ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಪ್ರತಿಷ್ಠಿತ ದೇಶೀಯ ವಿದ್ಯಾಶಾಲೆಯ ಅಮೃತ ಮಹೋತ್ಸವ ಹಾಗೂ ಪದವಿ ಪೂರ್ವ (ಸ್ವ) ಕಾಲೇಜಿನ ಸುವರ್ಣ ಮಹೋತ್ಸವ ಜ.4ರಿಂದ ಮೂರು ದಿನಗಳ ಕಾಲ ನಡೆಯಲಿದ್ದು, ಮೈಸೂರು ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ Yaduveer Krishnadatta chamaraja Odeyar ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ಸಂಸ್ಥೆಯ ಉಪಾಧ್ಯಕ್ಷ ಎಸ್.ಪಿ. ದಿನೇಶ್ ತಿಳಿಸಿದ್ದಾರೆ.
ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಜ.4ರಿಂದ 6ರವರೆಗೂ ಮಹೋತ್ಸವ ನಡೆಯಲಿದ್ದು, ಜ.4ರಂದು ಬೆಳಗ್ಗೆ 11 ಗಂಟೆಗೆ ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸುವರ್ಣ ಮಹೋತ್ಸವವನ್ನು ಉದ್ಘಾಟಿಸಲಿದ್ದು, ಕಾಲೇಜಿನ ಅಧ್ಯಕ್ಷ ಕೆ.ಎನ್. ರುದ್ರಪ್ಪ ಕೊಳಲೆ ಹಾಗೂ ಕಾರ್ಯದರ್ಶಿ ಎಸ್. ರಾಜಶೇಖರ್ ಉಪಸ್ಥಿತರಿರಲಿದ್ದಾರೆ ಎಂದರು.

Also read: ಸಂಸದ ರಾಘವೇಂದ್ರ ಅವರ ಅಚ್ಚುಮೆಚ್ಚಿನ ಫೋಟೋಗ್ರಾಫರ್ ನೀರಲ್ಲಿ ಮುಳುಗಿ ಸಾವು
ಮೂರು ದಿನಗಳ ಕಾಲ ಸಂಜೆ ಡಿವಿಎಸ್ ಪಾಲಿಟೆಕ್ನಿಕ್ ಕಾಲೇಜ್ ನಲ್ಲಿ ಕರ್ನಾಟಕ ರತ್ನ ದಿ. ಪುನೀತ್ ರಾಜ್ ಕುಮಾರ್ ಅವರಿಗೆ ಗೌರವ ಸಮರ್ಪಣಾ ಕಾರ್ಯಕ್ರಮ ನಡೆಯಲಿದೆ ಎಂದರು.












Discussion about this post