ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬಳ್ಳಾರಿ, ವಿಜಯನಗರ, ತಮಕೂರು ಹಾಗೂ ಚಿತ್ರದುರ್ಗ ಸೇರಿದಂತೆ ರಾಜ್ಯದ ಗಣಿ ಭಾದಿತ ಪರಿಸರ ಮತ್ತು ಜನ ಬದುಕಿನ ಪುನಶ್ಚೇತನಕ್ಕಾಗಿ ವಿಸ್ತೃತ ಜನಾಂದೋಲನಕ್ಕೆ ಕಾರ್ಯಕರ್ತರಲ್ಲಿ ನಾಯಕತ್ವ ಗುಣ ಬೆಳೆಸುವ ಉದ್ದೇಶದೊಂದಿಗೆ ತೀರ್ಥಹಳ್ಳಿ ತಾಲೂಕಿನ ಕುಪ್ಪಳ್ಳಿ ಕವಿಶೈಲದಲ್ಲಿ ಅ.4-5ರಂದು ಉಪನ್ಯಾಸ ಶಿಬಿರ ಆಯೋಜಿಸಲಾಗಿದೆ ಎಂದು ಸಮಾಜ ಪರಿವರ್ತನಾ ಟ್ರಸ್ಟ್ ಸ್ಥಾಪಕ ಅಧ್ಯಕ್ಷ ಎಸ್.ಆರ್. ಹಿರೇಮಠ್ ತಿಳಿಸಿದ್ದಾರೆ.
ಅವರು ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಗಣಿಭಾದಿತ ಪ್ರದೇಶದ ಜನರ ಸಶಕ್ತೀಕರಣಕ್ಕಾಗಿ ಮತ್ತು ಕೇಂದ್ರ ಸರ್ಕಾರ ಗಣಿಗಾರಿಕೆ ಅವಕಾಶ ನೀಡಬಾರದೆಂದು ಒತ್ತಾಯಿಸಿ ಆ.16ರಂದು ಬಳ್ಳಾರಿಯಲ್ಲಿ ಜನಾಂದೋಲನಗಳ ಮಹಾಮೈತ್ರಿ ಸಿಟಿಜೆನ್ಸ್ ಫಾರ್ ಡೆಮಾಕ್ರಸಿ ಹಾಗೂ ಕರ್ನಾಟಕದ ಇತ್ಯಾದಿ ಸಂಘಟನೆಗಳ ವತಿಯಿಂದ ಬೃಹತ್ ಸಮಾವೇಶ ನಡೆಸಲಾಯಿತು. ಈ ಸಮಾವೇಶ ಭಾಗವಾಗಿ ಸತ್ಯಾಗ್ರಹಕ್ಕಾಗಿ ಸಿದ್ಧತೆ, ಜನಾಂದೋಲನ ಸಶಕ್ತೀಕರಣಕ್ಕಾಗಿ ಮತ್ತು ಭವಿಷ್ಯದ ಪೀಳಿಗೆಯ ನಾಯಕತ್ವ ಬೆಳೆಸುವ ಉದ್ದೇಶದೊಂದಿಗೆ ಈ ಶಿಬಿರ ಆಯೋಜಿಸಲಾಗಿದೆ ಎಂದು ವಿವರಿಸಿದರು.

ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳ ಒಟ್ಟು ಕಬ್ಬಿಣ ಅದಿರಿನ ಉತ್ಪಾದನೆ ವರ್ಷಕ್ಕೆ 20 ಮಿಲಿಯನ್ ಮೆಟ್ರಿಕ್ ಟನ್ನು ಗಳನ್ನು ದಾಟಬಾರದು. ಈ ಕುರಿತು ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗಡೆ ಅವರು ವರದಿ ಹೇಳಿದಂತೆ ಸಮಾಜ ಪರಿವರ್ತನಾ ಸಮುದಾಯ ಸುಪ್ರೀಂ ಕೋರ್ಟ್ನಲ್ಲಿ ಕೇಳಿಕೊಂಡಂತೆ ವಾರ್ಷಿಕ ಉತ್ಪಾದನೆ 20 ಮಿಲಿಯನ್ ಮೆಟ್ರಿಕ್ ಟನ್ನುಗಳನ್ನು ಆಗಬೇಕೆನ್ನುವುದಕ್ಕೆ ಕೋರ್ಟ್ ಕೂಡ ಪುರಸ್ಕರಿಸಿರುವ ಹಿನ್ನೆಲೆಯಲ್ಲಿ ಸರ್ಕಾರಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಅವರು ಒತ್ತಾಯಿಸಿದರು.

ಎ.ಬಿ.ಸಿ. ಮಾದರಿಯಲ್ಲಿ ನೀಡಬೇಕಾಗಿದ್ದಲ್ಲಿ ಸರ್ಕಾರ ಅಮೂಲ್ಗಗೇಮೆಟೆಡ್ ಮಾದರಿಯಲ್ಲಿ ರೆಂಡಮ್ ಆಗಿ ಅನುಮತಿ ನೀಡಲಾಗಿದೆ. ಸಂಡೂರು ಅರಣ್ಯ ಪ್ರದೇಶದ ಸಾವಿರಾರು ಎಕರೆ ಭೂಮಿ ಈಗ ಗಣಿಗೆ ಬಲಿಯಾಗುವ ಆತಂಕವಿದೆ. ಇದರ ವಿರುದ್ಧ ಜನಾಂದೋಲನ ರೂಪಿಸುವ ಉದ್ದೇಶವಿದೆ ಅವರು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post