ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಈ ಬಾರಿ ಅತಿಹೆಚ್ಚು ಮತದಾನ ನಡೆಯಬೇಕು ಈ ಹಿನ್ನೆಲೆಯಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸ್ವೀಪ್ ಸಮಿತಿಯ ಅನುಪಮ ತಿಳಿಸಿದರು.
ಅವರು ಇಂದು ರಾಮಣ್ಣ ಶೆಟ್ಟಿ ಪಾರ್ಕ್ನಲ್ಲಿ ಮತದಾರರ ಜಾಗೃತಿಗಾಗಿ ಆಯೋಜಿಸಿದ್ದ ಸೈಕಲ್ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಈ ಬಾರಿ ಸಾರ್ವಜನಿಕರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸಲು ಅತಿಹೆಚ್ಚು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮತದಾನ ಹೆಚ್ಚಾಗುವ ನಿರೀಕ್ಷೆ ಕೂಡ ಇದೆ ಎಂದರು.
ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಸ್ವೀಪ್ ಸಮಿತಿಯ ಸಂಯುಕ್ತಾಶ್ರಯದಲ್ಲಿ ನಡೆದ ಈ ಸೈಕಲ್ ಜಾಥಾ ರಾಮಣ್ಣ ಶೆಟ್ಟಿ ಪಾರ್ಕ್ನಿಂದ ಆರಂಭವಾಗಿ, ಕೋಟೆ ರಸ್ತೆ, ಬೆಕ್ಕಿನ ಕಲ್ಮಠ, ಶಿವಪ್ಪನಾಯಕ ಸರ್ಕಲ್, ಗೋಪಿವೃತ್ತದ ಮೂಲಕ ಸಾಗಿ ಅಂಬೇಡ್ಕರ್ ಭವನ ತಲುಪಿತು.
ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತ ಮಾಯಣ್ಣ ಗೌಡ, ಪ್ರಮುಖರಾದ ಗೀತಾ, ರೇಣುಕ, ಲೋಕೇಶ್, ಚಿರಂಜೀವಿ ಬಾಬು,
ವಿಜಯಕುಮಾರ್, ಶೇಖರ್ ಗೌಳೇರ್, ಸೈಕಲ್ ಕ್ಲಬ್ ಅಧ್ಯಕ್ಷರು, ಕಾರ್ಯದರ್ಶಿಗಳು ಸದಸ್ಯರು ಸೇರಿದಂತೆ ಹಲವರಿದ್ದರು.
Also read: ಮನೆಯಲ್ಲೇ ಕುಳಿತು ಕಳೆದು ಹೋದ ಮೊಬೈಲ್ ಪತ್ತೆ ಹಚ್ಚಬಹುದು ಹೇಗೆ ಗೊತ್ತಾ?
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post