No Result
View All Result
Yogada Satsang Society brings out Kannada version on Kriya Yoga today
English Articles

Yogada Satsang Society brings out Kannada version on Kriya Yoga today

by ಕಲ್ಪ ನ್ಯೂಸ್
March 25, 2026
0

Kalpa Media House  |  Dharwad  | Yogada Satsang Society of India has brought out the Kannada version of Kriya Yoga...

Read moreDetails
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
  • Advertise With Us
  • Grievances
  • About Us
  • Contact Us
Thursday, March 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ: ನಿದಿಗೆ ಬೋಟಿಂಗ್ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ

ಷರತ್ತು ಉಲ್ಲಂಘಿಸಿ ಕೆರೆಯ ನಡುವೆ ಅವೈಜ್ಞಾನಿಕ ಏರಿ ನಿರ್ಮಾಣ? ಜಮೀನು, ತೋಟ, ರಾಷ್ಟ್ರೀಯ ಹೆದ್ದಾರಿಗೂ ಧಕ್ಕೆಯ ಆತಂಕ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 11, 2020
in ಶಿವಮೊಗ್ಗ, ಭದ್ರಾವತಿ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ನಿದಿಗೆ ಕೆರೆಯಲ್ಲಿ ದೋಣಿ ವಿಹಾರ ನಡೆಸುತ್ತಿರುವ ಚುಂಚಾದ್ರಿ ಮೀನು ಅಭಿವೃದ್ಧಿ ಮತ್ತು ಜಲಕ್ರೀಡೆ ಸಂಸ್ಥೆ, ಸರ್ಕಾರದ ಆದೇಶ ಹಾಗೂ ನಿಯಮಾವಳಿಗಳನ್ನು ಉಲ್ಲಂಘಿಸಿದ್ದು, ತನ್ನ ಖಾಸಗೀ ಸ್ವತ್ತಂತೆ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಿರುವುದು ಅಕ್ಕಪಕ್ಕದ ಜಮೀನು ಹಾಗೂ ತೋಟಗಳಿಗೆ ಮಾರಕವಾಗಿ ಪರಿಣಮಿಸಿದೆ ಎಂದು ಸ್ಥಳೀಯ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಮಿಲ್ಟ್ರಿಕ್ಯಾಂಪ್ ಕರ್ನಾಟಕ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರ ಕಚೇರಿ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿ ಕಿಡಿ ಕಾರಿದ ರೈತರು, ಭದ್ರಾ ಜಲಾಶಯ ಅಚ್ಚುಕಟ್ಟು ವ್ಯಾಪ್ತಿಯಲ್ಲಿರುವ ನಿದಿಗೆ ಕೆರೆಯಲ್ಲಿ ಚುಂಚಾದ್ರಿ ಸಂಸ್ಥೆಯವರು ಸರಕಾರದೊಂದಿಗೆ ಮಾಡಿಕೊಂಡಿರುವ ಕರಾರನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಕೆರೆಯಲ್ಲಿನ ಹೂಳು ತೆಗೆದು ರಸ್ತೆ ಇಲ್ಲದಂತೆ ಅಕ್ರಮವೆಸಗಿ ಜಮೀನುಗಳ ಕಡೆ ಸುಮಾರು 15 ಅಡಿ ಎತ್ತರದ ರಸ್ತೆ ನಿರ್ಮಿಸಿದ್ದಾರೆ. ಇದರಿಂದಾಗಿ ಜಮೀನುಗಳಿಂದ ನೀರು ಕೆರೆಗೆ ಸರಾಗವಾಗಿ ಹರಿದು ಹೋಗದೇ ತೋಟ, ಬತ್ತದ ಫಸಲು ನಾಶವಾಗುತ್ತಿದೆ. ಹೂಳಿನ ಏರಿಗಳನ್ನು ತೆಗೆಯುವಂತೆ ಕಾರ್ಯಪಾಲಕ ಅಭಿಯಂತರರು ಸೂಚಿಸಿದ್ದರೂ ಚುಂಚಾದ್ರಿ ಸಂಸ್ಥೆ ನಿರ್ಲಕ್ಷಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆರೆಯ ಅಂಗಳದಲ್ಲಿ ಪೂರ್ವದಿಂದ ಪಶ್ಚಿಮಾಭಿಮುಖವಾಗಿ ನಡು ನೀರಿನಲ್ಲಿ ರಸ್ತೆ ನಿರ್ಮಿಸಲಾಗಿದ್ದು, ಇದರಿಂದ ಸುತ್ತಮುತ್ತಲಿನ ಜಮೀನುಗಳಿಗಿಂತಲೂ ಎತ್ತರ ಇರುವ ಕಾರಣ ಜಮೀನು ನೀರು ಹರಿದು ಹೋಗದೇ ಮುಳುಗಡೆಯಾಗುತ್ತಿದೆ. ಇನ್ನು, ದೋಣಿ ವಿಹಾರದ ಸಲಕರಣೆಗಳನ್ನು ಓಡಿಸಲು ಜಿಲ್ಲಾ ಪಂಚಾಯತ್ ಅಥವಾ ಸಕ್ಷಮ ಪ್ರಾಧಿಕಾರದಿಂದ ಪರವಾನಗಿ ಪಡೆದು ಸಲ್ಲಿಸಿಲ್ಲ ಎಂದು ಆರೋಪಿಸಿದ್ದಾರೆ.

ರೈತರ ಬೇಡಿಕೆಗಳೇನು?

  • ನಮ್ಮ ಜಮೀನುಗಳ ಪಕ್ಕದಲ್ಲಿ ಹಾಕಲಾಗಿರುವ ಹೂಳನ್ನು ತೆರವುಗೊಳಿಸಬೇಕು, ಸರಕಾರಿ ಆದೇಶದ ಷರತ್ತುಗಳನ್ನು ಉಲ್ಲಂಘಿಸಿ ಅನುಮೋದಿಸಿರುವ ನಕ್ಷೆಯನ್ನು ರದ್ದುಗೊಳಿಸಬೇಕು
  • ಕೆರೆಯ ಅಂಗಳದಲ್ಲಿ ನಿರ್ಮಿಸಿರುವ ಕಟ್ಟಡ ತೆರವುಗೊಳಿಸಿ, ದೋಣಿ ವಿಹಾರ ನಿಲ್ಲಿಸಬೇಕು
  • ಕೆರೆಯಲ್ಲಿ ಮೀನು ಸಾಕಾಣಿಕೆ ಮಾಡುವ ಕುರಿತು ಸಂಬಂಧಿತ ಪ್ರಾಧಿಕಾರದಿಂದ ಮಂಜೂರಾತಿ/ಅನುಮತಿ ಪಡೆಯುವುದು, ಸಾರ್ವಜನಿಕರಿಗೆ ಹಾಗೂ ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದು, ಎಂಬಿತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ ಪ್ರತಿಭಟನಾಕಾರರು ಈ ಹಿಂದಿನ ಕಾರ್ಯಪಾಲಕ ಅಭಿಯಂತರರಿಗೆ ನೀಡಿದ ಮನವಿಗೆ ಸ್ಪಂದಿಸಿ ಚುಂಚಾದ್ರಿ ಸಂಸ್ಥೆಗೆ ದಿನಾಂಕ 23-11-2018 ರಲ್ಲಿ ಪತ್ರ ಬರೆದು ಕರಾರಿನ ಷರತ್ತುಗಳಂತೆ ಕೂಡಲೇ ಕೆರೆಯ ಅಂಗಳದಲ್ಲಿ ಹಾಕಿರುವ ಹೂಳಿನ ಏರಿಗಳನ್ನು ತೆಗೆಯಲು ಸೂಚಿಸಿದ್ದರು ಸಹ ಚುಂಚಾದ್ರಿ ಸಂಸ್ಥೆಯವರು ಕಾನೂನನ್ನು ಉಲ್ಲಂಘಿಸಿರುವುದಲ್ಲದೆ ಪತ್ರಕ್ಕೆ ಯಾವುದೇ ಮಾನ್ಯತೆ ನೀಡಿರುವುದಿಲ್ಲ ಎಂದು ಕಿಡಿಕಾರಿದರು.

ರಾಷ್ಟ್ರೀಯ ಹೆದ್ದಾರಿ 206ಕ್ಕೂ ಧಕ್ಕೆ!?
ಕೆರೆಯ ಪೂರ್ವ ಪಶ್ಚಿಮವಾಗಿ ಯಾವುದೇ ಕೋಡಿ ಹಾಗೂ ವೈಜ್ಞಾನಿಕವಲ್ಲದ ಏರಿ ನಿರ್ಮಿಸಲಾಗಿದೆ. ಇದು ದಕ್ಷಿಣ ಭಾಗದಲ್ಲಿ ಮತ್ತೊಂದು ಕೆರೆಯಾಗಿ ಮಾರ್ಪಟ್ಟು ಮಳೆಗಾಲದಲ್ಲಿ ಹಾಲಿ ಕೆರೆಗಿಂತಲೂ ಹೆಚ್ಚಿನ ಮಟ್ಟಕ್ಕೆ ಏರುತ್ತದೆ. ಒಂದು ವೇಳೆ ಕೆರೆ ತುಂಬಿದಾಗ ಏರಿ ಒಡೆದಲ್ಲಿ ಸುತ್ತಮುತ್ತಲಿನ ಜಮೀನು ಹಾಗೂ ತೋಟಗಳಿಗೆ ಮಾತ್ರವಲ್ಲ ಅಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 206ಕ್ಕೂ ಸಹ ಧಕ್ಕೆಯಾಗುವುದು ನಿಶ್ಚಿತ. ಕರಾರಿನ ಷರತ್ತುಗಳನ್ನು ಪರಿಗಣಿಸಿದೇ, ವೈಜ್ಞಾನಿಕವಾಗಿ ಯಾವುದೇ ಪರಿಶೀಲನೆ ನಡೆಸದೇ ಕೆರೆಯ ಅಂಗಳವನ್ನು ಖಾಸಗೀ ಸ್ವತ್ತು ಎಂಬಂತೆ ಕಾರ್ಯಪಾಲಕ ಅಭಿಯಂತರರು ನಕ್ಷೆಗೆ ಅನುಮೋದನೆ ನೀಡಿರುವುದು ಅನ್ಯಾಯ ಹಾಗೂ ಕಾನೂನಿನ ಉಲ್ಲಂಘನೆ ಎಂದು ಸ್ಥಳೀಯ ನೊಂದ ರೈತ ಗಿರಿಯಪ್ಪ ಪತ್ರಿಕೆಯೊಂದಿಗೆ ಮಾತನಾಡಿ ಅಳಲು ತೋಡಿಕೊಂಡರು.
-ನೊಂದ ರೈತರು

ನಿದಿಗೆ ದೊಡ್ಡಕೆರೆ ಉಳಿಸಿ ಹೋರಾಟ ಸಮಿತಿಯ ಮುಖಂಡರಾದ ಮಲ್ಲೇಶಪ್ಪ, ಕೆಂಚಪ್ಪ, ಸತ್ಯನಾರಾಯಣ, ಅಂದಾನಪ್ಪ, ಚಂದ್ರಪ್ಪ, ಮಣಿ, ಕೃಷ್ಣಮೂರ್ತಿ ಸೇರಿದಂತೆ ನೂರಾರು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Get in Touch With Us info@kalpa.news Whatsapp: 9481252093

Tags: BhadravathiBoatingChunchadri Fish Development and Water Sportsfarmers-protestKannada News WebsiteMalnad NewsNH 206Nidige LakeShivamoggaಕೆರೆಚುಂಚಾದ್ರಿ ಮೀನು ಅಭಿವೃದ್ಧಿ ಮತ್ತು ಜಲಕ್ರೀಡೆ ಸಂಸ್ಥೆದೋಣಿ ವಿಹಾರನಿದಿಗೆ ಕೆರೆಭದ್ರಾವತಿಶಿವಮೊಗ್ಗ
Share196Tweet123Send
Previous Post

ಭದ್ರಾವತಿ ಲಕ್ಷ್ಮೀ ನರಸಿಂಹ ದೇಗುಲ ಅಭಿವೃದ್ಧಿಗೆ ಸಂಸದರಿಂದ ಬರೋಬ್ಬರಿ 3.5 ಕೋಟಿ ರೂ. ಅನುದಾನ

Next Post

ನಿಗದಿತ ಅವಧಿಯಲ್ಲಿ ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಳಿಸಿ: ಡಿಸಿ ಶಿವಕುಮಾರ್ ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಿಗದಿತ ಅವಧಿಯಲ್ಲಿ ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಳಿಸಿ: ಡಿಸಿ ಶಿವಕುಮಾರ್ ಸೂಚನೆ

ನಿಗದಿತ ಅವಧಿಯಲ್ಲಿ ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಳಿಸಿ: ಡಿಸಿ ಶಿವಕುಮಾರ್ ಸೂಚನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಬಸ್ ಟೈರ್ ಹರಿದು ವಿದ್ಯಾರ್ಥಿನಿ ಕಾಲು ಮುರಿತ

ಬಸ್ ಟೈರ್ ಹರಿದು ವಿದ್ಯಾರ್ಥಿನಿ ಕಾಲು ಮುರಿತ

March 26, 2026
ತರಗತಿಯಲ್ಲೇ ವಿದ್ಯಾರ್ಥಿನಿಗೆ ಪ್ರೊಫೆಸರ್ ಅಬ್ದುಲ್ಲ ಪ್ರಪೋಸ್ | ವಿದ್ಯಾರ್ಥಿಗಳಿಂದ ಹಿಗ್ಗಾಮುಗ್ಗಾ ಥಳಿತ

ತರಗತಿಯಲ್ಲೇ ವಿದ್ಯಾರ್ಥಿನಿಗೆ ಪ್ರೊಫೆಸರ್ ಅಬ್ದುಲ್ಲ ಪ್ರಪೋಸ್ | ವಿದ್ಯಾರ್ಥಿಗಳಿಂದ ಹಿಗ್ಗಾಮುಗ್ಗಾ ಥಳಿತ

March 26, 2026
ಭೀಕರ ರಸ್ತೆ ಅಪಘಾತ | ಹೊತ್ತಿ ಉರಿದ ಬಸ್ | ಸಜೀವ ದಹನಗೊಂಡ 13 ಪ್ರಯಾಣಿಕರು

ಭೀಕರ ರಸ್ತೆ ಅಪಘಾತ | ಹೊತ್ತಿ ಉರಿದ ಬಸ್ | ಸಜೀವ ದಹನಗೊಂಡ 13 ಪ್ರಯಾಣಿಕರು

March 26, 2026
ಏಕಾತ್ಮ ಮಾನವ್ ದರ್ಶನ ಕಾರ್ಯಕ್ರಮಕ್ಕೆ ಅಡ್ಡಿ ಯತ್ನ: ಕಾಂಗ್ರೆಸ್ ವಿರುದ್ಧ ಡಾ. ಸುಶ್ರುತ ಗೌಡ ಟೀಕೆ

ಏಕಾತ್ಮ ಮಾನವ್ ದರ್ಶನ ಕಾರ್ಯಕ್ರಮಕ್ಕೆ ಅಡ್ಡಿ ಯತ್ನ: ಕಾಂಗ್ರೆಸ್ ವಿರುದ್ಧ ಡಾ. ಸುಶ್ರುತ ಗೌಡ ಟೀಕೆ

March 26, 2026
ಆಧ್ಯಾತ್ಮಿಕ ಚಿಂತನೆಗಳ ಸಮಗ್ರ ಅನುಷ್ಠಾನ ತಿಳುವಳಿಕೆಗೆ ಮಾದರಿ: ಸುರೇಶ್ ಋಗ್ವೇದಿ

ಆಧ್ಯಾತ್ಮಿಕ ಚಿಂತನೆಗಳ ಸಮಗ್ರ ಅನುಷ್ಠಾನ ತಿಳುವಳಿಕೆಗೆ ಮಾದರಿ: ಸುರೇಶ್ ಋಗ್ವೇದಿ

March 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL