No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪ್ರೊ.ಬಿ. ಕೃಷ್ಣಪ್ಪನವರು ಹಚ್ಚಿದ ಹೋರಾಟದ ಹಣತೆಯನ್ನು ಆರಲು ಬಿಡಬೇಡಿ: ಬಲ್ಕೀಶ್ ಬಾನು

ಪ್ರೊ.ಬಿ.ಕೃಷ್ಣಪ್ಪನವರ 87ನೇ ಜನ್ಮದಿನ ಮತ್ತು ರಾಜ್ಯಮಟ್ಟದ ದಸಂಸ ಪದಾಧಿಕಾರಿಗಳ ಸಮಾವೇಶ

kalpa News by kalpa News
June 9, 2025
in ಶಿವಮೊಗ್ಗ
0
ಜುಲೈ 11ರಂದು ವಿಪ ಸದಸ್ಯೆ ಬಲ್ಕೀಶ್ ಬಾನುರವರ ಕಾರ್ಯಾಲಯ ಉದ್ಘಾಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪ್ರೊ.ಬಿ.ಕೃಷ್ಣಪ್ಪನವರು ಹಚ್ಚಿದ ಹೋರಾಟದ ಹಣತೆಯನ್ನು ಆರಲು ಬಿಡಬೇಡಿ ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಹೇಳಿದರು.

ಅವರು ಇಂದು ದಲಿತ ಸಂಘರ್ಷ ರಾಜ್ಯ ಸಮಿತಿ (ಬಿ.ಕೃಷ್ಣಪ್ಪ ವಾದ) ಮತ್ತು ದಲಿತ ನೌಕರರ ಒಕ್ಕೂಟ ಇವರ ಸಂಯುಕ್ತಾಶ್ರಯದಲ್ಲಿ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಿದ್ದ ಪ್ರೊ.ಬಿ.ಕೃಷ್ಣಪ್ಪನವರ 87ನೇ ಜನ್ಮದಿನ ಮತ್ತು ರಾಜ್ಯಮಟ್ಟದ ದ.ಸಂ.ಸ. ಪದಾಧಿಕಾರಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಪ್ರೊ.ಕೃಷ್ಣಪ್ಪ ಅವರು ಅಂಬೇಡ್ಕರ್ ಆಲೋಚನೆಗಳನ್ನೇ ಮುಂದಿಟ್ಟುಕೊಂಡು ಶಿಕ್ಷಣ ಸಂಘಟನೆ ಹೋರಾಟದ ದಸಂಸ ಅನ್ನು ಕಟ್ಟಿದರು. ಆ ಮೂಲಕ ಸಮ ಸಮಾಜದ ಹೋರಾಟಗಳನ್ನು ನಡೆಸುತ್ತಾ ಬಂದರು. ಅವರು ನಾನು ಹೋರಾಟದ ಹಣತೆಯನ್ನು ಹಚ್ಚಿದ್ದೇನೆ. ಅದು ಆರದಂತೆ ನೋಡಿಕೊಳ್ಳಿ ಎಂದಿದ್ದರು. ಹಾಗಾಗಿ ದಲಿತ ಸಂಘರ್ಷ ಸಮಿತಿಗಳು ತಮ್ಮ ಹೋರಾಟಗಳನ್ನು ಮುಂದುವರಿಸಬೇಕು ಮತ್ತು ಗಟ್ಟಿ ನಿಲುವುಗಳನ್ನು ತೆಗೆದುಕೊಳ್ಳಬೇಕು. ಅವರು ಹಚ್ಚಿದ ಹಣತೆ ಆರದಂತೆ ಕಾಪಾಡಿಕೊಳ್ಳುವುದು ದಲಿತ ಸಂಘರ್ಷ ಸಮಿತಿಗಿರುವ ಮುಖ್ಯ ಗುರಿಯಾಗಿದೆ ಎಂದರು.

ಡಾ. ಅಂಬೇಡ್ಕರ್‍ರವರು ಈ ದೇಶದ ದಲಿತರ ಬೆಳಕಾಗಿದ್ದಾರೆ. ಅವರು ಕೊಟ್ಟ ಸಂವಿಧಾನ ಇಂದು ಎಲ್ಲಾ ಧರ್ಮಗಳಿಗೂ ಪವಿತ್ರ ಗ್ರಂಥವೇ ಆಗಿದೆ. ಅಂಬೇಡ್ಕರ್ ಓದು ಅನಿವಾರ್ಯವಾಗಿದೆ ದಲಿತ ಸಂಘರ್ಷ ಸಮಿತಿಯ ಹೋರಾಟಗಾರರು ಅಂಬೇಡ್ಕರ್‍ರವರ ಚಿಂತನೆ ಮತ್ತು ವಿಚಾರಗಳನ್ನು ಇಟ್ಟುಕೊಂಡು ಸಂಘಟನೆ ಮತ್ತು ಶಿಕ್ಷಣದ ಮೂಲಕ ತಮ್ಮ ಹೋರಾಟಗಳನ್ನು ವಿಸ್ತರಿಸಬೇಕು ಮತ್ತು ದಲಿತ ಪ್ರಜ್ಞೆಯನ್ನು ಬೆಳೆಸಬೇಕು ಎಂದು ಕರೆ ನೀಡಿದರು. ಮತ್ತು ಪ್ರೊ.ಬಿ. ಕೃಷ್ಣಪ್ಪ ಅವರು ತಮಗೆ ಗುರುಗಳಾಗಿದ್ದರು ಎಂದು ಹೆಮ್ಮೆಯಿಂದ ತಮ್ಮ ಕಾಲೇಜಿನ ನೆನಪುಗಳನ್ನು ಬಿಚ್ಚಿಟ್ಟರು.
ಪ್ರಾಸ್ತಾವಿಕ ಮಾತನಾಡಿದ ಕರ್ನಾಟಕ ದಲಿತ ನೌಕರರ ಒಕ್ಕೂಟದ ಅಧ್ಯಕ್ಷ ಬಿ.ಎಲ್. ರಾಜು ದಲಿತರು ಸ್ವಾತಂತ್ರ್ಯ ಪೂರ್ವದಿಂದಲೂ ಸ್ವಾತಂತ್ರ್ಯ ನಂತರವೂ ಭೂಮಿಗಾಗಿಯೇ ಹೋರಾಟ ನಡೆಸುತ್ತಾ ಬಂದಿದ್ದಾರೆ. ಪ್ರೊ.ಬಿ. ಕೃಷ್ಣಪ್ಪ ಅವರು ಕೂಡ ದಲಿತರಿಗೆ ಭೂಮಿ ಬೇಕು ಎಂಬ ಪ್ರಶ್ನೆಯನ್ನೇ ಮುಂದಿಟ್ಟುಕೊಂಡು ದಲಿತ ಸಂಘರ್ಷ ಸಮಿತಿಯನ್ನು ಕಟ್ಟಿದರು. ಆದರೆ ಇಂದೂ ಕೂಡ ದಲಿತರು ಅದೇ ಪ್ರಶ್ನೆಯನ್ನು ಇಟ್ಟುಕೊಂಡು ಹೋರಾಟ ಮಾಡಬೇಕಾದ ಅನಿವಾರ್ಯತೆ ಇರುವುದು ಅತ್ಯಂತ ದುರದೃಷ್ಟಕರ ಎಂದರು.

ಸ್ವಾತಂತ್ರ್ಯ ಸಿಕ್ಕು 75 ವರ್ಷಗಳ ನಂತರವೂ ದಲಿತರಿಗೆ ಭೂಮಿ ಬಂದಿದೆಯಾ ಎಂದು ಪ್ರಶ್ನೆ ಮಾಡಿದರೆ, ಇಲ್ಲ ಎಂಬ ಉತ್ತರ ತಕ್ಷಣವೇ ಸಿಗುತ್ತದೆ. ದಲಿತರು ಭೂಮಿ, ಅಧಿಕಾರ ಎಲ್ಲವನ್ನು ಕಳೆದುಕೊಂಡಿದ್ದಾರೆ. 1970ರಲ್ಲಿಯೇ ದಲಿತರಿಗೆ ಭೂಮಿ, ಅಧಿಕಾರ ಬೇಕು ಎಂದು ಹೋರಾಟ ಆರಂಭವಾದರೂ ಕೂಡ ಇಂದಿಗೂ ಭೂಮಿ ಸಿಕ್ಕಿಲ್ಲ. ಕೊನೇಪಕ್ಷದ ಬಗರ್ ಹುಕುಂ ಭೂಮಿಯೂ ಕೂಡ ಅವರಿಗೆ ದಕ್ಕಿಲ್ಲ. ಉಳುಮೆಗೂ ಭೂಮಿ ಇಲ್ಲ. ಊಳುವುದಕ್ಕೂ ಸ್ಮಶಾನವಿಲ್ಲ ಎಂದಾಗಿದೆ. ಹಾಗಾಗಿ ನಮ್ಮ ಪ್ರಮುಖ ಹೋರಾಟ ಭೂಮಿಯನ್ನು ಪಡೆಯುವುದೇ ಆಗಿದೆ. ಸರ್ಕಾರ ಭೂಮಿಯನ್ನು ಕೊಡುವುದೇ ಆದರೆ ಆದ್ಯತೆಯ ಮೇರೆಗೆ ಕೊಡಲಿ ಎಂದರು.
ಇದು ತಲ್ಲಣದ ಸಮಯವಾಗಿದೆ ಐಪಿಎಲ್ ಕಾಲ. ಹೋರಾಟ ಯಾರಿಗೂ ಬೇಕಾಗಿಲ್ಲ. ಹಿಂದೊಂದು ಕಾಲವಿತ್ತು ಆಗ ದಲಿತರೆಲ್ಲರೂ
ಲಕ್ಷಾಂತರ ಸಂಖ್ಯೆಯಲ್ಲಿ ಸೇರುತ್ತಿದ್ದರು. ಈಗ ಯುವ ಜನತೆ ದಿಕ್ಕುತಪ್ಪಿದೆ. ಹೋರಾಟಗಳು ದಿಕ್ಕು ತಪ್ಪುತ್ತಿವೆ. ದಲಿತ ನಾಯಕರೇ ಇಲ್ಲವಾಗಿದ್ದಾರೆ. ದಲಿತ ರಾಜಕಾರಣಿಗಳಿದ್ದಾರೆ. ಹೋರಾಟಗಾರರಿಲ್ಲ ಇಂತಹ ಸಂದರ್ಭದಲ್ಲಿ ಗುರುಮೂರ್ತಿಯಂತಹವರು ಸಮ ಸಮಾಜದ ನಿರ್ಮಾಣಕ್ಕಾಗಿ ಶೋಷಿತರ ಪರವಾಗಿ ಹಣತೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ದಸಂಸನ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ ಮಾತನಾಡಿ, ಪ್ರೊ.ಬಿ.ಕೃಷ್ಣಪ್ಪ ಅವರು ನಾಡಿನ ಉದ್ದಗಲಕ್ಕೂ ದಲಿತರಿಗೆ ಸಿಗಬೇಕಾದ ಭೂಮಿ, ವಸತಿ, ನಿವೇಶನ, ಸವಲತ್ತು, ಸಮಾನತೆ ಮತ್ತು ಸಾಮಾಜಿಕ ರಕ್ಷಣೆಗಾಗಿ ನೂರಾರು ಹೋರಾಟಗಳನ್ನು ಮಾಡಿಕೊಂಡು ಬಂದವರು. ದಲಿತರ ಮೇಲಿನ ದೌರ್ಜನ್ಯಗಳನ್ನು ಖಂಡಿಸಿದವರು. ಅವರ ತತ್ವಗಳನ್ನೇ ಇಟ್ಟುಕೊಂಡು ಅಂಬೇಡ್ಕರ್‍ರವರ ಮಾರ್ಗದರ್ಶನದ ವಿಚಾರಗಳೊಂದಿಗೆ ದಲಿತ ಸಂಘರ್ಷ ಸಮಿತಿ ಒಂದು ಪರಿವರ್ತನಾ ಚಳುವಳಿಯನ್ನಾಗಿ ರೂಪಿಸುತ್ತಾ ಬಂದಿದೆ ಎಂದರು.
ಶತಮಾನಗಳಿಂದಲೂ ಉಳ್ಳವರೇ ಬಡವರ ರಕ್ತವನ್ನು ಹೀರಿ ಭೂಮಿ, ಬಂಡವಾಳ, ಅಧಿಕಾರಗಳನ್ನು ಪಿತ್ರಾರ್ಜಿತ ಆಸ್ತಿಯಂತೆ ಶತಮಾನಗಳಿಂದಲೂ ಅನುಭವಿಸುತ್ತಾ ಬಂದಿದ್ದಾರೆ. ದಲಿತ ಸಮುದಾಯಗಳಲ್ಲಿ ಬಂಡಾಯದ ಕಿಚ್ಚನ್ನು ಹಚ್ಚಿಸಿ ಸಮ ಸಮಾಜದ ನಿರ್ಮಾಣ ನಮ್ಮ ಗುರಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ, ವಿಶ್ರಾಂತ ಪ್ರಾಧ್ಯಾಪಕ ಡಾ. ಸಣ್ಣರಾಮ, ರಾಜ್ಯ ಸಂಘಟನಾ ಸಂಚಾಲಕ ಹನುಮಂತಪ್ಪ ಕಾಕರಗಲ್, ದಲಿತ ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್, ದಸಂಸನ ಜಿಲ್ಲಾ ಸಂಚಾಲಕ ಎಂ. ಏಳುಕೋಟಿ, ಪ್ರಮುಖರಾದ ಎಸ್.ಪಿ. ಶೇಷಾದ್ರಿ, ಬಿ.ಎ. ಕಾಟ್ಕೆ, ಮುಂಡರಗಿ ನಾಗರಾಜ್, ಎಸ್.ಎನ್. ಬಳ್ಳಾರಿ, ಕಮಲಮ್ಮ, ಪಕ್ಕೀರಪ್ಪ ಮುಂಡಗೋಡು, ಡಾ. ಅವನಿಕ, ರಮೇಶ್ ಸೇರಿದಂತೆ ದಸಸಂನ ಜಿಲ್ಲಾ ಮತ್ತು ರಾಜ್ಯ ಸಂಚಾಲಕರು, ಪದಾಧಿಕಾರಿಗಳು ಸೇರಿದಂತೆ ಹಲವರಿದ್ದರು. ರಾಜ್ಯ ಕಾರ್ಯಕಾರಿ ಸಮಿತಿ ಅಧ್ಯಕ್ಷ ಶಿವಬಸಪ್ಪ ಸ್ವಾಗತಿಸಿದರು. ಎಂ. ಏಳುಕೋಟಿ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎನ್‌ಐಎ ತನಿಖೆಗೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸ್ವಾಗತ

Next Post

ಬೆಂಗಳೂರು | ಜೂನ್ 12ರಂದು “ದಾಸ ವರ್ಷಿಣಿ” ಗಾಯನ ಕಾರ್ಯಕ್ರಮ

kalpa News

kalpa News

Next Post
ಬೆಂಗಳೂರು | ಜೂನ್ 12ರಂದು “ದಾಸ ವರ್ಷಿಣಿ” ಗಾಯನ ಕಾರ್ಯಕ್ರಮ

ಬೆಂಗಳೂರು | ಜೂನ್ 12ರಂದು "ದಾಸ ವರ್ಷಿಣಿ" ಗಾಯನ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL