿತವಾಗುತ್ತಿದ್ದ ಈ ರಕ್ತದಾನ ಶಿಬಿರವು ಕೊರೊನಾ ಪ್ರಯುಕ್ತ ಏಳು ದಿನಗಳ ಸಪ್ತಾಹಕ್ಕೆ ವಿಸ್ತೃತಗೊಂಡಿರುವುದು, ವಾಸವಿ ಜಯಂತಿ ಆಚರಣೆಯ ಮೂಲಕ ಸಾಮಾಜಿಕ ಸಾಮರಸ್ಯಕ್ಕೆ ಆರ್ಯವೈಶ್ಯರು ನೀಡುತ್ತಿರುವ ಕೊಡುಗೆಯಾಗಿದೆ. ಯುವಕರ ಈ ಮಹತ್ಕಾರ್ಯವನ್ನು ಮೆಚ್ಚಿ ಕರ್ನಾಟಕ ಆರ್ಯವೈಶ್ಯ ಮಹಾಸಭಾ ಸಂಸ್ಥೆಯು ಈ ಕಾರ್ಯಕ್ರಮವನ್ನು ರಾಜ್ಯದಾದ್ಯಂತ ಸಮಾಜದ ಎಲ್ಲ ಸಂಸ್ಥೆಗಳೂ ಆಯೋಜಿಸಲು ಕರೆ ನೀಡಿರುವುದು ಶಿವಮೊಗ್ಗೆಯ ಯುವಕರಿಗೆ ಹೆಮ್ಮೆಯ ವಿಚಾರ. ರಾಜ್ಯಾದ್ಯಂತ 5000 ರಕ್ತದ ಯೂನಿಟ್ ಗಳು ಹಾಗೂ ಶಿವಮೊಗ್ಗ ನಗರದಿಂದ 100 ಕ್ಕೂ ಅಧಿಕ ಯೂನಿಟ್ ಗಳ ಗುರಿ ಹೊತ್ತು ಕೈಗೊಂಡಿರುವ ಈ ಮಹತ್ಕಾರ್ಯವು ಲಾಕ್ ಡೌನ್ ನಂತಹ ಕ್ಲಿಷ್ಟಕರ ಸನ್ನಿವೇಶದಲ್ಲಿ ಜೀವದಾನದಂತಹ ಕಾರ್ಯವೆನಿಸಿದೆ. ಪ್ರತಿ ಮೂರು ತಿಂಗಳಿಗೊಮ್ಮೆ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡುವುದರಿಂದ ಸದೃಡ ಹಾಗೂ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬಹುದಾಗಿದೆ. ಮಹಿಳೆಯರೂ ಕೂಡ ಅವಶ್ಯವಾಗಿ ರಕ್ತದಾನ ಮಾಡಬಹುದಾಗಿದ್ದು ಸ್ಥಳದಲ್ಲೇ ವೈದ್ಯರ ಸಲಹೆ ಪಡೆಯಬಹುದಾಗಿದೆ. ಈ ಮೂಲಕ ರಕ್ತದಾನ ಶ್ರೇಷ್ಠ ದಾನವೆಂದು ಸಾರುವ ಸಮಯ ಬಂದಿದೆ.

ಶಿವಮೊಗ್ಗ ನಗರದಲ್ಲಿ ವಿನಾಯಕ ನಗರದ ರೋಟರಿ ರಕ್ತನಿಧಿ ಸಂಸ್ಥೆಯು ಲಾಕ್ ಡೌನ್ ಸಮಯದಲ್ಲಿ ದೂರದಿಂದ ಬರುವ ದಾನಿಗಳಿಗೆ ಅಗತ್ಯ ಬಿದ್ದಲ್ಲಿ ವಾಹನ ವ್ಯವಸ್ಥೆಯನ್ನೂ ಕಲ್ಪಿಸಿದ್ದು ಸಾರ್ವಜನಿಕರೂ ಈ ಶ್ರೇಷ್ಠ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ವಿನಂತಿಸಲಾಗಿದೆ.

ವಾಹನದ ವ್ಯವಸ್ಥೆ ಹಾಗೂ ಹೆಚ್ಚಿನ ವಿವರಗಳು ಬೇಕಿದ್ದಲ್ಲಿ ಶ್ರೀನಾಗ್ (9844174143) ಹಾಗೂ ಬಾಲಾಜಿ (9886009942) ಇವರುಗಳನ್ನು ಸಂಪರ್ಕಿಸಲು ಕೋರಲಾಗಿದೆ.


Get in Touch With Us info@kalpa.news Whatsapp: 9481252093

Tags: Arya Vaishya CommunityBloodDonationKannadaNewsWebsiteLatestNewsKannadaShivamoggaVasavi Jayantiಕರ್ನಾಟಕ ಆರ್ಯವೈಶ್ಯ ಮಹಾಸಭಾರಕ್ತದಾನರೋಟರಿ ರಕ್ತನಿಧಿವಾಸವಿ ಜಯಂತಿಶಿವಮೊಗ್ಗ
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದಾವಣಗೆರೆಯಲ್ಲಿ ಮತ್ತೊಂದು ಹೊಸ ಕೊರೋನಾ ಸೋಂಕು ಪ್ರಕರಣ: ಸಡಿಲಿಕೆ ಹಿಂಪಡೆತ

Next Post

ಹೇಗಿದ್ದಾನೆ ನೋಡಿ ಜೂನಿಯರ್ ರಾಖಿ ಭಾಯ್: ಮಗನ ಫೋಟೋ ರಿವೀಲ್ ಮಾಡಿದ ರಾಕಿಂಗ್ ಸ್ಟಾರ್ ಯಶ್

kalpa News

kalpa News

Next Post

ಹೇಗಿದ್ದಾನೆ ನೋಡಿ ಜೂನಿಯರ್ ರಾಖಿ ಭಾಯ್: ಮಗನ ಫೋಟೋ ರಿವೀಲ್ ಮಾಡಿದ ರಾಕಿಂಗ್ ಸ್ಟಾರ್ ಯಶ್

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL