Saturday, September 27, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಒಂದೇ ದಿನದಲ್ಲಿ 11,786 ಮಹಿಳೆಯರಿಗೆ ಉಚಿತ ಇಸಿಜಿ ಪರೀಕ್ಷೆ | ನಾರಾಯಣ ಹೆಲ್ತ್ ಹೊಸ ದಾಖಲೆ

ಕೇಂದ್ರ ಸರ್ಕಾರ ಸ್ವಸ್ಥ ನಾರಿ, ಸಶಕ್ತ ಪರಿವಾರ ಅಭಿಯಾನದ ಭಾಗವಾಗಿ ನಡೆದ ಯೋಜನೆಗೆ ಅಭೂತಪೂರ್ವ ಪ್ರತಿಕ್ರಿಯೆ

September 18, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಭಾರತದ ಅತ್ಯಂತ ಪ್ರತಿಷ್ಠಿತ ವೈದ್ಯಕೀಯ ಸಂಸ್ಥೆ ಆಗಿರುವ ನಾರಾಯಣ ಹೆಲ್ತ್, #Narayana Health ಕೇಂದ್ರ ಸರ್ಕಾರದ ಸ್ವಸ್ಥ ನಾರಿ, ಸಶಕ್ತ ಪರಿವಾರ ಅಭಿಯಾನದ ಭಾಗವಾಗಿ ಸೆ.17ರಂದು ಒಂದೇ ದಿನದಲ್ಲಿ ತನ್ನ 20ಕ್ಕೂ ಹೆಚ್ಚು ಆಸ್ಪತ್ರೆಗಳಲ್ಲಿ 11,786 ಮಹಿಳೆಯರಿಗೆ ಉಚಿತ ಇಸಿಜಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿ ದಾಖಲೆ ಬರೆದಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ #PM Narendra Modi ಅವರು ದೇಶದ ಮಹಿಳೆಯರು ಮತ್ತು ಮಕ್ಕಳಿಗೆ ಉತ್ತಮ ವೈದ್ಯಕೀಯ ಸೇವೆ ಒದಗಿಸುವ ಉದ್ದೇಶದಿಂದ ಸೆಪ್ಟೆಂಬರ್ 17ರಂದು ಸ್ವಸ್ಥ ನಾರಿ, ಸಶಕ್ತ ಪರಿವಾರ ಅಭಿಯಾನವನ್ನು ಆರಂಭಿಸಿದರು. ಈ ಯೋಜನೆಗೆ ಕೈ ಜೋಡಿಸಿದ ನಾರಾಯಣ ಹೆಲ್ತ್‌ ಈ ಮೂಲಕ ಕೇಂದ್ರ ಸರ್ಕಾರದ ಯೋಜನೆಗಳ ಜೊತೆ ಖಾಸಗಿ ವೈದ್ಯಕೀಯ ಸಂಸ್ಥೆಗಳು ಕೆಲಸ ಮಾಡಬೇಕಾದ ಮಹತ್ವವನ್ನು ಸಾರಿದೆ.
ನಾರಾಯಣ ಹೆಲ್ತ್‌ ನ ಈ ಅಭಿಯಾನದಲ್ಲಿ ಮಹಾನಗರಗಳಿಂದ ಹಿಡಿದು 2ನೇ ಮತ್ತು 3ನೇ ಹಂತದ ನಗರಗಳ ಮಹಿಳೆಯರು ಕೂಡ ಉತ್ಸಾಹದಿಂದ ಭಾಗವಹಿಸಿದರು. ನಾರಾಯಣ ಹೆಲ್ತ್‌ ನ ಆಸ್ಪತ್ರೆಗಳು, ಹಾರ್ಟ್ ಸೆಂಟರ್ ಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಬೆಳಿಗ್ಗೆ 9:00 ರಿಂದ ಸಂಜೆ 5:00 ರವರೆಗೆ ತೆರೆದಿದ್ದು, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಯಾವುದೇ ತೊಡಕು ಉಂಟಾಗದ ರೀತಿಯಲ್ಲಿ ಇಸಿಜಿ ಪರೀಕ್ಷೆಯನ್ನು ನಡೆಸಲಾಯಿತು.

ವಿಶೇಷವೆಂದರೆ ಸಹ್ಯಾದ್ರಿ ನಾರಾಯಣ ನಲ್ಲಿ ಒಂದೇ ದಿನದಲ್ಲಿ350 ಸಂಖ್ಯೆಯ ಇಸಿಜಿ ಪರೀಕ್ಷೆಗಳು ನಡೆಯಿತು.

ಈ ಕುರಿತು ಮಾತನಾಡಿದ ನಾರಾಯಣ ಹೆಲ್ತ್‌ ನ ಸಂಸ್ಥಾಪಕ ಮತ್ತು ಅಧ್ಯಕ್ಷರಾದ ಡಾ. ದೇವಿ ಶೆಟ್ಟಿ ಅವರು, “ಒಂದೇ ದಿನದಲ್ಲಿ 10,000 ಇಸಿಜಿ ಪರೀಕ್ಷೆ ನಡೆಸಿದ್ದು ನಮಗೆ ಖುಷಿ ಕೊಟ್ಟಿದೆ. ಐದು ಸಾವಿರ ಅನ್ನುವುದು ಕೇವಲ ಸಂಖ್ಯೆಯಲ್ಲ, ಬದಲಿದೆ ಇದು ಹೃದಯದ ಆರೋಗ್ಯ ಪಾಲಿಸುವುದು ಮುಖ್ಯ ಎಂದು ಅರಿತುಕೊಂಡು ಆ ನಿಟ್ಟಿನಲ್ಲಿ ಹೆಜ್ಜೆ ಇಟ್ಟ ಮಹಿಳೆಯರ ಯಶಸ್ಸು. ನಾರಾಯಣ ಹೆಲ್ತ್‌ ನಲ್ಲಿ ನಾವು ರೋಗ ತಡೆಗಟ್ಟುವ ಚಿಕಿತ್ಸೆಯೇ ಆರೋಗ್ಯವಂತ ರಾಷ್ಟ್ರದ ಅಡಿಪಾಯ ಎಂದು ನಂಬಿದ್ದೇವೆ ಮತ್ತು ಆ ನಂಬಿಕೆಗೆ ಪೂರಕವಾಗಿ ಸ್ವಸ್ಥ ನಾರಿ, ಸಶಕ್ತ ಪರಿವಾರ ಯೋಜನೆ ಮೂಡಿ ಬಂದಿದೆ” ಎಂದು ಹೇಳಿದರು.
ನಾರಾಯಣ ಹೆಲ್ತ್‌ ನ ಗ್ರೂಪ್ ಸಿಇಓ ಡಾ. ಇಮ್ಯಾನುಯೆಲ್ ರೂಪರ್ಟ್ ಅವರು ಮಾತನಾಡಿ, “ದೇಶಾದ್ಯಂತ ನಾವು ಅಭೂತಪೂರ್ವ ಪ್ರತಿಕ್ರಿಯೆಯನ್ನು ಪಡೆದಿದ್ದೇವೆ. ರೋಗ ತಡೆಗಟ್ಟುವ ಚಿಕಿತ್ಸೆಯ ಕುರಿತು ಜಾಗೃತಿ ಹೆಚ್ಚುತ್ತಿರುವುದಕ್ಕೆ ಈ ಅದ್ಭುತ ಪ್ರತಿಕ್ರಿಯೆಯೇ ಸಾಕ್ಷಿಯಾಗಿದೆ. ಈ ಮೂಲಕ ನಾವು ಕೇವಲ ಪ್ರಮುಖ ನಗರಗಳ ಮಹಿಳೆಯರನ್ನು ಮಾತ್ರವೇ ತಲುಪಿಲ್ಲ, ಬದಲಿಗೆ ಚಿಕ್ಕ ಪಟ್ಟಣಗಳ ಮಹಿಳೆಯರೂ ಇಸಿಜಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮಾಡಿದ್ದೇವೆ. 20ಕ್ಕೂ ಹೆಚ್ಚು ಆಸ್ಪತ್ರೆಗಳಲ್ಲಿನ ನಮ್ಮ ತಂಡಗಳು ಈ ಯೋಜನೆಯನ್ನು ಯಶಸ್ವಿಗೊಳಿಸಲು ದಣಿವರಿಯದೆ ಶ್ರಮಿಸಿವೆ. ಈ ಯಶಸ್ಸು ನಾರಾಯಣ ಹೆಲ್ತ್‌ ನ ಸಾಮರ್ಥ್ಯವನ್ನು ತೋರಿಸಿಕೊಟ್ಟಿದೆ” ಎಂದು ಹೇಳಿದರು.

ಭಾರತದಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಂದ ಶೇ.25ರಷ್ಟು ಸಾವುಗಳು ಉಂಟಾಗುತ್ತಿದ್ದು, ಇದರಲ್ಲಿ ಬಹುಪಾಲು ಮಹಿಳೆಯರೇ ಇದ್ದಾರೆ. ಗ್ಲೋಬಲ್ ಬರ್ಡನ್ ಆಫ್ ಡಿಸೀಸ್ ಸ್ಟಡಿಯ ಪ್ರಕಾರ ಭಾರತದ ಮಹಿಳೆಯರಲ್ಲಿ ಉಂಟಾಗುತ್ತಿರುವ ಸಾವಿಗೆ ಹೃದಯ ಕಾಯಿಲೆಯೇ ಪ್ರಮುಖ ಕಾರಣವಾಗಿದೆ. ಶೇ.18ರಷ್ಟು ಮಹಿಳೆಯರು ಹೃದಯ ಸಮಸ್ಯೆಯಿಂದ ಇಹಲೋಕ ತ್ಯಜಿಸುತ್ತಿದ್ದಾರೆ. ಹೀಗಾಗಿ ಮಹಿಳೆಯರ ಆರೋಗ್ಯ ರಕ್ಷಣೆ ಕಡೆಗೆ ಗಮನ ಹರಿಸಿರುವ ನಾರಾಯಣ ಹಾಸ್ಪಿಟಲ್ ಈ ಮಹತ್ವದ ಕ್ರಮ ಕೈಗೊಂಡಿದೆ.

ಉಚಿತ ಇಸಿಜಿ ಅಭಿಯಾನವು ನಾರಾಯಣ ಹೆಲ್ತ್‌ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದೆ. 2023ರಲ್ಲಿ ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿಯು ಒಂದೇ ಸ್ಥಳದಲ್ಲಿ 24 ಗಂಟೆಗಳಲ್ಲಿ 3,797 ಇಸಿಜಿಗಳನ್ನು ನಡೆಸಿ ಗಿನ್ನಿಸ್ ವಿಶ್ವ ದಾಖಲೆಯನ್ನು ಸ್ಥಾಪಿಸಿತ್ತು. ಇದೀಗ ನಾರಾಯಣ ಹೆಲ್ತ್ ತನ್ನ ದಾಖಲೆಯನ್ನು ತಾನೇ ಮುರಿದು ಹೊಸ ದಾಖಲೆ ಬರೆದಿದೆ.
ನಾರಾಯಣ ಹೆಲ್ತ್ ಕುರಿತು:

ಡಾ. ದೇವಿ ಶೆಟ್ಟಿ ಸ್ಥಾಪಿಸಿರುವ ನಾರಾಯಣ ಹೆಲ್ತ್ ಸಂಸ್ಥೆಯ ಕೇಂದ್ರ ಕಚೇರಿ ಬೆಂಗಳೂರಿನಲ್ಲಿದೆ ಮತ್ತು ಈ ಸಂಸ್ಥೆಯು ಜಾಗತಿಕ ಮಟ್ಟದ ವೈದ್ಯಕೀಯ ಸೇವಾ ಕ್ಷೇತ್ರದಲ್ಲಿ ಪ್ರಮುಖ ಸ್ಥಾನವನ್ನು ಪಡೆದಿದೆ. ಭಾರತದ ಅತಿದೊಡ್ಡ ವೈದ್ಯಕೀಯ ಸೇವೆ ಒದಗಿಸುವ ಸಂಸ್ಥೆಗಳಲ್ಲಿ ಒಂದಾಗಿರುವ ನಾರಾಯಣ ಹೆಲ್ತ್ ಸಂಸ್ಥೆಯು ಭಾರತ ಮತ್ತು ಕೆರಿಬಿಯನ್‌ ಪ್ರದೇಶಗಳಲ್ಲಿ ಪ್ರಾಥಮಿಕ, ದ್ವಿತೀಯ ಹಂತದ ಮತ್ತು ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ಸೇವೆಗಳನ್ನು ಒದಗಿಸುತ್ತಾ ಬಂದಿದ್ದು, ಬಹಳ ಪ್ರಸಿದ್ಧವಾಗಿದೆ. ಸಂಸ್ಥೆಯು ವಿವಿಧ ವೈದ್ಯಕೀಯ ವಿಭಾಗಗಳಲ್ಲಿ ಗುಣಮಟ್ಟದ ಕೇಂದ್ರಗಳು ಮತ್ತು 18,822ರಷ್ಟು ವೃತ್ತಿಪರರ ತಂಡವನ್ನು ಹೊಂದಿದೆ. ಇದರಲ್ಲಿ 3,868 ನುರಿತ ವೈದ್ಯರು ಮತ್ತು ತಜ್ಞರು ಇದ್ದಾರೆ. ಅತ್ಯುತ್ತಮ ಸೌಲಭ್ಯ ಮತ್ತು ತಂಡಗಳ ಮೂಲಕ ಉತ್ಕೃಷ್ಟ ಮಟ್ಟದ ವೈದ್ಯಕೀಯ ಸೇವೆ ಒದಗಿಸುತ್ತಿದೆ.

ನಾರಾಯಣ ಒನ್ ಹೆಲ್ತ್ (ಎನ್‌ಎಚ್ ಇಂಟಿಗ್ರೇಟೆಡ್ ಕೇರ್) ಮತ್ತು ನಾರಾಯಣ ಹೆಲ್ತ್ ಇನ್ಶೂರೆನ್ಸ್ ಇವು ನಾರಾಯಣ ಹೆಲ್ತ್‌ ನ ಅಂಗಸಂಸ್ಥೆಗಳಾಗಿವೆ.

ಹೆಚ್ಚಿನ ಮಾಹಿತಿಗಾಗಿ, ಭೇಟಿ ನೀಡಿ: https://www.narayanahealth.org/

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNarayana HealthNews in KannadaNews KannadaPM Narendra ModiShimogaShivamoggaNewsನಾರಾಯಣ ಹೆಲ್ತ್ಪ್ರಧಾನ ಮಂತ್ರಿ ನರೇಂದ್ರ ಮೋದಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

Robotic Nephrectomy Brings Relief to Patient with Rare Kidney Condition

Next Post

ರಾಜ್ಯ ಸರ್ಕಾರ ರೈತರ ಸಾಲಮನ್ನಾ, ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡ್ಬೇಕು: ನಿಖಿಲ್ ಕುಮಾರಸ್ವಾಮಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರಾಜ್ಯ ಸರ್ಕಾರ ರೈತರ ಸಾಲಮನ್ನಾ, ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡ್ಬೇಕು: ನಿಖಿಲ್ ಕುಮಾರಸ್ವಾಮಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಹಿಂದೂ ಅವಿಭಜಿತ ಕುಟುಂಬದ ಯಜಮಾನನಿಗೆ ಆಸ್ತಿ ಮಾರಲು ಅಧಿಕಾರವಿದೆ: ಸುಪ್ರೀಂ ಕೋರ್ಟ್ ಹೇಳಿರುವುದೇನು?

September 27, 2025

ನವರಾತ್ರಿ | ಕಾತ್ಯಾಯನಿ ವ್ರತದ ಮಹತ್ವವೇನು?

September 27, 2025

ಸೆ.28ರಂದು ಗಮಕ ದಸರಾ | ರಾಜ್ಯಮಟ್ಟದ ಗಮಕವಾಚನ ಸ್ಪರ್ಧೆ

September 26, 2025

ಹುಬ್ಬಳ್ಳಿ | ಕೆಳಸೇತುವೆಯಲ್ಲಿ ಕಲಾತ್ಮಕ ಅಲಂಕಾರ ಮಾಡಿ ಮಾದರಿಯಾದ ರೈಲ್ವೆ ಅಧಿಕಾರಿಗಳು

September 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಹಿಂದೂ ಅವಿಭಜಿತ ಕುಟುಂಬದ ಯಜಮಾನನಿಗೆ ಆಸ್ತಿ ಮಾರಲು ಅಧಿಕಾರವಿದೆ: ಸುಪ್ರೀಂ ಕೋರ್ಟ್ ಹೇಳಿರುವುದೇನು?

September 27, 2025

ನವರಾತ್ರಿ | ಕಾತ್ಯಾಯನಿ ವ್ರತದ ಮಹತ್ವವೇನು?

September 27, 2025

ಸೆ.28ರಂದು ಗಮಕ ದಸರಾ | ರಾಜ್ಯಮಟ್ಟದ ಗಮಕವಾಚನ ಸ್ಪರ್ಧೆ

September 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!