ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹರ್ಷ ಹತ್ಯೆ ಪ್ರಕರಣದ ನಂತರ ನಗರದಲ್ಲಿ ವಾತಾವರಣ ಬೂದಿ ಮುಚ್ಚಿದ ಕೆಂಡದಂತೆ ಇರುವ ಕಾರಣ, ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆಯನ್ನು ಫೆ.26ರವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ #Shivamogga DC Selvamani ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಶಿವಮೊಗ್ಗ ನಗರ ವ್ಯಾಪ್ತಿಯೊಳಗೆ ಸಿಆರ್ ಪಿಸಿ ಕಲಂ 144 ರನ್ವಯ ಪ್ರತಿಬಂಧಕಾಜ್ಞೆಯನ್ನು ಫೆ.26ರ ಬೆಳಿಗ್ಗೆ 9 ಗಂಟೆಯವರೆಗೆ ಜಾರಿಗೊಳಿಸಿರೋದಾಗಿ ತಿಳಿಸಿದ್ದಾರೆ.
Also read: ಶಿವಮೊಗ್ಗ ಗಲಭೆಯಲ್ಲಿ ಗಾಯಗೊಂಡ ಪತ್ರಿಕಾ ಛಾಯಾಗ್ರಾಹಕ ನಿಂಗನಗೌಡ ಆರೋಗ್ಯ ವಿಚಾರಿಸಿದ ಎಸ್. ದತ್ತಾತ್ರಿ
ನಿಷೇಧಾಜ್ಞೆಯ ಸಂದರ್ಭದಲ್ಲಿ ಐದಕ್ಕಿಂತ ಹೆಚ್ಚು ಜನರ ಗುಂಪು ಸೇರುವಂತಿಲ್ಲ. ಯಾವುದೇ ಮೆರವಣಿಗೆ ಸಭೆ, ಸಮಾರಂಭಗಳು, ವಿಜಯೋತ್ಸವ, ಸಾರ್ವಜನಿಕ ಪ್ರತಿಭಟನಾ ಮೆರವಣಿಗೆ, ಜಾಥಾ, ಧರಣಿ, ಮುಷ್ಕರ, ರಸ್ತೆ ರೋಕೋ ನಡೆಸುವಂತಿಲ್ಲ ಎಂದಿದ್ದಾರೆ.
ಅಲ್ಲದೇ ಎಲ್ಲಾ ವ್ಯಾಪಾರದ ಅಂಗಡಿ, ಮುಂಗಟ್ಟುಗಳನ್ನುಮುಚ್ಚುವುದು. ಹಾಲು, ದಿನಸಿ ಮತ್ತು ತರಕಾರಿ ಖರೀದಿಗೆ ಬೆಳಿಗ್ಗೆ 6 ರಿಂದ 8 ಗಂಟೆಯವರೆಗೆ ಮಾತ್ರ ಅನುಮತಿ ಎಂದು ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post