ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿರುವ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ K S Eshwarappa ಅವರು ನಿರಂತರವಗಿ ಮಿಂಚಿನ ಸಂಚಾರ ನಡೆಸಿ ಪ್ರಚಾರ ನಡೆಸುತ್ತಿದ್ದಾರೆ.
ತಮ್ಮ ಪ್ರಚಾರದ ಭಾಗವಾಗಿ ಇಂದು ಮುಂಜಾನೆಯೇ ಪುರಲೆ ಶ್ರೀ ಗಣಪತಿ ದೇವಾಲಯ ಹಾಗೂ ಕರುಮಾರಿಯಮ್ಮ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಎರಡೂ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದ ಅವರು, ಆನಂತರ ಬಡಾವಣೆಯಲ್ಲಿ ಮತದಾರರನ್ನು ಭೇಟಿಯಾಗಿ ಚರ್ಚೆ ನಡೆಸಿದರು.
Also read: ಚುನಾವಣೆಯಲ್ಲಿ ಯಾವ ಕಾರಣಕ್ಕಾಗಿ ತಮ್ಮ ಸ್ಪರ್ಧೆ? ಈಶ್ವರಪ್ಪ ಸ್ಪಷ್ಟನೆ
ಈ ವೇಳೆ ತಾವು 1989ರಲ್ಲಿ ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧೆ ಮಾಡಿದಾಗ ಇದೇ ಬೂತ್’ಗಳಲ್ಲಿ ಅತಿ ಹೆಚ್ಚು ಮತಗಳು ಬಂದಿದ್ದವು ಎಂಬುದನ್ನು ನೆನಪಿಸಿಕೊಂಡರು.
ನನ್ನ ಜೀವನದ ಮೊದಲ ಚುನಾವಣೆಯಲ್ಲಿ ಅತಿ ಹೆಚ್ಚು ಲೀಡ್ ತಂದುಕೊಟ್ಟ ಈ ಬಡಾವಣೆಯಲ್ಲಿಯೇ ಪ್ರಚಾರ ಆರಂಭಿಸಿದ್ದೇನೆ. ನನಗೆ ಆರ್ಶೀವಾದ ಮಾಡಿ ಎಂದು ವಿನಂತಿಸಿಕೊಂಡರು.
ಇದೇ ವೇಳೆ ಮಾರ್ಚ್ 26ರಂದು ಶುಭಮಂಗಳ ಸಮುದಾಯ ಭವನದಲ್ಲಿ ಸಭೆ ಕರೆದಿದ್ದು, ಹೆಚ್ಚು ಜನರು ಪಾಲ್ಗೊಳ್ಳುವಂತೆ ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post