ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಯಾರು ಏನಾದರೂ ಟೀಕೆಗಳನ್ನು ಮಾಡಿಕೊಂಡರೂ ನಾವು ತಲೆಕೆಡಿಸಿಕೊಳ್ಳಲ್ಲ. ನಮ್ಮ ಸಾಧನೆ ಹಾಗೂ ಕೆಲಸಗಳನ್ನು ಮುಂದಿಟ್ಟು ಮತ ಕೇಳುತ್ತೇವೆ ಎಂದು ಸಂಸದ ಬಿ.ವೈ. ರಾಘವೇಂದ್ರ #B Y Raghavendra ಹೇಳಿದ್ದಾರೆ.
ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಕಳೆದ 5 ವರ್ಷಗಳಲ್ಲಿ ಮಾಡಲಾಗಿರುವ ಕೆಲಸಗಳು, ಮೋದಿ ಸರ್ಕಾರದ 10 ವರ್ಷದ ಸಾಧನೆಗಳನ್ನು ಮುಂದಿಟ್ಟುಕೊಂಡು ನಾವು ಮತ ಕೇಳುತ್ತೇವೆ. ಯಾರು ಏನಾದರೂ ಟೀಕೆ ಟಿಪ್ಪಣಿ ಮಾಡಿಕೊಳ್ಳಲಿ. ನಾವು ಅದಕ್ಕೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು.
ದಿನೇ ದಿನೇ ಬಿಜೆಪಿ ಹಾಗೂ ಪ್ರಧಾನಿ ಮೋದಿ #PM Modi ಪರವಾಗಿ ವಾತಾವರಣ ಪೂರಕವಾಗಿ ಬೆಳೆಯುತ್ತಿದೆ. ಮೋದಿಯವರ ನೇತೃತ್ವದಲ್ಲಿ ಎನ್’ಡಿಎ 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸುವ ದಿಕ್ಕಿನಲ್ಲಿ ಮುನ್ನುಗ್ಗುತ್ತಿದೆ. ಮೊದಲ ಹಂತದ ಚುನಾವಣೆಯಲ್ಲೂ ಸಹ ಇದಕ್ಕೆ ಪೂರಕವಾಗಿದೆ. ಇದರೊಂದಿಗೆ ನಮ್ಮಲ್ಲಿದ್ದ ಸಮಸ್ಯೆಗಳನ್ನು ಪರಿಹರಿಸಿಕೊಂಡು ಕಾರ್ಯಕರ್ತರ ಪಡೆ ಹಗಲಿರುಳು ಶ್ರಮಿಸುತ್ತಿದೆ ಎಂದರು.
Also read: ಶಿಕಾರಿಪುರ | ರಾಘವೇಂದ್ರ-ವಿಜಯೇಂದ್ರ ಜಂಟಿ ಪ್ರಚಾರದ ಭರಾಟೆ
ನಮ್ಮ ನಾಯಕರು ಹಾಗೂ ಕಾರ್ಯಕರ್ತರು ನಿರಂತರವಾಗಿ ಶ್ರಮಿಸುತ್ತಿದ್ದು, ಮೋದಿ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ, ತಾಯಂದಿರಿಗೆ ತಿಳಿಸಿ, ಮನವೊಲಿಸುವ ಕೆಲಸವನ್ನು ಬೂತ್ ಮಟ್ಟದಲ್ಲಿ ಮಾಡಲಾಗುತ್ತಿದೆ ಎಂದರು.
ಪ್ರಶಾಂತ್ ಹೇಳಿಕೆ ಸ್ವಾಗತಾರ್ಹ
ಮೋದಿಯವರ ನೇತೃತ್ವದ ಎನ್’ಡಿಎ ಸರ್ಕಾರ ಮತ್ತೆ ಹೆಚ್ಚಿನ ಸ್ಥಾನಗಳನ್ನು ಗಳಿಸಿ ಅಧಿಕಾರಕ್ಕೆ ಮರಳಲಿದೆ ಎಂದು ರಾಜಕೀಯ ವಿಶ್ಲೇಷಕ ಪ್ರಶಾಂತ್ ಕಿಶೋರ್ ಅವರೇ ಹೇಳಿರುವುದು ಸ್ವಾಗತಾಹ ಸಂಗತಿಯಾಗಿದೆ ಎಂದರು.
ನಾವು ಅಧಿಕಾರಕ್ಕೆ ಮತ್ತೆ ಬರುವುದು ನಿಶ್ಚಿತವಾಗಿದ್ದು, ಎಷ್ಟು ಹೆಚ್ಚು ಸ್ಥಾನಗಳನ್ನು ಗಳಿಸುತ್ತೇವೆ ಎನ್ನುವುದು ಮಾತ್ರ ಗಮನಹರಿಸಬೇಕಿದೆ ಎಂದರು.
ಇನ್ನು, ಶಿಕಾರಿಪುರ ಶಾಸಕರಾಗಿ, ಬಿಜೆಪಿ ರಾಜ್ಯಾಧ್ಯಕ್ಷರಾಗಿಯೂ ವಿಜಯೇಂದ್ರ ಅವರು ತಮ್ಮ ಕರ್ತವ್ಯವನ್ನು ಹಗಲಿರುಳು ನಿರ್ವಹಿಸುತ್ತಿದ್ದಾರೆ ಎಂದರು.
ರಾಜ್ಯಾಧ್ಯಕ್ಷರಾಗಿ ಎಷ್ಟೇ ಕೆಲಸಗಳಿದ್ದರೂ ಕ್ಷೇತ್ರಕ್ಕೆ ಬಂದು 15-16 ಸಭೆಗಳನ್ನು ನಡೆಸುತ್ತಿದ್ದಾರೆ. ಎಲ್ಲ ಸಮುದಾಯದವರ ಪಕ್ಷ ಸೇರ್ಪಡೆ ಹಾಗೂ ಬೆಂಬಲ ನಮಗೆ ಮತ್ತಷ್ಟು ಬಲ ನೀಡಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post