ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯಾದ್ಯಂತ ಮುಂಗಾರು ಮಳೆ #Heavy rain ತೀವ್ರಗೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ಸಂಭವನೀಯ ಅಪಾಯಗಳನ್ನು ತಪ್ಪಿಸುವ ಸಲುವಾಗಿ ಹಲವು ಪ್ರದೇಶಗಳಿಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ.
ಈ ಕುರಿತಂತೆ ಈಗಾಗಲೇ ಹಲವು ಪ್ರದೇಶಗಳಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಸೂಚನಾ ಫಲಕಗಳನ್ನು ಅಳವಡಿಸಿ, ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ಯಾಕೆ ಪ್ರವೇಶ ನಿಷೇಧ?
ತೀವ್ರವಾದ ಮಳೆಯ ಅಬ್ಬರದಿಂದಾಗಿ ಜಿಲ್ಲೆಯ ನದಿ, ಹಳ್ಳಗಳು ತುಂಬಿ ಅಪಾಯದ ಮಟ್ಟವನ್ನು ತಲುಪಿ ಹರಿಯುತ್ತಿವೆ. ಇಂತಹ ಸಂದರ್ಭದಲ್ಲಿ ಅಪಾಯಕಾರಿ ಪ್ರದೇಶಗಳಿಗೆ ತೆರಳುವುದರಿಂದ ಅನಾಹುತಗಳು ಸಂಭವಿಸುವ ಸಾಧ್ಯತೆಗಳು ಹೆಚ್ಚಿರುತ್ತವೆ. ಹೀಗಾಗಿ, ಈ ಕ್ರಮ ಕೈಗೊಳ್ಳಲಾಗಿದೆ.
Also read: ಹಳಿ ಮೇಲೆ ಬಿದ್ದ ಮರ | ತಾಳಗುಪ್ಪ- ಬೆಂಗಳೂರು ಇಂಟರ್ಸಿಟಿ ರೈಲು ವಿಳಂಬ
ಎಲ್ಲೆಲ್ಲೆ ಪ್ರವೇಶ ನಿಷೇಧ?
ಜಿಲ್ಲೆಯಲ್ಲಿನ ಅಣೆಕಟ್ಟುಗಳು, ಜಲಪಾತಗಳು, ಹಿನ್ನೀರಿನ ಪ್ರದೇಶಗಳೂ ಸೇರಿದಂತೆ ನದಿ ನೀರಿಗೆ ಇಳಿಯುವುದು, ಈಜಾಡುವುದು ಮತ್ತು ಸೆಲ್ಫಿಗಳನ್ನು ತೆಗೆದುಕೊಳ್ಳುವುದನ್ನು ನಿಷೇಧಿಸಲಾಗಿದೆ. ಅಲ್ಲದೇ, ನೀರಿನ ಹರಿವು ಕಡಿಮೆಯಾಗುವವರೆಗೆ ಇಂತಹ ಅಪಾಯಕಾರಿ ಪ್ರವಾಸಿತಾಣಗಳಿಗೆ ಸಾರ್ವಜನಿಕರು ಭೇಟಿ ನೀಡುವುದನ್ನು ಸಂಬAಧಪಟ್ಟ ಇಲಾಖೆಗಳಿಂದ ನಿಷೇಧಿಸಲಾಗಿದೆ.
ನೀರಿನ ಹರಿವು ಕಡಿಮೆಯಾಗುವವರೆಗೆ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡದೇ ಸಹಕರಿಸಲು ಮತ್ತು ತುರ್ತು ಸಂದರ್ಭಗಳಲ್ಲಿ ಸಹಾಯಕ್ಕಾಗಿ 112 ಸಹಾಯವಾಣಿಗೆ ಕರೆ ಮಾಡಲು ಕೋರಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post