ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಟನಂ ಬಾಲನಾಟ್ಯ ಕೇಂದ್ರದ ಅಧ್ಯಕ್ಷ ಹಾಗೂ ಕರ್ನಾಟಕ ಕಲಾ ಶ್ರೀ ವಿದ್ವಾನ್ ಎಸ್. ಕೇಶವಕುಮಾರ್ ಫಿಳೈ ಅವರಿಗೆ ಕೊಲ್ಕತ್ತಾದ ವೆಸ್ಟ್ ಬೆಂಗಾಲ್ನ ಹಿಂದೂಸ್ತಾನ್ ಆಟ್ರ್ಸ್ ಮತ್ತು ಮ್ಯೂಸಿಕ್ ಸೊಸೈಟಿರವರು ಭರತನಾಟ್ಯ ಕಲಾ ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ಪದವಿ ನೀಡಿ ಸನ್ಮಾನಿಸಿದ್ದಾರೆ.
ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ವಿದ್ವಾನ್ ಎಸ್.ಕೇಶವಕುಮಾರ್ ಫಿಳೈ ಮಾಹಿತಿ ನೀಡಿ, 38 ವರ್ಷಗಳಿಂದ ನಮ್ಮ ಕೇಂದ್ರದಿಂದ ಭರತನಾಟ್ಯವನ್ನು ಕಲಿಸುತ್ತಿದ್ದೇವೆ. ಸಾವಿರಾರು ಮಕ್ಕಳು ನಮ್ಮ ಸಂಸ್ಥೆಯಲ್ಲಿ ಕಲಿತು ದೇಶ ವಿದೇಶಗಳಲ್ಲಿ ಹೆಸರು ಮಾಡಿದ್ದಾರೆ. ನನ್ನ 38 ವರ್ಷದ ಈ ಸೇವೆಯನ್ನು ಗುರುತಿಸಿ ಮ್ಯೂಸಿಕ್ ಸೊಸೈಟಿಯವರು ಡಾಕ್ಟರೇಟ್ ಪದವಿ ನೀಡಿರುವುದು ನನಗೆ ಸಂತಸ ತಂದಿದೆ ಎಂದರು.

Also read: ಗ್ಯಾರಂಟಿ ಯೋಜನೆಗಳ ಬಗ್ಗೆ ಸಚಿವ ಮಧು ಬಂಗಾರಪ್ಪ ಮಹತ್ವದ ಹೇಳಿಕೆ
ನಟನಂ ಬಾಲನಾಟ್ಯ ಕೇಂದ್ರವು ಭಾರತೀಯ ಸಂಸ್ಕøತಿಯ ಉಳಿಸುವ ನಿಟ್ಟಿನಂತ ಸಾಗುತ್ತ ಬಂದಿದ್ದು, ಭರತನಾಟ್ಯವನ್ನು ಮುಂದಿನ ಪೀಳಿಗೆಗೂ ಉಳಿಸುವ ಕೆಲಸವನ್ನು ಮಾಡುತ್ತಿದೆ. ಇದರ ಜೊತೆಗೆ ಜಾನಪದ ನೃತ್ಯಗಳಿಗೂ ಆದÀ್ಯತೆ ನೀಡುತ್ತಿದೆ. ಅಷ್ಟೇ ಅಲ್ಲದೆ, ಪರಿಸರದ ಬಗ್ಗೆ ಕಾಳಜಿ, ಆರೋಗ್ಯ ಕಾರ್ಯಕ್ರಮಗಳು ಸೇರಿದಂತೆ ಸಮಾಜಮುಖಿ ಕೆಲಸಗಳನ್ನು ಮಾಡುತ್ತ ಬಂದಿದೆ. ಹೊರ ರಾಜ್ಯ ಮತ್ತು ಹೊರದೇಶಗಳಲ್ಲಿ ಕಾರ್ಯಕ್ರಮ ನೀಡಿರುವುದು ನಮ್ಮ ಹೆಮ್ಮೆಯಾಗಿದೆ. ದಿ.ಎಸ್.ಬಂಗಾರಪ್ಪ, ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ, ದಿ.ಅಟಲ್ಬಿಹಾರಿ ವಾಜಪೇಯಿ, ಮಾಜಿ ಸಚಿವೆ ರಾಣಿ ಸತೀಶ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ, ಡಾ.ಮುರುಳಿ ಮನೋಹರ್ ಜೋಷಿ, ಬಿ.ಎಸ್.ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪ ಸೇರಿದಂತೆ ಹಲವು ಗಣ್ಯರ ಸಮ್ಮುಖದಲ್ಲಿ ಕಾರ್ಯಕ್ರಮಗಳನ್ನು ನೀಡಿದ ಹೆಮ್ಮೆ ನಮ್ಮದಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಆರ್.ಶೇಖರ್,ಕುಮಾರಸ್ವಾಮಿ, ಚೇತನ್, ನಾಟ್ಯಶ್ರೀ, ವಂದನಾ, ಕಣ್ಣಗಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post