ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಟಿವಿಯಲ್ಲಿ ತೋರಿಸುವ ಪರೋಕ್ಷ ಮಾದಕ ದ್ರವ್ಯಗಳ ಜಾಹೀರಾತು ನೋಡಿ ಇಂದಿನ ಯುವ ಪೀಳಿಗೆ ದುಶ್ಚಟಗಳನ್ನು ಕಲಿಯಬಾರದು ಎಂದು ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ವೈದ್ಯಕೀಯ ನಿರ್ದೇಶಕ ಡಾ.ಎಸ್. ನಾಗೇಂದ್ರ ಕರೆ ನೀಡಿದರು.
ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಸಮಾಜವನ್ನು ತಪ್ಪು ದಾರಿಗೆ ಎಳೆಯುವ ಕೆಟ್ಟ ಸಂದೇಶ ನೀಡುವ ಇಂತಹ ಜಾಹೀರಾತು ನೀಡುವುದನ್ನು ಕಡಿಮೆ ಮಾಡಬೇಕು. ಸರ್ಕಾರ ಈ ಬಗ್ಗೆ ಜಾಗೃತಿ ಮೂಡಿಸಬೇಕು. ಇಂತಹ ಜಾಹೀರಾತುಗಳನ್ನು ನೋಡಿ ಯುವಕರು ದಾರಿ ತಪ್ಪಬಾರದು. ಇದರಿಂದ ಮುಂದಾಗುವ ಅಪಾಯಗಳನ್ನು ಅರಿತು ಎಚ್ಚರಿಕೆ ವಹಿಸಬೇಕು ಎಂದು ಕರೆ ನೀಡಿದರು.

Also read: ಡ್ರಗ್ಸ್ ದಾಸ್ಯದಿಂದ ಜೀವನವೇ ಸರ್ವನಾಶ | ನ್ಯಾ. ಸಂತೋಷ್ ಕಿವಿಮಾತು
ಡೀನ್ ಡಾ. ನಂದ ಕಿಶೋರ್ ಲಾಹೋಟಿ ಮಾತನಾಡಿ, ಭವಿಷ್ಯದಲ್ಲಿ ವೈದ್ಯರಾಗುವ ನೀವು ಸಮಾಜಕ್ಕೆ ವಿಶೇಷ ಸೇವೆ ಸಲ್ಲಿಸಬೇಕು. ಪ್ರಮುಖವಾಗಿ ದುಶ್ಚಟಗಳನ್ನು ಕಲಿಯದಂತೆ ಯುವಕರು ಹಾಗೂ ಸಮಾಜದಲ್ಲಿ ಜಾಗೃತಿ ಮೂಡಿಸುವಲ್ಲಿ ಯುವ ವೈದ್ಯರು ಕಾರ್ಯಪ್ರವೃತ್ತರಾಗುವ ಮೂಲಕ ತಮ್ಮ ಸಾಮಾಜಿಕ ಜವಾಬ್ದಾರಿಯನ್ನು ಅರಿತು ನಡೆಯಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ಲತಾ ನಾಗೇಂದ್ರ, ದಂತ ವೈದ್ಯಕೀಯ ಕಾಲೇಜಿನ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ವಿನಯ ಶ್ರೀನಿವಾಸ್, ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಸಿ.ಎಂ. ಸಿದ್ದಲಿಂಗಪ್ಪ, ಎಂಎಸ್ ಡಾ.ವಿನಾಯಕ ಭಟ್, ಮನೋವೈದ್ಯಕೀಯ ವಿಭಾಗದ ಎಚ್’ಒಡಿ ಡಾ.ಹರೀಶ್ ದೆಲಂತಬೆಟ್ಟು, ಮನೋವೈದ್ಯಕೀಯ ವಿಭಾಗದ ಡಾ.ಕೆ.ಎಸ್. ಶುಭ್ರತಾ, ಡಾ.ದಯಾನಂದ ಸಾಗರ ಎಲ್ ಸೇರಿದಂತೆ ಹಲವರು ಇದ್ದರು.

- ಕ್ರಿಯಾಶೀಲತೆ ಕಳೆದುಕೊಳ್ಳುವುದು
- ರೋಗನಿರೋಧಕ ಶಕ್ತಿ ಕಡಿಮೆಯಾಗುವುದು
- ವಾಕರಿಕೆ, ಕಿಬ್ಬೊಟ್ಟೆ ನೋವು, ಕಡಿಮೆ ಹಸಿವು, ತೂಕ ನಷ್ಟ
- ಮೆದುಳಿನ ನರಗಳು ದುರ್ಬಲವಾಗುವುದು, ಪಾರ್ಶ್ವವಾಯು ಹೊಡೆಯುವ ಸಾಧ್ಯತೆ
- ಹೃದಯದಲ್ಲಿ ಬೊಜ್ಜು ಬೆಳವಣಿಗೆ, ರಕ್ತನಾಳಗಳು ಸರಾಗವಾಗಿ ರಕ್ತ ಪಂಪ್ ಮಾಡದೇ ಇರುವುದು
- ಹೆಪಟೋಸೆಲ್ಯುಲಾರ್ ಒತ್ತಡದಿಂದ ಯಕೃತ್ತಿನ ಹಾನಿ ಅಥವಾ ವೈಫಲ್ಯ
- ನೆನಪಿನ ಶಕ್ತಿ ಕಳೆದುಕೊಳ್ಳುವುದು
- ಪುರುಷರಲ್ಲಿ ಸ್ತನ ಬೆಳವಣಿಗೆ, ದೇಹದ ಉಷ್ಣತೆಯಲ್ಲಿ ಏರಿಕೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post