ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಸಣ್ಣ ರಸ್ತೆ ಹೊಂಡ ಕೂಡಾ ಮುಚ್ಚಲು ಆಗುತ್ತಿಲ್ಲ. ಸುಮ್ಮನೆ ಅಭಿವೃದ್ಧಿ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿಗಳು ಬೊಬ್ಬೆ ಹೊಡೆಯುತ್ತಿದ್ದಾರೆ. ಈ ಅಭಿವೃದ್ಧಿ ಶೂನ್ಯ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ #B S Yadiyurappa ಹೇಳಿದ್ದಾರೆ.
ಅವರು ಇಂದು ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಭ್ರಷ್ಠ, ಬೇಜಾವಾಬ್ದಾರಿ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯಾದ್ಯಂತ ಹೋರಾಟ ಮಾಡುತ್ತಿದ್ದಾರೆ ನಾನೂ ಕೂಡ ಮುಂದಿನವಾರದಿಂದ ಬೀದಿಗಿಳಿದು ಸರ್ಕಾರದ ವಿರುದ್ಧ ಹೋರಾಟ ನಡೆಸಲಿದ್ದೇನೆ ಎಂದರು.
ಜನಾರ್ಧನ್ ರೆಡ್ಡಿ #Janardhana Reddy ಪತ್ನಿ ಚುನಾವಣೆಗೆ ನಿಲ್ಲುತ್ತಾರೆ ಎಂಬ ಪ್ರಶ್ನೆಗೆ ಈ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದರು.
ಕೇಂದ್ರ ಸರ್ಕಾರ ಟ್ರಂಪ್ #Trump ಅವರಿಗೆ ಮಣಿದಿದೆ. ಮತ್ತು ಕದನವಿರಾಮಕ್ಕೆ ಒಪ್ಪಿಗೆ ನೀಡಿದ್ದಕ್ಕೆ ಟೀಕೆಗಳು ಬರುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮೋದಿ #Modi ಸರ್ಕಾರ ಈಗಾಗಲೇ ಪಾಕಿಸ್ತಾನಕ್ಕೆ #Pakistan ಮೇಲೆಳಲಾಗದಷ್ಟು ಹೊಡೆತ ನೀಡಿದೆ. ಭಾರತದ ಹೋರಾಟಕ್ಕೆ ಯಶಸ್ಸು ಸಿಕ್ಕಿದೆ. ನಮ್ಮ ಸೈನಿಕರು ದೊಡ್ಡ ಸಾಧನೆ ಮಾಡಿದ್ದಾರೆ. ಈಗಾಗಲೇ ಪಾಕಿಸ್ತಾನಕ್ಕೆ ತಕ್ಕಪಾಠ ಕಲಿಸಲಾಗಿದ್ದು, ಟೀಕೆಗಳಿಗೆ ಅರ್ಥವಿಲ್ಲ ಎಂದರು.
ಈಗಾಗಲೇ ಪಾಕಿಸ್ತಾನ ಮೂಲೆ ಗುಂಪಾಗಿದ್ದು, ಭಾರತದ ಸಾಧನೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ ಎಂದರು. ರಾಜ್ಯ ಸರ್ಕಾರದ ಎರಡು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಸಂಭ್ರಮಾಚರಣೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅವರು ಏನು ಬೇಕಾದರೂ ಮಾಡಿಕೊಳ್ಳಲಿ, ನಮಗೆ ಸಂಬಂಧವಿಲ್ಲ ಎಂದರು.
ಈ ಸಂದರ್ಭದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post