ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಾಂಸ್ಕೃತಿಕ ರಾಷ್ಟ್ರದಲ್ಲಿ ಬಾಳುತ್ತಿರುವ ನಮ್ಮಲ್ಲಿ ಸೃಜನಶೀಲತೆ ಎಂಬುದು ಸದಾ ಪ್ರಕಾಶಿಸುತ್ತಿರಲಿ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು.
ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಾಂಸ್ಕೃತಿಕ ಮತ್ತು ನಿರ್ವಹಣಾ ಘಟಕಗಳ ವತಿಯಿಂದ ಶುಕ್ರವಾರ ವಿವಿಧ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ರಾಜ್ಯಮಟ್ಟದ ಅಂತರ ಕಾಲೇಜು ಸ್ಪರ್ಧೆ ‘ಕೌಶಲ್ಯ-2024’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

Also read: ಬೆಂಗಳೂರು | ಲೋಕ ಕಲ್ಯಾಣಕ್ಕಾಗಿ ಗುರು ರಾಯರ ಸನ್ನಿಧಿಯಲ್ಲಿ ಲಕ್ಷ ದೀಪೋತ್ಸವ
ವಿಧಾನಪರಿಷತ್ತಿನ ಸದಸ್ಯ ಡಿ.ಎಸ್.ಅರುಣ್ ಮಾತನಾಡಿ, ಇಂದಿನ ದಿನಮಾನದಲ್ಲಿ ಶಿಕ್ಷಣದ ಜೊತೆಗೆ ಸೃಜನಶೀಲತೆ ಬೆಳೆಸುವ ಅನೇಕ ವೇದಿಕೆಗಳು ನಿರ್ಮಾಣಗೊಳ್ಳುತ್ತಿರುವುದು ಸಂತೋಷದ ಸಂಗತಿ. ಅಂದಿನ ದಿನಮಾನ ಸಾಂಸ್ಕೃತಿಕ ಚಟುವಟಿಕೆ ಎಂಬುದು ಸೀಮಿತತೆಯ ಒಳಗೆ ಇತ್ತು. ಅದರೆ ಇಂದಿನ ಶಿಕ್ಷಣ ವ್ಯವಸ್ಥೆ ಮಕ್ಕಳ ಆಸಕ್ತ ವಿಷಯಗಳನ್ನು ಅಧ್ಯಯನ ಮಾಡುವಂತಹ ಹಾಗೂ ಹೆಚ್ಚು ತೊಡಗಿಸಿಕೊಳ್ಳವ ಅನೇಕ ಅವಕಾಶಗಳನ್ನು ಮಾಡಿಕೊಡುತ್ತಿದೆ.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ನಿರ್ದೇಶಕ ಟಿ.ಆರ್.ಅಶ್ವಥ ನಾರಾಯಣ ಶ್ರೇಷ್ಟಿ ಮಾತನಾಡಿದರು. ಪ್ರಾಂಶುಪಾಲರಾದ ಡಾ.ಬಿ.ಎಸ್.ಶಿವಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯದ ವಿವಿಧ ಜಿಲ್ಲೆಗಳಿಂದ 24 ಕ್ಕು ಹೆಚ್ಚು ತಂಡಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಬೆಸ್ಟ್ ಸಿಇಓ, ಮೊಬೈಲ್ ಫೋಟೋಗ್ರಫಿ, ಸಾಮಾನ್ಯ ಜ್ಞಾನ, ಸಂಯೋಜಿತ ಆಟಗಳು, ಹಾಡು ಮತ್ತು ನೃತ್ಯ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಉತ್ಸುಕರಾಗಿ ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
 
	    	

 Loading ...
 Loading ... 
							



 
                
Discussion about this post