ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಅಡಕೆ ವ್ಯಾಪರಕ್ಕಾಗಿ ಶಿವಮೊಗ್ಗಕ್ಕೆ ಆಗಮಿಸಿದ್ದವರನ್ನು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ತುಂಗಾನಗರ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ 3.15ಲಕ್ಷ ನಗದು ಸೇರಿದಂತೆ ಮೂರು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಮಂಜನಾಯ್ಕ (35), ಆಸೀಫ್ ವುಲ್ಲಾ (32), ಗಣೇಶ್ ನಾಯ್ಕ (28) ದಾವಲ್ ಬಡಗಿ (35) ಮತ್ತು ರಿಜ್ವಾನ್ ಅಹ್ಮದ್ (48) ಬಂಧಿತ ಆರೋಪಿಗಳಾದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರಿನ ಸುರೇಶ್ ಕುಮಾರ್ (೩೦) ಮತ್ತು ಅವರ ಸ್ನೇಹಿತ ಸಂತೋಷ್ ಅಡಕೆ ವ್ಯಾಪಾರ ಮಾಡಿಕೊಂಡಿದ್ದು, ಫೆ.6ರಂದು ಅಡಕೆ ವ್ಯಾಪಾರದ ಸೋಗಿನಲ್ಲಿ ಕರೆಸಿ ಕಿಮ್ಮನೆ ರೆಸಾರ್ಟ್ಗೆ ಹೋಗುವ ದಾರಿಯಲ್ಲಿ 5ಲಕ್ಷ ರೂ. ಕಸಿದುಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾದ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಡಿವೈಎಸ್ಪಿ ಬಾಲರಾಜ್ ಮೇಲ್ವಿಚಾರಣೆಯಲ್ಲಿ ತುಂಗಾನಗರ ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ಪಿಎಸ್ಐ ರಾಜುರೆಡ್ಡಿ ಬೆನ್ನೂರು, ಸಹಾಯಕ ಉಪ ನಿರೀಕ್ಷಕ ಮನೋಹರ್ ಹಾಗೂ ಸಿಬ್ಬಂದಿಗಳಾದ ಹೆಚ್.ಸಿ. ಕಿರಣ್ ಮೋರೆ, ಅರುಣ್ ಕುಮಾರ, ಮೋಹನ್ ಕುಮಾರ್ ಹಾಗೂ ಸಿಪಿಸಿ ನಾಗಪ್ಪ ಅಡಿವಪ್ಪನವರ್, ಹರೀಶ್ ನಾಯ್ಕ, ಲಂಕೇಶ್ ಕುಮಾರ್, ಕಾಂತರಾಜ್, ಅರಿಹಂತ ಶಿರಹಟ್ಟಿ ಮತ್ತು ಹರೀಶ್ ರವರುಗಳನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post