ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಗಾಂಧಿ ಬಜಾರ್ನ ಉಪ್ಪಾರಕೇರಿಯ 2ನೇ ತಿರುವಿನಲ್ಲಿರುವ ಬಟ್ಟೆ ಮಾರ್ಕೆಟ್ ನಲ್ಲಿ ಸೋಮವಾರ ರಾತ್ರಿ ಶಾರ್ಟ್ ಸರ್ಕಿಟ್ ನಿಂದ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಸುಮಾರು 7ರಿಂದ 8 ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ,
ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ #K S Eshwarappa ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಷ್ಟವಾದ ವ್ಯಾಪಾರಸ್ಥರಿಗೆ ಸಾಂತ್ವನ ಹೇಳಿ ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದರು.
ಶಾಸಕ ಎಸ್.ಎನ್ ಚನ್ನಬಸಪ್ಪ, ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್, ತಹಶೀಲ್ದಾರ್ ಗಿರೀಶ್, ಹಾಗೂ ಅಧಿಕಾರಿಗಳು ಭೇಟಿ ನೀಡಿ ವಾಸ್ತವಿಕ ಪರಿಸ್ಥಿತಿಯನ್ನು ವೀಕ್ಷಿಸಿದರು.
Also read: ಪುಟ್ಬಾಲ್ ಲೀಗ್: ಜುಲೈ 3ರಂದು ಫೈನಲ್ ಪಂದ್ಯಾವಳಿ
ಈ ಘಟನೆಗೆ ಸಂಬಂಧಿಸಿದಂತೆ ಅಗ್ನಿಶಾಮಕದಳದ ಸಿಬ್ಬಂದಿಯು ತಕ್ಷಣವೇ ಕಾರ್ಯಪ್ರವತ್ತರಾದ ಹಿನ್ನಲೆಯಲ್ಲಿ ದೊಡ್ಡ ಅನಾಹುತ ತಪ್ಪಿದೆ. ಇದಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗೆ ಅಭಿನಂದನೆ ತಿಳಿಸಿದರು. ಮುಂಬರುವ ದಿನಗಳಲ್ಲಿ ಇಂತಹ ಅಗ್ನಿ ಅನಾಹುತಗಳು ಸಂಭವಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಈ ಕುರಿತಂತೆ ರಾಜ್ಯ ಸರ್ಕಾರದೊಂದಿಗೆ ಮಾತುಕತೆ ನಡೆಸಿ ಬೇಕಾಗಿರುವಂತ ಪರಿಹಾರವನ್ನು ಸಂತ್ರಸ್ತರಿಗೆ ಶೀಘ್ರದಲ್ಲೇ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ಶಾಸಕರು ತಿಳಿಸಿದರು.
ಸ್ಥಳಕ್ಕೆ ಪಾಲಿಕೆ ಮಾಜಿ ಸದಸ್ಯ ಹೆಚ್.ಸಿ.ಯೋಗೀಶ್ ಭೇಟಿ ನೀಡಿ ಪರಿಶೀಲಿಸಿ ತಕ್ಷಣ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದರು. ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಭೇಟಿ ನೀಡಿ ನಷ್ಟಕೂಡ ಆಗಿವೆ. ಜಿಲ್ಲಾಡಳಿತವತಿಯಿಂದ ಪರಿಹಾರ ಕೊಡಿಸುವ ಭರವಸೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post