ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಾಜಿ ಉಪಮುಖ್ಯಮಂತ್ರಿ ಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿರುವ ಹಿನ್ನೆಲೆ ನಗರದಲ್ಲಿ ಅವರ ಅಭಿಮಾನಿಗಳ ಆಕ್ರೋಶ ಭುಗಿಲೆದ್ದಿದ್ದು, ಟೈರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.
ನಿನ್ನೆಯವರೆಗೂ ಈಶ್ವರಪ್ಪನವರಿಗೆ ಟಿಕೆಟ್ ನಿಶ್ಚಿತ ಎಂದೇ ಹೇಳಲಾಗಿತ್ತು. ಆದರೆ, ಇಂದು ಏಕಾಏಕಿ ಸ್ವತಃ ಅವರೇ ರಾಜಕೀಯ ನಿವೃತ್ತಿ ಘೋಷಿಸಿರುವುದು ಜಿಲ್ಲೆಯ ಹಿರಿಯ ನಾಯಕರು ಹಾಗು ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದ್ದು, ನಿವೃತ್ತಿ ಘೋಷಣೆ ಸುದ್ಧಿ ಹೊರಬಿದ್ದ ನಂತರ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಈಶ್ವರಪ್ಪ ನವರ ನಿವಾಸಕ್ಕೆ ದೌಡಾಯಿಸಿದ್ದು, ತಮ್ಮ ಈ ನಿರ್ಧಾರವನ್ನು ಬದಲಾಯಿಸಿಕೊಳ್ಳಬೇಕೆಂದು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಬಿಜೆಪಿ ವರಿಷ್ಠರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕಾರ್ಯಕರ್ತರು ಟೈರಿಗೆ ಬೆಂಕಿ ಹಚ್ಚಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

ಕಾಂತೇಶ್ಗೆ ಟಿಕೆಟ್ ನೀಡಲು ಆಗ್ರಹ
ಈಶ್ವರಪ್ಪನವರ ರಾಜಕೀಯ ನಿವೃತ್ತಿ ಘೋಷಣೆ ವಿರುದ್ಧ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದ ಬೆನ್ನಲ್ಲೇ ಪುತ್ರ ಕೆ.ಈ. ಕಾಂತೇಶ್ ಅವರಿಗೆ ಶಿವಮೊಗ್ಗ ನಗರ ಕ್ಷೇತ್ರದಿಂದ ಟಿಕೆಟ್ ನೀಡಬೇಕೆಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ.











Discussion about this post