ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕರ್ನಾಟಕ ಹಾಗೂ ಭಾರತದ ಹಲವು ರಾಜ್ಯಗಳಿಂದ ಸುಮಾರು 350ಕ್ಕಿಂತಲೂ ಹೆಚ್ಚಿನ ವೈದ್ಯರು, ವೈದ್ಯೋದ್ಯಮಿಗಳು ಹಾಗೂ ವೈದ್ಯಕೀಯ ಕ್ಷೇತ್ರದ ಚಿಂತಕರನ್ನು ಒಂದೇ ವೇದಿಕೆಯಲ್ಲಿ ತರುವ ವಿನೂತನ ಕಾರ್ಯಕ್ರಮ ವೈದ್ಯರ ಸಮ್ಮೇಳನ ಸೆ.20 ಮತ್ತು 21ರಂದು ಶಿವಮೊಗ್ಗದ ಸರ್ಜಿ ಕನ್ವೆನ್ಷನ್ ಹಾಲ್ನಲ್ಲಿ ಆಯೋಜಿಸಲಾಗಿದೆ ಎಂದು ಅಂತರ ರಾಷ್ಟ್ರೀಯ ಲಿಂಗಾಯಿತ ಯುವ ವೇದಿಕೆಯ ರಾಜ್ಯ ಪ್ರತಿನಿಧಿ ಕಿರಣ್ಕುಮಾರ್ ಎಂ.ಡಿ. ಹೇಳಿದರು.
ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂತರರಾಷ್ಟ್ರೀಯ ಲಿಂಗಾಯತ ಯುವ ವೇದಿಕೆಯ ಶಿವಮೊಗ್ಗ ಘಟಕದ ವತಿಯಿಂದ ಸೆ.20ರಂದು ಸರ್ಜಿ ಕನ್ವೆನ್ಷನ್ ಹಾಲ್ನಲ್ಲಿ ಬೆಳಿಗ್ಗೆ 9.30ಕ್ಕೆ ಸಮ್ಮೇಳನ ಹಾಗೂ 21ರಂದು ಸಿಗಂಧೂರು ಮತ್ತು ಜೋಗಕ್ಕೆ ನೆಟ್ವರ್ಕಿಂಗ್ ಟ್ರಿಪ್ ಏರ್ಪಡಿಸಲಾಗಿದೆ ಎಂದು ತಿಳಿಸಿದರು.

ವೈದ್ಯಕೀಯ ಕ್ಷೇತ್ರದಲ್ಲಿ ಹಲವು ತಾಂತ್ರಿಕ ಹಾಗೂ ಕಾನೂನಾತ್ಮಕ ಅಂಶಗಳನ್ನು ಜಗತ್ತಿನ ಎಲ್ಲೆಡೆಯಿಂದ ಶೋಧಿಸಿ ಕ್ಷಿಪ್ರವಾಗಿ ಒದಗಿಸುವ ಎಐ ಒಳನೋಟಗಳು, ಹಾಸ್ಪಿಟಲ್ ವಿಸ್ತರಣೆ, ಸಂಪನ್ಮೂಲ ಕ್ರೋಢೀಕರಣ, ಸಂಪತ್ತಿನ ಸೃಷ್ಟಿ, ಮತ್ತು ನೂತನ ಡಿಜಿಟಲ್ ಹೆಲ್ತ್ ಕೇರ್ನ ಸಾಧಕ ಬಾಧಕಗಳ ಬಗ್ಗೆ ವಿಶೇಷ ಚರ್ಚೆಗಳಿಗೆ ಈ ಸಮಾವೇಶ ಸಾಕ್ಷಿಯಾಗಲಿದೆ ಎಂದರು.

ಈ ಸಮಾವೇಶದ ಸಂಯೋಜಕರಾಗಿ ಡಾ. ಶಾಲಿನಿ ನಲ್ವಾಡ್ (ಕೋ ಫೌಂಡರ್, ಏರ್ ಅಂಬುಲೆನ್ಸ್), ಡಾ. ಧನಂಜಯ ಸರ್ಜಿ (ಒಐಅ & ಸರ್ಜಿ ಗ್ರೂಪ್ ಆಫ್ ಹಾಸ್ಪಿಟಲ್ಸ್) ಹಾಗೂ iಐಙಈ ಟ್ರಸ್ಟಿನ ಟ್ರಸ್ಟಿಗಳು ಹಾಗೂ ಸದಸ್ಯರು ಭಾಗವಹಿಸುವರು. ಡಾ. ನಾಗೇಂದ್ರ ಸ್ವಾಮಿ (ಚೀಫ್ ಎಕ್ಸಿಕ್ಯೂಟಿವ್ ಆಫೀಸರ್, ರಾಮಯ್ಯ ಮೆಮೋರಿಯಲ್ ಹಾಸ್ಪಿಟಲ್), ದಿಕ್ಕೂಚಿ ಭಾಷಣ ಮಾಡಲಿದ್ದಾರೆ. ಡಾ. ಧನಂಜಯ್ ಅರೋರ (ಬ್ರಾಂಡ್ ಮ್ಯಾನೇಜೆಂಟ್ ಎಕ್ಸ್ರ್ಟ್ & ಖಿಇಆx ಸ್ಪೀಕರ್), ಡಾ. ಸುರೇಶ್ ಬಾಡಮಠ (ಪ್ರೊಫೆಸರ್ ನಿಮಾನ್ಸ್), ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದಲ್ಲಿ ಬಹಳಷ್ಟು ಸಾಧನೆ ಮಾಡಿದ ವ್ಯಕ್ತಿಗಳು ಈ ಸಮಿತ್ನಲ್ಲಿ ವೈದ್ಯಕೀಯ ಸೇವೆಯನ್ನು ವಿಸ್ತರಿಸುವ ಬಗ್ಗೆ, ಆರ್ಥಿಕ ನಿರ್ವಹಣೆ ಬಗ್ಗೆ, ಆಡಳಿತದ ಬಗ್ಗೆ, ವೈದ್ಯರುಗಳ ಸಾಂಘಿಕ ವ್ಯವಹಾರ, ಉದ್ಯಮದ ಬಗ್ಗೆ ಮಲ್ಟಿಪಲ್ ಪ್ಯಾನೆಲ್ ಡಿಸ್ಕಶನ್ಸ್ ನಡೆಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಡಾ. ಅವಿನಾಶ್, ಡಾ. ಶಶಿಕಾಂತ್, ಬೆನಕಪ್ಪ ನಂಜಪ್ಪ ಹಾಸ್ಪಿಟಲ್, ಶಿವಕುಮಾರ್, ಡಾ. ಶಂಭುಲಿಂಗ, ಪ್ರಕಾಶ್, ರವೀಂದ್ರ ಬೆಣ್ಣೆಹಳ್ಳಿ, ರಾಜೇಶ್ ಸುರಗಿಹಳ್ಳಿ ಮುಂತಾದರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post