No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Friday, September 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿವಿಧ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಸಚಿವರ ರಾಜೀನಾಮೆಗೆ ಮಾಜಿ ಡಿಸಿಎಂ ಈಶ್ವರಪ್ಪ ಆಗ್ರಹ

kalpa News by kalpa News
October 21, 2023
in ಶಿವಮೊಗ್ಗ
0
ವಿವಿಧ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಸಚಿವರ ರಾಜೀನಾಮೆಗೆ ಮಾಜಿ ಡಿಸಿಎಂ ಈಶ್ವರಪ್ಪ ಆಗ್ರಹ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ DCM DKShivakumar ಸಚಿವರಾದ ಭೈರತಿ ಸುರೇಶ್, ಶರಣಪ್ರಕಾಶ್ ಪಾಟೀಲ್, ಈ ಮೂವರು ವಿವಿಧ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಮುಖ್ಯಮಂತ್ರಿಗಳೇ ಇವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಇಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ KSEshwarappa ಆಗ್ರಹಿಸಿದರು.

ಅವರ ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಡಿ.ಕೆ. ಶಿವಕುಮಾರ್ ಅವರ ಭ್ರಷ್ಟಾಚಾರದ ಬಗ್ಗೆ ಈಗಾಗಲೇ ತನಿಖೆ ನಡೆಯುತ್ತಿದೆ. ಹಾಗೆಯೇ ಸಚಿವ ಭೈರತಿ ಸುರೇಶ್ ಆಪ್ತರು ಎನ್ನಲಾದ ಮೌನೇಶ್, ರಾಘವೇಂದ್ರ ಮುಂತಾದವರು ನಕಲಿ ವೋಟರ್ ಐಡಿ, ಪಾನ್ ಕಾರ್ಡ್, ಆಧಾರ್ ಕಾರ್ಡ್‍ಗಳನ್ನು ಸೃಷ್ಟಿ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಹಾಗೆಯೇ ಶಿವಕುಮಾರ್ ಎಂಬ ಯುವಕ ನನ್ನ ಸಾವಿಗೆ ಸಚಿವ ಶರಣಪ್ರಕಾಶ್ ಪಾಟೀಲ್ ಅವರೇ ಕಾರಣ ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮೂರೂ ಪ್ರಕರಣಗಳು ತುಂಬಾ ಗಂಭೀರವಾದುವು. ಆದ್ದರಿಂದ ಈ ಮೂವರು ಸಚಿವರು ತಕ್ಷಣವೇ ರಾಜೀನಾಮೆ ಕೊಡಬೇಕು ಎಂದರು.
ಡಿ.ಕೆ. ಶಿವಕುಮಾರ್ ತಾನೊಬ್ಬ ಸತ್ಯಹರಿಶ್ಚಂದ್ರ ಎಂಬಂತೆ ಮಾತನಾಡುತ್ತಿದ್ದಾರೆ. ಅವರು ಮತ್ತೊಮ್ಮೆ ಜೈಲಿಗೆ ಹೋಗುವುದರಲ್ಲಿ ಯಾವ ಅನುಮಾನವೂ ಇಲ್ಲ. ಹೀಗೆಂದು ಹೇಳಿದ್ದಕ್ಕೆ ಈಶ್ವರಪ್ಪ ಜಡ್ಜಾ ಎಂದು ಅವರು ಕೇಳಿದ್ದರು. ಆದರೆ ಅವರದೇ ಪಕ್ಷದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಆರೋಪಮುಕ್ತರಾಗಿ ಬರುತ್ತಾರೆ ಎಂದು ಹೇಳಿದ್ದಾರೆ. ಹಾಗಾದರೆ ಅವರು ಜಡ್ಜೇ ಎಂದು ಪ್ರಶ್ನಿಸಿದ ಅವರು, ಇನ್ನು ಮೂರು ತಿಂಗಳೊಳಗೆ ವಿಚಾರಣೆ ಮುಗಿಯುತ್ತದೆ. ಅಷ್ಟರಲ್ಲಿಯೇ ಅವರು ಜೈಲಿಗೆ ಹೋಗುವುದು ಖಚಿತ ಎಂದು ಅವರು ಪುನರುಚ್ಚರಿಸಿದರು.

Also read: ಬಿಗ್‌ನ್ಯೂಸ್ | ಗಗನಯಾನ ಟಿವಿ-ಡಿ1 ಮಿಷನ್‌ ಪರೀಕ್ಷಾ ಹಾರಾಟ ಯಶಸ್ವಿ

ಕಾಂಗ್ರೆಸ್ ಸರ್ಕಾರದಲ್ಲಿ ಏನೆಲ್ಲಾ ಅವಾಂತರಗಳು ನಡೆಯುತ್ತವೆ ಎಂಬುದಕ್ಕೆ ನಕಲಿ ವೋಟ್ ಐಡಿ ಸೃಷ್ಟಿಯೇ ಕಾರಣವಾಗಿದೆ. ಅದರಲ್ಲೂ ಈ ಸೃಷ್ಟಿಕರ್ತರು ಸಚಿವರ ಆಪ್ತರು ಎಂದು ತಿಳಿದುಬಂದಿದೆ. ನಕಲಿ ವೋಟರ್ ಐಡಿ ಮಾಡುವುದು ಸಾಮಾನ್ಯ ವಿಷಯವೇ. ಇದು ಪ್ರಜಾಪ್ರಭುತ್ವದ ವ್ಯವಸ್ಥೆಯ ಮೇಲೆಯೇ ಪರಿಣಾಮ ಬೀರುತ್ತದೆ. ಎಷ್ಟು ವರ್ಷದಿಂದ ಮಾಡುತ್ತಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯ ಉದ್ದೇಶ ಇದಕ್ಕಿದೆಯೇ ಎಂಬುದು ತನಿಖೆಯಾಗಬೇಕು. ಈ ಘಟನೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದರು.

ಹಾಗೆಯೇ ಯುವಕನೊಬ್ಬ ನನ್ನ ಸಾವಿಗೆ ಸಚಿವ ಶರಣ ಪ್ರಕಾಶ್ ಪಾಟೀಲ್ ಕಾರಣ ಎಂದು ಬರೆದಿರುವುದಲ್ಲದೆ ವೀಡಿಯೋ ಕೂಡ ಮಾಡಿದ್ದಾರೆ. ಈ ಹಿಂದೆ ಇಂತಹುದೇ ಘಟನೆಗೆ ಸಂಬಧಿಸಿದಂತೆ ನನ್ನ ಬಗ್ಗೆ ಆರೋಪ ಬಂದಾಗ ನಾನು ತಕ್ಷಣವೇ ರಾಜೀನಾಮೆ ಕೊಟ್ಟಿದ್ದೆ. ಹಾಗೆಯೇ ಶರಣಪ್ರಕಾಶ್ ಪಾಟೀಲ್ ಕೂಡ ರಾಜೀನಾಮೆ ನೀಡಬೇಕು ಎಂದರು.

ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ. ಎಲ್ಲಾ ಭಾಗ್ಯಗಳು ವಿಫಲವಾಗಿವೆ. ಶಿವಮೊಗ್ಗ ದಸರಾಕ್ಕೆ 20 ಲಕ್ಷ ಕೊಡುತ್ತಾರೆ ಎಂದರೆ ಸರ್ಕಾರದ ಸ್ಥಿತಿ ಎಲ್ಲಿಗೆ ಬಂದಿದೆ ಎಂದು ತಿಳಿಯಬಹುದು. ಆ ಹಣ ನಮಗೆ ಬೇಡ. ಶಿವಮೊಗ್ಗದ ಜನರು ನಾವೇ ಸೇರಿ ಹಬ್ಬ ಮಾಡುತ್ತೇವೆ ಎಂದರು.

ಸಚಿವ ಎಂ.ಬಿ. ಪಾಟೀಲ್ ಈಶ್ವರಪ್ಪನವರು ಕಾಂಗ್ರೆಸ್ ಸೇರುತ್ತಾರೆ ಎಂದು ಹೇಳಿದ್ದಾರೆ. ಇದು ಅರ್ಥವಿಲ್ಲದ ಮಾತು. ನಾನು ನನ್ನ ದೇಶ, ಧರ್ಮ, ಪಕ್ಷದ ಮೇಲೆ ನಿಷ್ಠೆ ಇಟ್ಟವನು. ಕಾಂಗ್ರೆಸ್ ಸೇರಿದರೆ ನನ್ನ ತಾಯಿಗೆ ದ್ರೋಹ ಬಗೆದಂತೆ. ಎಂ.ಬಿ.ಪಾಟೀಲ್ ಹಿರಿಯರಿದ್ದಾರೆ. ಅವರು ಕ್ಷಮೆ ಕೇಳಲಿ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ, ಶಿವರಾಜ್, ಸುಧೀಂದ್ರ ಇದ್ದರು.

https://kalpa.news/wp-content/uploads/2023/05/VID-20230516-WA0005.mp4
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಿಗ್‌ನ್ಯೂಸ್ | ಗಗನಯಾನ ಟಿವಿ-ಡಿ1 ಮಿಷನ್‌ ಪರೀಕ್ಷಾ ಹಾರಾಟ ಯಶಸ್ವಿ

Next Post

ಮಾಜಿ ಡಿಸಿಎಂ ಈಶ್ವರಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ವಾಗ್ದಾಳಿ

kalpa News

kalpa News

Next Post
ಕಾದು ನೋಡುವ ತಂತ್ರಕ್ಕೆ ಜಾರಿದ ಆಯನೂರು ಮಂಜುನಾಥ್ ಮುಂದಿನ ನಡೆ ಏನು? ಇಲ್ಲಿದೆ ಮಾಹಿತಿ

ಮಾಜಿ ಡಿಸಿಎಂ ಈಶ್ವರಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ವಾಗ್ದಾಳಿ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL