ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಫೆ.15 ಮತ್ತು 16ರಂದು ಕಲಾವಿದ ಮಹಾಲಿಂಗಪ್ಪ ಎ. ಇವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನವನ್ನು ಬಿ.ಹೆಚ್.ರಸ್ತೆಯ ಕರ್ನಾಟಕ ಸಂಘದಲ್ಲಿ ಬೆಳಿಗ್ಗೆ 10ರಿಂದ ಸಂಜೆ 8ರವರೆಗೆ ಹಮ್ಮಿಕೊಳ್ಳಲಾಗಿದೆ.
ಫೆ.15ರ ಬುಧವಾರ ಸಂಜೆ ಕುವೆಂಪು ವಿವಿ ಕುಲಪತಿಗಳಾದ ಡಾ. ಬಿ.ಪಿ. ವೀರಭದ್ರಪ್ಪನವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ಮಾದ್ಯಮ ಅಕಾಡೆಮಿ ಸದಸ್ಯರು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್ ಯಡಗೆರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ದಾವಣಗೆರೆ ಸಹಾಯಕ ನಿರ್ದೇಶಕ ರವಿಚಂದ್ರ ಹಾಗೂ ಶಿವಮೊಗ್ಗದ ಉಮೇಶ್ ಹೆಚ್. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕರ್ನಾಟಕ ಸಂಘದ ಅಧ್ಯಕ್ಷ ಎಸ್. ಸುಂದರ್ರಾಜ್ ಅವರು ಅಧ್ಯಕ್ಷತೆ ವಹಿಸಲಿದ್ದು, ಉದ್ಘಾಟನಾ ಸಮಾರಂಭದ ಪೂರ್ವದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸ್ಥಳದಲ್ಲಿಯೇ ಚಿತ್ರರಚನಾ ಸ್ಪರ್ಧೆಗಳನ್ನು ಸಹ ಶಿವಮೊಗ್ಗ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಸಹಯೋಗದಲ್ಲಿ ಬೆಳಿಗ್ಗೆ 9.30ರಿಂದ 11ರವರೆಗೆ ಕರ್ನಾಟಕ ಸಂಘದ ಆವರಣದಲ್ಲಿಯೇ ಏರ್ಪಡಿಸಲಾಗಿರುತ್ತದೆ.
Also read: ಪುಲ್ವಾಮಾ ದಾಳಿಯ ನಿಖರ ಸತ್ಯವನ್ನು ದೇಶದ ಜನತೆಗೆ ತಿಳಿಸಿ: ಯುವ ಕಾಂಗ್ರೆಸ್ ಆಗ್ರಹ
ಉದ್ಘಾಟನಾ ಸಮಾರಂಭದ ಕೊನೆಯಲ್ಲಿ ಮಕ್ಕಳಿಗೆ ಬಹುಮಾನ ವಿತರಣೆಯಿದ್ದು, ದಾವಣಗೆರೆಯ ಹಿರಿಯ ಕಲಾವಿದರಾದ ಮಹಾಲಿಂಗಪ್ಪನವರ 30ಕ್ಕೂ ಹೆಚ್ಚು ಕಲಾಕೃತಿಗಳು ಪ್ರದರ್ಶನಗೊಳ್ಳಲಿದೆ. ಸಾರ್ವಜನಿಕರು, ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ದೀಪು ಮತ್ತು ಪದಾಧಿಕಾರಿಗಳು ವಿನಂತಿಸಿದ್ದಾರೆ. ಕಲಾಕೃತಿಗಳನ್ನು ಆಸಕ್ತರು ಖರೀದಿಸಬಹುದಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post