Wednesday, September 3, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಮಾತೃಭಾಷೆಯಿಂದ ಪರಿಣಾಮಕಾರಿ ಕಲಿಕೆ ಸಾಧ್ಯ

ಎನ್.ಇ.ಎಸ್ ಅಮೃತಮಹೋತ್ಸವ ಉಪನ್ಯಾಸ ‌ಸರಣಿಯಲ್ಲಿ ವಿಟಿಯು ಉಪಕುಲಪತಿ ವಿದ್ಯಾಶಂಕರ್ ಅಭಿಪ್ರಾಯ

March 4, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ   |
ಇಂಗ್ಲೀಷ್ ಮೂಲಕ ತಾಂತ್ರಿಕ ಶಿಕ್ಷಣ ಸಾಧ್ಯ ಎಂಬ ತಪ್ಪು ಕಲ್ಪನೆ ಹೋಗಲಾಡಿಸಿ, ಪ್ರಾದೇಶಿಕ ಭಾಷೆಯಾದ ಕನ್ನಡದಲ್ಲಿ ತಾಂತ್ರಿಕ ಶಿಕ್ಷಣದ ಕಲಿಕೆಗೆ ವಿಟಿಯು ಹೆಚ್ಚು ಒತ್ತು ನೀಡುತ್ತಿದೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಉಪಕುಲಪತಿಗಳಾದ ಪ್ರೊ.ಎಸ್.ವಿದ್ಯಾಶಂಕರ್ ಹೇಳಿದರು.
ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತಮಹೋತ್ಸವದ ಪ್ರಯುಕ್ತ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಉಪನ್ಯಾಸ ಸರಣೆಯ ಹತ್ತನೇ ಆವೃತ್ತಿಯಲ್ಲಿ ‘ತಾಂತ್ರಿಕ ವಿದ್ಯಾಭ್ಯಾಸದ : ಕವಲುದಾರಿಯಲ್ಲಿ’ ಕುರಿತು ವಿಶೇಷ ಉಪನ್ಯಾಸ ನೀಡಿದರು.
ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಂಡ ನಂತರ ವಿಶ್ವವಿದ್ಯಾಲಯದಲ್ಲಿ ಅನೇಕ ಬದಲಾವಣೆಗಳನ್ನು ತಂದಿದ್ದೇವೆ. ಪ್ರಾದೇಶಿಕ ಭಾಷೆಗಳಿಂದ ಪರಿಣಾಮಕಾರಿ ಕಲಿಕೆ ಸಾಧ್ಯ ಎಂದು ಎನ್ಇಪಿ ಪ್ರತಿಪಾದಿಸಲಿದ್ದು, ಅಂತಹ ಪ್ರಾದೇಶಿಕ ಭಾಷಾ ಕಲಿಕಾ ವೇದಿಕೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲಾಗುತ್ತಿದೆ.
ವಿದ್ಯಾರ್ಥಿಗಳು ಸಂಸ್ಥೆಯ ಮುಖವಾಣಿ. ನಿರಂತರ ಕಲಿಕೆ ನಿಮ್ಮದಾಗಬೇಕು. ವಿದ್ಯಾರ್ಥಿಗಳನ್ನು ಬಲವಂತವಾಗಿ ಕಾರ್ಯಕ್ರಮಗಳಿಗೆ ಕೂರಿಸುವ ಅನಿವಾರ್ಯತೆಯಿದೆ‌. ಅಂತಹ ಸಂಕುಚಿತತೆಯಿಂದ ಹೊರಬನ್ನಿ. ಹೊಸತನವನ್ನು ಕಲಿಯುವ ಯಾವುದೇ ಅವಕಾಶಗಳನ್ನು ಬಳಸಿಕೊಳ್ಳಿ. ಆಧುನಿಕ ಕಾಲಘಟ್ಟದಲ್ಲಿ ಅನೇಕ ಅಧ್ಯಯನ ಸಂಪನ್ಮೂಲಗಳ ಅವಕಾಶ ಹೆಚ್ಚಿದೆ. ಗೂಗಲ್ ಸರ್ಚ್, ಎನ್.ಪಿ.ಟಿ.ಎಲ್ ನಂತಹ ವೇದಿಕೆಗಳು ಇಡೀ ಶಿಕ್ಷಣ ನೀತಿಯನ್ನು ಬದಲಾಯಿಸುತ್ತಿದೆ.
ಉದ್ಯೋಗ ನೀಡುವ ಸಂಸ್ಥೆಗಳು ಹಾಗೂ ವಿಟಿಯು ನಡುವೆ ಅನೇಕ ಒಡಂಬಡಿಕೆಗಳು ಆಗುತ್ತಿದೆ. ಪ್ರತಿ ವರ್ಷ ಪಠ್ಯಕ್ರಮಗಳು ಬದಲಾಗಲಿದೆ. ಇದರಿಂದ ಕೌಶಲ್ಯತೆಯ ಜೊತೆಗೆ ಇಂಡಸ್ಟ್ರಿಗಳ ಅವಶ್ಯಕತೆಗೆ ಅನುಗುಣವಾಗಿ ಕಲಿಕೆ ಮುಂದುವರಿಯಲಿದೆ. ಅದಕ್ಕಾಗಿಯೇ ಡಿಸೈನ್ ಥಿಂಕಿಂಗ್ ನಂತಹ ವಿಷಯಗಳನ್ನು ಪರಿಚಯಿಸಲಾಗಿದೆ.
ಅಮೃತಮಹೋತ್ಸವದ ಸಂಭ್ರಮದಲ್ಲಿರುವ ಎನ್ಇಎಸ್ ಸಂಸ್ಥೆ ಇಷ್ಟು ದೊಡ್ಡದಾಗಿ‌ ಬೆಳೆಯಲು ಕಾರಣರಾದ ನಿಸ್ವಾರ್ಥ ಸ್ವಾತಂತ್ರ್ಯ ಹೋರಾಟಗಾರರು ಸದಾ ಸ್ಮರಣೀಯ. ಅಂತಹ ವ್ಯಕ್ತಿತ್ವಗಳು ಯುವ ಸಮೂಹಕ್ಕೆ ಮಾದರಿ.
ಕಂಠಪಾಠದ ಪರೀಕ್ಷೆ ಇನ್ನಿಲ್ಲ
ಪರೀಕ್ಷೆಗಳ ಆಯೋಜನೆಯ ಸ್ವರೂಪವನ್ನು ವಿಶ್ವವಿದ್ಯಾಲಯ ಬದಲಾಯಿಸಲಿದೆ. ಫಾರ್ಮುಲಾ ಸಿಸ್ಟಮ್ ಪರಿಚಯಿಸುವ ಮೂಲಕ ಪರೀಕ್ಷಾ ಸಂದರ್ಭದಲ್ಲಿ ಪರೀಕ್ಷೆ ಬರೆಯಲು ಬೇಕಾದ‌ ಫಾರ್ಮುಲಾ ಸಿಸ್ಟಮ್ ಪ್ರತಿ ವಿದ್ಯಾರ್ಥಿಗಳಿಗೆ ನೀಡಲಾಗುವುದು. ಇದರಿಂದ ಕಂಠಪಾಠದ ಓದು, ಪರೀಕ್ಷಾ ನಕಲು ಮಾಡುವ ಪ್ರಯತ್ನಗಳು ವಿದ್ಯಾರ್ಥಿಗಳಿಂದ ದೂರಾಗಲಿದೆ.
ಎಂಬಿಎ ಎಂಸಿಎ ವಿಭಾಗಕ್ಕೆ ಭಾರಿ ಬೇಡಿಕೆ
ಸ್ನಾತ್ತಕೋತ್ತರ ಪದವಿಗೆ ಬೇಡಿಕೆಗಳು ಹೆಚ್ಚಾಗುತ್ತಿದೆ. ಎಂಬಿಎ ಎಂಸಿಎ ಕೋರ್ಸುಗಳು ವಿದ್ಯಾರ್ಥಿಗಳನ್ನು ಹೆಚ್ಚು ಸೆಳೆಯುತ್ತಿದೆ. ಸ್ನಾತ್ತಕೋತ್ತರ ಪದವಿ, ಸಂಶೋಧನೆಗಳ ಬಗೆಗೆ ವಿದ್ಯಾರ್ಥಿಗಳು ಹೆಚ್ಚು ಆಸಕ್ತಿ ತೋರಿಸುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.
Also read: ಮಾರ್ಚ್ 5ರಂದು ಭದ್ರಾವತಿ ನ್ಯೂಟೌನ್ ಠಾಣೆ ಆವರಣದಲ್ಲಿ ರಕ್ತದಾನ ಶಿಬಿರ: ನೀವೂ ಪಾಲ್ಗೊಳ್ಳಿ
ಬಿ.ಇ ಸೆಮಿಕಂಡಕ್ಟರ್ ಕೋರ್ಸ್ ಪ್ರಾರಂಭ
ಆಧುನಿಕ ತಾಂತ್ರಿಕ ಬದಲಾವಣೆಯಲ್ಲಿ ಸೆಮಿಕಂಡಕ್ಟರ್ ಪ್ರಮುಖ ಪಾತ್ರ ವಹಿಸಲಿದ್ದು, ಇದನ್ನು ಅರಿತು ವಿಶ್ವವಿದ್ಯಾಲಯ ಮುಂದಿನ ದಿನಗಳಲ್ಲಿ ಬಿ.ಇ ಸೆಮಿಕಂಡಕ್ಟರ್ ಕೋರ್ಸ್ ಪ್ರಾರಂಭಿಸಲಾಗುವುದು ಎಂದು ಹೇಳಿದರು.
ವಾಟ್ಸ್ ಆ್ಯಪ್ ನಲ್ಲಿ ಪರೀಕ್ಷಾ ಫಲಿತಾಂಶ
ಇನ್ನು ಮುಂದೆ ಪರೀಕ್ಷೆ ನಡೆದ ಕೆಲವೇ ದಿನಗಳಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತಿದ್ದು, ವಿದ್ಯಾರ್ಥಿಗಳ ವಾಟ್ಸ್ ಆ್ಯಪ್ ಸಂಖ್ಯೆಗೆ ನೇರವಾಗಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಿದರು.
ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿಗಳಾದ ಎಸ್.ಎನ್. ನಾಗರಾಜ ಮಾತನಾಡಿ, ತಾಂತ್ರಿಕ ಶಿಕ್ಷಣದಲ್ಲಿ ಅನೇಕ ಕವಲುದಾರಿಗಳಿವೆ. ಪದವಿ ಮುಗಿಸಿದ ವಿದ್ಯಾರ್ಥಿಗಳಲ್ಲಿ, ಉದ್ಯೋಗ ನೀಡುವ ಸಂಸ್ಥೆಗಳ ಅವಶ್ಯಕತೆಗೆ ತಕ್ಕಂತಹ ಕೌಶಲ್ಯತೆಯನ್ನು ಹೊಂದದೇ ಇರುವ ದೊಡ್ಡ ಕೊರತೆಯಿದೆ. ಜೊತೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತಾಂತ್ರಿಕ ಕಲಿಕೆಯಲ್ಲಿ ಎದುರಾಗುತ್ತಿರುವ ಕೊರತೆಗಳನ್ನು ಹೊಗಲಾಡಿಸಿ, ಸವಾಲಿನ ಕವಲುದಾರಿಯಲ್ಲಿ ಯಶಸ್ವಿಯಾಗುವ ಸಾಗುವ ಅವಶ್ಯಕತೆಗಳ ಕುರಿತು ಹೆಚ್ಚು ಚರ್ಚೆಗಳು ನಡೆಯಬೇಕಿದೆ ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ‌‌.ಎಸ್.ನಾರಾಯಣ ರಾವ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿಗಳಾದ ಡಾ.ಪಿ.ನಾರಾಯಣ್, ಖಜಾಂಚಿಗಳಾದ ಡಿ.ಜಿ.ರಮೇಶ್, ಪ್ರಾಂಶುಪಾಲರಾದ ಡಾ.ಕೆ.ನಾಗೇಂದ್ರ ಪ್ರಸಾದ್, ಶೈಕ್ಷಣಿಕ ಡೀನ್ ಡಾ‌.ಪಿ.ಮಂಜುನಾಥ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ವಿಟಿಯು ರ‍್ಯಾಂಕ್‌ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಮಾರ್ಚ್ 5ರಂದು ಭದ್ರಾವತಿ ನ್ಯೂಟೌನ್ ಠಾಣೆ ಆವರಣದಲ್ಲಿ ರಕ್ತದಾನ ಶಿಬಿರ: ನೀವೂ ಪಾಲ್ಗೊಳ್ಳಿ

Next Post

ಯುವಕರು ಮತದಾನದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪ್ರೇರೇಪಿಸಿ: ಡಿಸಿ ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಯುವಕರು ಮತದಾನದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪ್ರೇರೇಪಿಸಿ: ಡಿಸಿ ಸೂಚನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮುಂಜಾನೆ ಸುವಿಚಾರ | ಅಂತರಂಗ ಬಹಿರಂಗ ಎರಡರಲ್ಲೂ ಶುದ್ಧವಾಗಿರುವ ಮನುಷ್ಯ ಸಾತ್ವಿಕ

September 3, 2025

ಶಿವಮೊಗ್ಗ – ತಿರುನಲ್ವೇಲಿ ಸ್ಪೆಷಲ್ ಟ್ರೈನ್ | ಎಷ್ಟು ದಿನ? ಮಾರ್ಗ ಹೇಗೆ? ಎಲ್ಲೆಲ್ಲಿ ಸ್ಟಾಪ್?

September 2, 2025

ಬಿಜೆಪಿಯವರದ್ದು ಡೋಂಗಿ ರಾಜಕಾರಣ: ಸಚಿವ ಮಧುಬಂಗಾರಪ್ಪ ವಾಗ್ಧಾಳಿ

September 2, 2025
Image Courtesy: Internet

Festival Special Trains Between Tirunelveli – Shivamogga Town

September 2, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮುಂಜಾನೆ ಸುವಿಚಾರ | ಅಂತರಂಗ ಬಹಿರಂಗ ಎರಡರಲ್ಲೂ ಶುದ್ಧವಾಗಿರುವ ಮನುಷ್ಯ ಸಾತ್ವಿಕ

September 3, 2025

ಶಿವಮೊಗ್ಗ – ತಿರುನಲ್ವೇಲಿ ಸ್ಪೆಷಲ್ ಟ್ರೈನ್ | ಎಷ್ಟು ದಿನ? ಮಾರ್ಗ ಹೇಗೆ? ಎಲ್ಲೆಲ್ಲಿ ಸ್ಟಾಪ್?

September 2, 2025

ಬಿಜೆಪಿಯವರದ್ದು ಡೋಂಗಿ ರಾಜಕಾರಣ: ಸಚಿವ ಮಧುಬಂಗಾರಪ್ಪ ವಾಗ್ಧಾಳಿ

September 2, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!