ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ನಗರದ ಫ್ರೀಡಂ ಪಾರ್ಕ್ನಲ್ಲಿ ಫೆ.28ರಂದು ಬಿ.ಎಸ್. ಯಡಿಯೂರಪ್ಪನವರ ನಮ್ಮೊಲುಮೆ ಅಭಿಮಾನದ ಅಭಿನಂದನೆಯ ಭಾವಾಭಿನಂದನಾ ಕಾರ್ಯಕ್ರಮದಲ್ಲಿ ಎಲ್ಲಾ ಶಾಸಕರೂ, ಸಚಿವರು ಭಾಗವಹಿಸಲಿದ್ದಾರೆ ಎಂದು ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್ ಅರುಣ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಫೆ.28ರ ಭಾನುವಾರ ಸಂಜೆ 6 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದ್ದು, ಒಂದು ಗಂಟೆ ಕಾಲಾವಧಿಯ ಈ ಸಮಾರಂಭದಲ್ಲಿ ಮಾಜಿ ಸಭಾಪತಿ ಡಿ.ಎಸ್.ಶಂಕರಮೂರ್ತಿ ಕಾರ್ಯಕ್ರಮ ಉದ್ಘಾಟಿಸಿ ಅಭಿನಂದನಾ ನುಡಿಗಳನ್ನು ನುಡಿಯಲಿದ್ದಾರೆ ಎಂದರು.
ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸಚಿವರಾದ ಕೆ.ಎಸ್. ಈಶ್ವರಪ್ಪ ಹಾಗೂ ಭೈರತಿ ಬಸವರಾಜ್ ರಾಜಕಾರಣದ ತ್ರಿವಿಕ್ರಮ ಪುಸ್ತಕ ಬಿಡುಗಡೆ ಮಾಡಲಿದ್ದಾರೆ ಎಂದು ಹೇಳಿದರು.
ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಕೆ.ಬಿ.ಅಶೋಕ್ ನಾಯ್ಕ್, ಆರಗ ಜ್ಞಾನೇಂದ್ರ, ಆಯನೂರು ಮಂಜುನಾಥ್, ಹಾರತಾಳ ಹಾಲಪ್ಪ, ಎಸ್.ಕುಮಾರ ಬಂಗಾರಪ್ಪ, ಭಾರತಿ ಶೆಟ್ಟಿ , ಸೂಡಾ ಅಧ್ಯಕ್ಷ ಎಸ್.ಎಸ್. ಜ್ಯೋತಿ ಪ್ರಕಾಶ್, ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಮಾ.1ರ ಸೋಮವಾರ ಸಂಜೆ 6 ಗಂಟೆಗೆ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಲಿದ್ದು, ಸಂಸದ ಬಿ.ವೈ.ರಾಘವೇಂದ್ರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮೂಡಬಿದರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಮೋಹನ್ ಆಳ್ವಾ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ವಿವರಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ, ಪಾಲಿಕೆ ಮೇಯರ್ ಸುವರ್ಣ ಶಂಕರ್, ಎಸ್.ದತ್ತಾತ್ರಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಬಿ.ಚನ್ಬವೀರಪ್ಪ, ರಾಜ್ಯ ಕ್ರೀಡಾ ಪ್ರಾಧಿಕಾರ ಉಪಾಧ್ಯಕ್ಷ ಕೆ.ಪಿ.ಪುರುಷರಾಮ್ ಮುಖ್ಯಾತಿಥಿಗಳಾಗ ಆಗಮಿಸುವರು ಎಂದರು.
ವೇದಿಕೆ ಕಾರ್ಯಕ್ರಮದ ನಂತರ ಖ್ಯಾತ ಗಾಯಕ ರಾಜೇಶ್ ಕೃಷ್ಣನ್, ವಿಜಯ ಪ್ರಕಾಶ್, ಖ್ಯಾತ ನಿರೂಪಕಿ ಅನುಶ್ರೀಯವರು ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ವಿಶೇಷ ಕಾರ್ಯಕ್ರಮ ನಡೆಯಲಿದೆ ಎಂದರು.
ಇನ್ನು, ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಉಚಿತವಾಗಿ ಮಾಸ್ಕ್ ಮತ್ತು 40 ಸಾವಿರ ಲಡ್ಡು ವಿತರಣೆ ಮಾಡಲಾಗುತ್ತದೆ.
ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಪಂ ಸಿಇಒ ವೈಶಾಲಿ, ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಉಪಸ್ಥಿತರಿರಲಿದ್ದಾರೆ ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post